Categories: ಉಡುಪಿ

ಎಟಿಎಂ ಕೇಂದ್ರಗಳಲ್ಲಿ ಜನರಿಗೆ ಸಹಕಾರ ನೀಡುವ ನೆಪ ಹೇಳಿ ವಂಚನೆ: ಎಟಿಎಂ‌ ಕಾರ್ಡ್ ಬಳಸಿ 2,26,000 ಹಣವನ್ನ ವಿತ್ ಡ್ರಾ‌ : ಅಂತಾರಾಜ್ಯ ಇಬ್ಬರು ಆರೋಪಿಗಳ ಬಂಧನ: 217‌ಎಟಿಎಂ ಕಾರ್ಡ್ ಗಳನ್ನ ವಶಕ್ಕೆ ಪಡೆದ ಪೊಲೀಸರು

ಬೈಂದೂರು ಠಾಣಾ ವ್ಯಾಪ್ತಿಯ ಎಟಿಎಂ ಕೇಂದ್ರಗಳಲ್ಲಿ ಜನರಿಗೆ ಸಹಕಾರ ನೀಡುವ ನೆಪ ಹೇಳಿ ವಂಚಿಸಿ ಎಟಿಎಂ ಕಾರ್ಡ್ ಬದಲಾಯಿಸಿ ಹಣ ಡ್ರಾ ಮಾಡುತ್ತಿದ್ದ ಅಂತಾರಾಜ್ಯ ಆರೋಪಿಗಳನ್ನು ಬಂಧಿಸುವಲ್ಲಿ ಬೈಂದೂರು ಠಾಣೆ ಪಿಎಸ್ಐ ಹಾಗೂ ತಂಡ ಯಶಸ್ವಿಯಾಗಿದ್ದಾರೆ.

ಜ.10 ರಂದು ಕುಂದಾಪುರದಲ್ಲಿ ಹರಿಯಾಣ ರಾಜ್ಯದ ಬರ್ಸಿ ಜಟಾನ್ ಮೂಲದ ಸಂದೀಪ(36), ಹಾಗೂ ಔರಂಗನಗರ ಮೂಲದ ರವಿ(27), ಎಂಬ ಆರೋಪಿಗಳನ್ನ ಬಂಧಿಸಿ, ಬಂಧಿತರಿಂದ 21 ಸಾವಿರ ಹಣ, 217‌ಎಟಿಎಂ ಕಾರ್ಡ್ ಗಳನ್ನ ವಶಕ್ಕೆ ಪಡೆಯಲಾಗಿದೆ.

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಿರೂರು ಗ್ರಾಮದ ಶಿರೂರು ಅರ್ಬನ್ ಬ್ಯಾಂಕಿನ ಎಟಿಎಂ, ಶಿರೂರು ಕೆನರಾ ಬ್ಯಾಂಕ್ ಎಟಿಎಂ ಹಾಗೂ ಬೈಂದೂರು ಎಸ್ ಬಿಐ‌ ಬ್ಯಾಂಕ್ ಎಟಿಎಂ ನಲ್ಲಿ ಗ್ರಾಹಕರ ಸೋಗಿನಲ್ಲಿ ಎಟಿಎಂ ಒಳಗಡೆ ಹೋಗಿ ಜನರಿಗೆ ಸಹಕರಿಸುವಂತೆ ನಟಿಸಿ, ಮೋಸ ಮಾಡಿ ಎಟಿಎಂ ಕಾರ್ಡ್ ತೆಗೆದುಕೊಂಡು ಮತ್ತೆ ಅದನ್ನ ಅದಲುಬದಲು ಮಾಡಿ, ಜನರಿಂದ ಪಡೆದಿದ್ದ ಎಟಿಎಂ‌ ಕಾರ್ಡ್ ಬಳಸಿ 2,26,000 ಹಣವನ್ನ ವಿತ್ ಡ್ರಾ‌ ಮಾಡಿಕೊಂಡು ಹೋಗಿರುತ್ತಾರೆ.

ಈ  ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಒಟ್ಟು ಮೂರು ಪ್ರಕರಣಗಳು ದಾಖಲಾಗಿದ್ದು, ಪ್ರಕರಣದಲ್ಲಿ ಆರೋಪಿಗಳ ಪತ್ತೆ ಮಾಡಲು ವಿಶೇಷ ತಂಡವನ್ನು ರಚನೆ ಆರೋಪಿಗಳನ್ನ ಬಂಧನ ಮಾಡಲಾಗಿದೆ. ಈ ಆರೋಪಿಗಳ ಮೇಲೆ ವಿವಿಧ ರಾಜ್ಯಗಳಲ್ಲಿ 20ಕ್ಕೂ  ಹೆಚ್ಚು ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

8 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

9 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

10 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

10 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

14 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

16 hours ago