ಬೈಂದೂರು ಠಾಣಾ ವ್ಯಾಪ್ತಿಯ ಎಟಿಎಂ ಕೇಂದ್ರಗಳಲ್ಲಿ ಜನರಿಗೆ ಸಹಕಾರ ನೀಡುವ ನೆಪ ಹೇಳಿ ವಂಚಿಸಿ ಎಟಿಎಂ ಕಾರ್ಡ್ ಬದಲಾಯಿಸಿ ಹಣ ಡ್ರಾ ಮಾಡುತ್ತಿದ್ದ ಅಂತಾರಾಜ್ಯ ಆರೋಪಿಗಳನ್ನು ಬಂಧಿಸುವಲ್ಲಿ ಬೈಂದೂರು ಠಾಣೆ ಪಿಎಸ್ಐ ಹಾಗೂ ತಂಡ ಯಶಸ್ವಿಯಾಗಿದ್ದಾರೆ.
ಜ.10 ರಂದು ಕುಂದಾಪುರದಲ್ಲಿ ಹರಿಯಾಣ ರಾಜ್ಯದ ಬರ್ಸಿ ಜಟಾನ್ ಮೂಲದ ಸಂದೀಪ(36), ಹಾಗೂ ಔರಂಗನಗರ ಮೂಲದ ರವಿ(27), ಎಂಬ ಆರೋಪಿಗಳನ್ನ ಬಂಧಿಸಿ, ಬಂಧಿತರಿಂದ 21 ಸಾವಿರ ಹಣ, 217ಎಟಿಎಂ ಕಾರ್ಡ್ ಗಳನ್ನ ವಶಕ್ಕೆ ಪಡೆಯಲಾಗಿದೆ.
ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಿರೂರು ಗ್ರಾಮದ ಶಿರೂರು ಅರ್ಬನ್ ಬ್ಯಾಂಕಿನ ಎಟಿಎಂ, ಶಿರೂರು ಕೆನರಾ ಬ್ಯಾಂಕ್ ಎಟಿಎಂ ಹಾಗೂ ಬೈಂದೂರು ಎಸ್ ಬಿಐ ಬ್ಯಾಂಕ್ ಎಟಿಎಂ ನಲ್ಲಿ ಗ್ರಾಹಕರ ಸೋಗಿನಲ್ಲಿ ಎಟಿಎಂ ಒಳಗಡೆ ಹೋಗಿ ಜನರಿಗೆ ಸಹಕರಿಸುವಂತೆ ನಟಿಸಿ, ಮೋಸ ಮಾಡಿ ಎಟಿಎಂ ಕಾರ್ಡ್ ತೆಗೆದುಕೊಂಡು ಮತ್ತೆ ಅದನ್ನ ಅದಲುಬದಲು ಮಾಡಿ, ಜನರಿಂದ ಪಡೆದಿದ್ದ ಎಟಿಎಂ ಕಾರ್ಡ್ ಬಳಸಿ 2,26,000 ಹಣವನ್ನ ವಿತ್ ಡ್ರಾ ಮಾಡಿಕೊಂಡು ಹೋಗಿರುತ್ತಾರೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಒಟ್ಟು ಮೂರು ಪ್ರಕರಣಗಳು ದಾಖಲಾಗಿದ್ದು, ಪ್ರಕರಣದಲ್ಲಿ ಆರೋಪಿಗಳ ಪತ್ತೆ ಮಾಡಲು ವಿಶೇಷ ತಂಡವನ್ನು ರಚನೆ ಆರೋಪಿಗಳನ್ನ ಬಂಧನ ಮಾಡಲಾಗಿದೆ. ಈ ಆರೋಪಿಗಳ ಮೇಲೆ ವಿವಿಧ ರಾಜ್ಯಗಳಲ್ಲಿ 20ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…