ಬೈಂದೂರು ಠಾಣಾ ವ್ಯಾಪ್ತಿಯ ಎಟಿಎಂ ಕೇಂದ್ರಗಳಲ್ಲಿ ಜನರಿಗೆ ಸಹಕಾರ ನೀಡುವ ನೆಪ ಹೇಳಿ ವಂಚಿಸಿ ಎಟಿಎಂ ಕಾರ್ಡ್ ಬದಲಾಯಿಸಿ ಹಣ ಡ್ರಾ ಮಾಡುತ್ತಿದ್ದ ಅಂತಾರಾಜ್ಯ ಆರೋಪಿಗಳನ್ನು ಬಂಧಿಸುವಲ್ಲಿ ಬೈಂದೂರು ಠಾಣೆ ಪಿಎಸ್ಐ ಹಾಗೂ ತಂಡ ಯಶಸ್ವಿಯಾಗಿದ್ದಾರೆ.
ಜ.10 ರಂದು ಕುಂದಾಪುರದಲ್ಲಿ ಹರಿಯಾಣ ರಾಜ್ಯದ ಬರ್ಸಿ ಜಟಾನ್ ಮೂಲದ ಸಂದೀಪ(36), ಹಾಗೂ ಔರಂಗನಗರ ಮೂಲದ ರವಿ(27), ಎಂಬ ಆರೋಪಿಗಳನ್ನ ಬಂಧಿಸಿ, ಬಂಧಿತರಿಂದ 21 ಸಾವಿರ ಹಣ, 217ಎಟಿಎಂ ಕಾರ್ಡ್ ಗಳನ್ನ ವಶಕ್ಕೆ ಪಡೆಯಲಾಗಿದೆ.
ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಿರೂರು ಗ್ರಾಮದ ಶಿರೂರು ಅರ್ಬನ್ ಬ್ಯಾಂಕಿನ ಎಟಿಎಂ, ಶಿರೂರು ಕೆನರಾ ಬ್ಯಾಂಕ್ ಎಟಿಎಂ ಹಾಗೂ ಬೈಂದೂರು ಎಸ್ ಬಿಐ ಬ್ಯಾಂಕ್ ಎಟಿಎಂ ನಲ್ಲಿ ಗ್ರಾಹಕರ ಸೋಗಿನಲ್ಲಿ ಎಟಿಎಂ ಒಳಗಡೆ ಹೋಗಿ ಜನರಿಗೆ ಸಹಕರಿಸುವಂತೆ ನಟಿಸಿ, ಮೋಸ ಮಾಡಿ ಎಟಿಎಂ ಕಾರ್ಡ್ ತೆಗೆದುಕೊಂಡು ಮತ್ತೆ ಅದನ್ನ ಅದಲುಬದಲು ಮಾಡಿ, ಜನರಿಂದ ಪಡೆದಿದ್ದ ಎಟಿಎಂ ಕಾರ್ಡ್ ಬಳಸಿ 2,26,000 ಹಣವನ್ನ ವಿತ್ ಡ್ರಾ ಮಾಡಿಕೊಂಡು ಹೋಗಿರುತ್ತಾರೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಒಟ್ಟು ಮೂರು ಪ್ರಕರಣಗಳು ದಾಖಲಾಗಿದ್ದು, ಪ್ರಕರಣದಲ್ಲಿ ಆರೋಪಿಗಳ ಪತ್ತೆ ಮಾಡಲು ವಿಶೇಷ ತಂಡವನ್ನು ರಚನೆ ಆರೋಪಿಗಳನ್ನ ಬಂಧನ ಮಾಡಲಾಗಿದೆ. ಈ ಆರೋಪಿಗಳ ಮೇಲೆ ವಿವಿಧ ರಾಜ್ಯಗಳಲ್ಲಿ 20ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…