ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಕೇಂದ್ರದಲ್ಲಿ ಮೊಟ್ಟ ಮೊದಲ ಬಾರಿಗೆ ಕ್ಯಾಬಿನೆಟ್ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ತಾಲೂಕಿನ ಘಾಟಿ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಅಭಿಮಾನಿಗಳು 101 ತೆಂಗಿನಕಾಯಿ ಒಡೆದು ದೇವರಲ್ಲಿ ಹರಕೆ ತೀರಿಸಿದರು.
ಘಾಟಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದೆ ನಡೆದ ಚುನಾವಣೆಯ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೇಂದ್ರದಲ್ಲಿ ಮಂತ್ರಿಯಾಗಿ ಅಯ್ಕೆಯಾದರೆ ಸುಬ್ರಹ್ಮಣ್ಯ ದೇವರಿಗೆ 101 ತೆಂಗಿನಕಾಯಿ ಒಡೆಯುವುದಾಗಿ ಹರಕೆ ಮಾಡಿಕೊಂಡಿದ್ದ ಅಭಿಮಾನಿಗಳು, ಸೋಮವಾರ ಬೆಳಗ್ಗೆ ದೇವಾಲಯದ ಮುಂಭಾಗದಲ್ಲಿ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅಪ್ಪಯ್ಯಣ್ಣನವರ ನೇತೃತ್ವದಲ್ಲಿ , ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ನೂರೊಂದು ತೆಂಗಿನಕಾಯಿ ಒಡೆದು ಹರಕೆ ತೀರಿಸಿದರು.
ಮಾಜಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅಪ್ಪಯ್ಯಣ್ಣನವರು ಮಾತನಾಡಿ, ಕೇಂದ್ರದಲ್ಲಿ ಎನ್.ಡಿ.ಎ ಸರ್ಕಾರ ಬಂದಿರುವುದು ಹಾಗೂ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಿರುವುದರ ಜೊತೆಗೆ ನಮ್ಮ ನಾಯಕರದ ಕುಮಾರಸ್ವಾಮಿಯವರು ಕೇಂದ್ರದಲ್ಲಿ ಮಂತ್ರಿ ಆಗಿರುವುದು ನಮಗೆ ಬಹಳ ಸಂತೋಷವಾಗಿದೆ ಎಂದರು.
ಈ ವೇಳೆ ಹಳ್ಳಿ ರೈತ ಅಂಬರೀಷ್, ಜೆಡಿಎಸ್ ಯುವ ಮುಖಂಡ ಉದಯ್ ಆರಾಧ್ಯ, ಶ್ರೀಧರ್, ಹಾಗೂ ಕುಮಾರಸ್ವಾಮಿ ಅಭಿಮಾನಿಗಳು ಹಾಜರಿದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…