Categories: ಉಡುಪಿ

ಎಟಿಎಂ ಕೇಂದ್ರಗಳಲ್ಲಿ ಜನರಿಗೆ ಸಹಕಾರ ನೀಡುವ ನೆಪ ಹೇಳಿ ವಂಚನೆ: ಎಟಿಎಂ‌ ಕಾರ್ಡ್ ಬಳಸಿ 2,26,000 ಹಣವನ್ನ ವಿತ್ ಡ್ರಾ‌ : ಅಂತಾರಾಜ್ಯ ಇಬ್ಬರು ಆರೋಪಿಗಳ ಬಂಧನ: 217‌ಎಟಿಎಂ ಕಾರ್ಡ್ ಗಳನ್ನ ವಶಕ್ಕೆ ಪಡೆದ ಪೊಲೀಸರು

ಬೈಂದೂರು ಠಾಣಾ ವ್ಯಾಪ್ತಿಯ ಎಟಿಎಂ ಕೇಂದ್ರಗಳಲ್ಲಿ ಜನರಿಗೆ ಸಹಕಾರ ನೀಡುವ ನೆಪ ಹೇಳಿ ವಂಚಿಸಿ ಎಟಿಎಂ ಕಾರ್ಡ್ ಬದಲಾಯಿಸಿ ಹಣ ಡ್ರಾ ಮಾಡುತ್ತಿದ್ದ ಅಂತಾರಾಜ್ಯ ಆರೋಪಿಗಳನ್ನು ಬಂಧಿಸುವಲ್ಲಿ ಬೈಂದೂರು ಠಾಣೆ ಪಿಎಸ್ಐ ಹಾಗೂ ತಂಡ ಯಶಸ್ವಿಯಾಗಿದ್ದಾರೆ.

ಜ.10 ರಂದು ಕುಂದಾಪುರದಲ್ಲಿ ಹರಿಯಾಣ ರಾಜ್ಯದ ಬರ್ಸಿ ಜಟಾನ್ ಮೂಲದ ಸಂದೀಪ(36), ಹಾಗೂ ಔರಂಗನಗರ ಮೂಲದ ರವಿ(27), ಎಂಬ ಆರೋಪಿಗಳನ್ನ ಬಂಧಿಸಿ, ಬಂಧಿತರಿಂದ 21 ಸಾವಿರ ಹಣ, 217‌ಎಟಿಎಂ ಕಾರ್ಡ್ ಗಳನ್ನ ವಶಕ್ಕೆ ಪಡೆಯಲಾಗಿದೆ.

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಿರೂರು ಗ್ರಾಮದ ಶಿರೂರು ಅರ್ಬನ್ ಬ್ಯಾಂಕಿನ ಎಟಿಎಂ, ಶಿರೂರು ಕೆನರಾ ಬ್ಯಾಂಕ್ ಎಟಿಎಂ ಹಾಗೂ ಬೈಂದೂರು ಎಸ್ ಬಿಐ‌ ಬ್ಯಾಂಕ್ ಎಟಿಎಂ ನಲ್ಲಿ ಗ್ರಾಹಕರ ಸೋಗಿನಲ್ಲಿ ಎಟಿಎಂ ಒಳಗಡೆ ಹೋಗಿ ಜನರಿಗೆ ಸಹಕರಿಸುವಂತೆ ನಟಿಸಿ, ಮೋಸ ಮಾಡಿ ಎಟಿಎಂ ಕಾರ್ಡ್ ತೆಗೆದುಕೊಂಡು ಮತ್ತೆ ಅದನ್ನ ಅದಲುಬದಲು ಮಾಡಿ, ಜನರಿಂದ ಪಡೆದಿದ್ದ ಎಟಿಎಂ‌ ಕಾರ್ಡ್ ಬಳಸಿ 2,26,000 ಹಣವನ್ನ ವಿತ್ ಡ್ರಾ‌ ಮಾಡಿಕೊಂಡು ಹೋಗಿರುತ್ತಾರೆ.

ಈ  ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಒಟ್ಟು ಮೂರು ಪ್ರಕರಣಗಳು ದಾಖಲಾಗಿದ್ದು, ಪ್ರಕರಣದಲ್ಲಿ ಆರೋಪಿಗಳ ಪತ್ತೆ ಮಾಡಲು ವಿಶೇಷ ತಂಡವನ್ನು ರಚನೆ ಆರೋಪಿಗಳನ್ನ ಬಂಧನ ಮಾಡಲಾಗಿದೆ. ಈ ಆರೋಪಿಗಳ ಮೇಲೆ ವಿವಿಧ ರಾಜ್ಯಗಳಲ್ಲಿ 20ಕ್ಕೂ  ಹೆಚ್ಚು ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.

Ramesh Babu

Journalist

Recent Posts

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

1 hour ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

2 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

5 hours ago

ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಸೌಕರ್ಯ ಕೊರತೆ: ಜನ ಹೈರಾಣ

ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…

8 hours ago

ಮಾದಕ ದ್ರವ್ಯ ಮುಕ್ತ ಕರ್ನಾಟಕ ನಿರ್ಮಾಣಕ್ಕಾಗಿ ಕಟ್ಟುನಿಟ್ಟಿನ ಕ್ರಮ

ಇಂದು ವಿಕಾಸಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಹಿರಿಯ ಪೊಲೀಸ್‌ ಅಧಿಕಾರಿಗಳು ಹಾಗೂ ವಿವಿಧ ಇಲಾಖಾ ಮುಖ್ಯಸ್ಥರ ಸಮ್ಮುಖದಲ್ಲಿ ನಡೆದ ಪರಿಶೀಲನಾ…

19 hours ago

ಬೈಕ್ ಗೆ ಕಾರು ಡಿಕ್ಕಿ: ಹಲವರಿಗೆ ಗಂಭೀರ ಗಾಯ

ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಬಳಿ‌‌ ನಡೆದಿದೆ..…

22 hours ago