ಎಟಿಎಂನಲ್ಲಿ ಹೊಸ ತಂತ್ರ ಬಳಸಿ ಕಳ್ಳತನ: ಓರ್ವ ಬಂಧನ

ಎಟಿಎಂನಿಂದ ಹಣ ಬಾರದಿದ್ದರೆ, ಯಾರೋ ಕಳ್ಳರು ನಿಮ್ಮ ಹಣಕ್ಕೆ ಕನ್ನ ಹಾಕಿದ್ದಾರೆ ಎಂದು ಅರ್ಥ ಮಾಡಿಕೊಳ್ಳಬೇಕು. ಚಿಕ್ಕಬಳ್ಳಾಪುರದಲ್ಲಿ ಎಟಿಎಂ ಯಂತ್ರಕ್ಕೆ ವಿಶೇಷ ಸಾಧನ ಅಳವಡಿಸಿ, ಗ್ರಾಹಕರು ಡ್ರಾ ಮಾಡಿದ ಹಣವನ್ನು ದೋಚುತ್ತಿದ್ದ ಚಾಲಾಕಿ ಕಳ್ಳನನ್ನು ಚಿಕ್ಕಬಳ್ಳಾಪುರ ನಗರ ಪೊಲೀಸರು ಇದೀಗ ಬಂಧಿಸಿದ್ದಾರೆ.

ಏನಿದು ಹೊಸ ಮಾದರಿಯ ಕಳ್ಳತನ? ಯಾರು ಈ ಆರೋಪಿ? ನೋಡೋಣ ಬನ್ನಿ….

ಚಿಕ್ಕಬಳ್ಳಾಪುರ ನಗರದ ಬಿ.ಬಿ. ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಏಪ್ರಿಲ್ 11 ರ ರಾತ್ರಿ ಸಿನಿಮೀಯ ರೀತಿಯ ಕಳ್ಳತನ ನಡೆದಿದೆ. ಕಳ್ಳರು ಎಟಿಎಂನಿಂದ ಹಣ ಹೊರಬರುವ ಜಾಗಕ್ಕೆ ಒಂದು ಸಾಧನವನ್ನು ಅಳವಡಿಸಿದ್ದಾರೆ. ಗ್ರಾಹಕರು ಹಣ ಡ್ರಾ ಮಾಡಿದಾಗ, ನೋಟುಗಳು ಹೊರಬರುವ ಬದಲು ಆ ಸಾಧನದೊಳಗೆ ಸಿಲುಕಿಕೊಳ್ಳುತ್ತಿದ್ದವು. ಹಣ ಬರಲಿಲ್ಲವೆಂದು ತಿಳಿದು ಗ್ರಾಹಕರು ಅಲ್ಲಿಂದ ಹೊರಟುಹೋದ ನಂತರ, ಕಳ್ಳರು ಎಟಿಎಂಗೆ ಬಂದು ಸಾಧನದಲ್ಲಿ ಸಿಕ್ಕಿಹಾಕಿಕೊಂಡಿದ್ದ ಅಂದಾಜು 2 ಲಕ್ಷ ರೂಪಾಯಿ ಹಣವನ್ನು ದೋಚಿ ಪರಾರಿಯಾಗಿದ್ದರು.

ಕೆನರಾ ಬ್ಯಾಂಕ್ ಎಟಿಎಂ ಕಳ್ಳತನ ಪ್ರಕರಣದ ದೂರಿನ ಅನ್ವಯ, ಪೊಲೀಸರು ವಿಶೇಷ ತಂಡ ರಚಿಸಿಕೊಂಡು ತಾಂತ್ರಿಕ ಸಾಕ್ಷ್ಯಗಳನ್ನು ಆಧರಿಸಿ ತನಿಖೆ ಕೈಗೊಂಡಿದ್ದರು. ಆರೋಪಿಯು ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿರುವುದು ಪತ್ತೆಯಾಯಿತು. ಪೊಲೀಸರ ತಂಡ ಬೆಂಗಳೂರಿಗೆ ತೆರಳಿ, ತ್ರಿಪುರಾ ಮೂಲದ ನಿಯಾಜ್ ಉದ್ದೀನ್ ಎಂಬ 20 ವರ್ಷದ ಯುವಕನನ್ನು ಬಂಧಿಸಿದೆ.

ಈತ ಇದೇ ರೀತಿ ಇನ್ನೊಂದು ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ಒಪ್ಪಿಕೊಂಡಿದ್ದಾನೆ. ಆತನಿಂದ 15 ಸಾವಿರ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ. ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಟ್ಟಿನಲ್ಲಿ, ಹೊಸ ತಂತ್ರ ಬಳಸಿ ಎಟಿಎಂ ದೋಚುತ್ತಿದ್ದ ಖದೀಮನನ್ನು ಬಂಧಿಸುವಲ್ಲಿ ಚಿಕ್ಕಬಳ್ಳಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೆ, ಈ ಘಟನೆ ಎಟಿಎಂ ಬಳಸುವ ಸಾರ್ವಜನಿಕರಿಗೆ ಒಂದು ಎಚ್ಚರಿಕೆಯ ಗಂಟೆಯಾಗಿದೆ. ಎಟಿಎಂ ಬಳಸುವಾಗ ಹಣ ಬರದಿದ್ದರೆ, ತಕ್ಷಣವೇ ಬ್ಯಾಂಕಿನ ಸಹಾಯವಾಣಿಗೆ ಅಥವಾ ಪೊಲೀಸರಿಗೆ ಮಾಹಿತಿ ನೀಡುವುದು ಅತ್ಯಗತ್ಯ.

Ramesh Babu

Journalist

Recent Posts

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

6 hours ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

9 hours ago

Instant Play Casino

Instant play casinos allow you to play casino games online without installing any software. These…

1 day ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

1 day ago

ಬಡಪಾಯಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಆರೋಪ

ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…

1 day ago

Facharbeit Schreiben_ Ein Leitfaden für Schüler und Studenten(2)

Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…

1 day ago