Categories: ಉಡುಪಿ

ಎಟಿಎಂ ಕೇಂದ್ರಗಳಲ್ಲಿ ಜನರಿಗೆ ಸಹಕಾರ ನೀಡುವ ನೆಪ ಹೇಳಿ ವಂಚನೆ: ಎಟಿಎಂ‌ ಕಾರ್ಡ್ ಬಳಸಿ 2,26,000 ಹಣವನ್ನ ವಿತ್ ಡ್ರಾ‌ : ಅಂತಾರಾಜ್ಯ ಇಬ್ಬರು ಆರೋಪಿಗಳ ಬಂಧನ: 217‌ಎಟಿಎಂ ಕಾರ್ಡ್ ಗಳನ್ನ ವಶಕ್ಕೆ ಪಡೆದ ಪೊಲೀಸರು

ಬೈಂದೂರು ಠಾಣಾ ವ್ಯಾಪ್ತಿಯ ಎಟಿಎಂ ಕೇಂದ್ರಗಳಲ್ಲಿ ಜನರಿಗೆ ಸಹಕಾರ ನೀಡುವ ನೆಪ ಹೇಳಿ ವಂಚಿಸಿ ಎಟಿಎಂ ಕಾರ್ಡ್ ಬದಲಾಯಿಸಿ ಹಣ ಡ್ರಾ ಮಾಡುತ್ತಿದ್ದ ಅಂತಾರಾಜ್ಯ ಆರೋಪಿಗಳನ್ನು ಬಂಧಿಸುವಲ್ಲಿ ಬೈಂದೂರು ಠಾಣೆ ಪಿಎಸ್ಐ ಹಾಗೂ ತಂಡ ಯಶಸ್ವಿಯಾಗಿದ್ದಾರೆ.

ಜ.10 ರಂದು ಕುಂದಾಪುರದಲ್ಲಿ ಹರಿಯಾಣ ರಾಜ್ಯದ ಬರ್ಸಿ ಜಟಾನ್ ಮೂಲದ ಸಂದೀಪ(36), ಹಾಗೂ ಔರಂಗನಗರ ಮೂಲದ ರವಿ(27), ಎಂಬ ಆರೋಪಿಗಳನ್ನ ಬಂಧಿಸಿ, ಬಂಧಿತರಿಂದ 21 ಸಾವಿರ ಹಣ, 217‌ಎಟಿಎಂ ಕಾರ್ಡ್ ಗಳನ್ನ ವಶಕ್ಕೆ ಪಡೆಯಲಾಗಿದೆ.

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಿರೂರು ಗ್ರಾಮದ ಶಿರೂರು ಅರ್ಬನ್ ಬ್ಯಾಂಕಿನ ಎಟಿಎಂ, ಶಿರೂರು ಕೆನರಾ ಬ್ಯಾಂಕ್ ಎಟಿಎಂ ಹಾಗೂ ಬೈಂದೂರು ಎಸ್ ಬಿಐ‌ ಬ್ಯಾಂಕ್ ಎಟಿಎಂ ನಲ್ಲಿ ಗ್ರಾಹಕರ ಸೋಗಿನಲ್ಲಿ ಎಟಿಎಂ ಒಳಗಡೆ ಹೋಗಿ ಜನರಿಗೆ ಸಹಕರಿಸುವಂತೆ ನಟಿಸಿ, ಮೋಸ ಮಾಡಿ ಎಟಿಎಂ ಕಾರ್ಡ್ ತೆಗೆದುಕೊಂಡು ಮತ್ತೆ ಅದನ್ನ ಅದಲುಬದಲು ಮಾಡಿ, ಜನರಿಂದ ಪಡೆದಿದ್ದ ಎಟಿಎಂ‌ ಕಾರ್ಡ್ ಬಳಸಿ 2,26,000 ಹಣವನ್ನ ವಿತ್ ಡ್ರಾ‌ ಮಾಡಿಕೊಂಡು ಹೋಗಿರುತ್ತಾರೆ.

ಈ  ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಒಟ್ಟು ಮೂರು ಪ್ರಕರಣಗಳು ದಾಖಲಾಗಿದ್ದು, ಪ್ರಕರಣದಲ್ಲಿ ಆರೋಪಿಗಳ ಪತ್ತೆ ಮಾಡಲು ವಿಶೇಷ ತಂಡವನ್ನು ರಚನೆ ಆರೋಪಿಗಳನ್ನ ಬಂಧನ ಮಾಡಲಾಗಿದೆ. ಈ ಆರೋಪಿಗಳ ಮೇಲೆ ವಿವಿಧ ರಾಜ್ಯಗಳಲ್ಲಿ 20ಕ್ಕೂ  ಹೆಚ್ಚು ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

43 minutes ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

7 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

11 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

14 hours ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

1 day ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago