ಎಟಿಎಂನಿಂದ ಹಣ ಬಾರದಿದ್ದರೆ, ಯಾರೋ ಕಳ್ಳರು ನಿಮ್ಮ ಹಣಕ್ಕೆ ಕನ್ನ ಹಾಕಿದ್ದಾರೆ ಎಂದು ಅರ್ಥ ಮಾಡಿಕೊಳ್ಳಬೇಕು. ಚಿಕ್ಕಬಳ್ಳಾಪುರದಲ್ಲಿ ಎಟಿಎಂ ಯಂತ್ರಕ್ಕೆ ವಿಶೇಷ ಸಾಧನ ಅಳವಡಿಸಿ, ಗ್ರಾಹಕರು ಡ್ರಾ ಮಾಡಿದ ಹಣವನ್ನು ದೋಚುತ್ತಿದ್ದ ಚಾಲಾಕಿ ಕಳ್ಳನನ್ನು ಚಿಕ್ಕಬಳ್ಳಾಪುರ ನಗರ ಪೊಲೀಸರು ಇದೀಗ ಬಂಧಿಸಿದ್ದಾರೆ.
ಏನಿದು ಹೊಸ ಮಾದರಿಯ ಕಳ್ಳತನ? ಯಾರು ಈ ಆರೋಪಿ? ನೋಡೋಣ ಬನ್ನಿ….
ಚಿಕ್ಕಬಳ್ಳಾಪುರ ನಗರದ ಬಿ.ಬಿ. ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಏಪ್ರಿಲ್ 11 ರ ರಾತ್ರಿ ಸಿನಿಮೀಯ ರೀತಿಯ ಕಳ್ಳತನ ನಡೆದಿದೆ. ಕಳ್ಳರು ಎಟಿಎಂನಿಂದ ಹಣ ಹೊರಬರುವ ಜಾಗಕ್ಕೆ ಒಂದು ಸಾಧನವನ್ನು ಅಳವಡಿಸಿದ್ದಾರೆ. ಗ್ರಾಹಕರು ಹಣ ಡ್ರಾ ಮಾಡಿದಾಗ, ನೋಟುಗಳು ಹೊರಬರುವ ಬದಲು ಆ ಸಾಧನದೊಳಗೆ ಸಿಲುಕಿಕೊಳ್ಳುತ್ತಿದ್ದವು. ಹಣ ಬರಲಿಲ್ಲವೆಂದು ತಿಳಿದು ಗ್ರಾಹಕರು ಅಲ್ಲಿಂದ ಹೊರಟುಹೋದ ನಂತರ, ಕಳ್ಳರು ಎಟಿಎಂಗೆ ಬಂದು ಸಾಧನದಲ್ಲಿ ಸಿಕ್ಕಿಹಾಕಿಕೊಂಡಿದ್ದ ಅಂದಾಜು 2 ಲಕ್ಷ ರೂಪಾಯಿ ಹಣವನ್ನು ದೋಚಿ ಪರಾರಿಯಾಗಿದ್ದರು.
ಕೆನರಾ ಬ್ಯಾಂಕ್ ಎಟಿಎಂ ಕಳ್ಳತನ ಪ್ರಕರಣದ ದೂರಿನ ಅನ್ವಯ, ಪೊಲೀಸರು ವಿಶೇಷ ತಂಡ ರಚಿಸಿಕೊಂಡು ತಾಂತ್ರಿಕ ಸಾಕ್ಷ್ಯಗಳನ್ನು ಆಧರಿಸಿ ತನಿಖೆ ಕೈಗೊಂಡಿದ್ದರು. ಆರೋಪಿಯು ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿರುವುದು ಪತ್ತೆಯಾಯಿತು. ಪೊಲೀಸರ ತಂಡ ಬೆಂಗಳೂರಿಗೆ ತೆರಳಿ, ತ್ರಿಪುರಾ ಮೂಲದ ನಿಯಾಜ್ ಉದ್ದೀನ್ ಎಂಬ 20 ವರ್ಷದ ಯುವಕನನ್ನು ಬಂಧಿಸಿದೆ.
ಈತ ಇದೇ ರೀತಿ ಇನ್ನೊಂದು ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ಒಪ್ಪಿಕೊಂಡಿದ್ದಾನೆ. ಆತನಿಂದ 15 ಸಾವಿರ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ. ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಒಟ್ಟಿನಲ್ಲಿ, ಹೊಸ ತಂತ್ರ ಬಳಸಿ ಎಟಿಎಂ ದೋಚುತ್ತಿದ್ದ ಖದೀಮನನ್ನು ಬಂಧಿಸುವಲ್ಲಿ ಚಿಕ್ಕಬಳ್ಳಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೆ, ಈ ಘಟನೆ ಎಟಿಎಂ ಬಳಸುವ ಸಾರ್ವಜನಿಕರಿಗೆ ಒಂದು ಎಚ್ಚರಿಕೆಯ ಗಂಟೆಯಾಗಿದೆ. ಎಟಿಎಂ ಬಳಸುವಾಗ ಹಣ ಬರದಿದ್ದರೆ, ತಕ್ಷಣವೇ ಬ್ಯಾಂಕಿನ ಸಹಾಯವಾಣಿಗೆ ಅಥವಾ ಪೊಲೀಸರಿಗೆ ಮಾಹಿತಿ ನೀಡುವುದು ಅತ್ಯಗತ್ಯ.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…