ಬೈಂದೂರು ಠಾಣಾ ವ್ಯಾಪ್ತಿಯ ಎಟಿಎಂ ಕೇಂದ್ರಗಳಲ್ಲಿ ಜನರಿಗೆ ಸಹಕಾರ ನೀಡುವ ನೆಪ ಹೇಳಿ ವಂಚಿಸಿ ಎಟಿಎಂ ಕಾರ್ಡ್ ಬದಲಾಯಿಸಿ ಹಣ ಡ್ರಾ ಮಾಡುತ್ತಿದ್ದ ಅಂತಾರಾಜ್ಯ ಆರೋಪಿಗಳನ್ನು ಬಂಧಿಸುವಲ್ಲಿ ಬೈಂದೂರು ಠಾಣೆ ಪಿಎಸ್ಐ ಹಾಗೂ ತಂಡ ಯಶಸ್ವಿಯಾಗಿದ್ದಾರೆ.
ಜ.10 ರಂದು ಕುಂದಾಪುರದಲ್ಲಿ ಹರಿಯಾಣ ರಾಜ್ಯದ ಬರ್ಸಿ ಜಟಾನ್ ಮೂಲದ ಸಂದೀಪ(36), ಹಾಗೂ ಔರಂಗನಗರ ಮೂಲದ ರವಿ(27), ಎಂಬ ಆರೋಪಿಗಳನ್ನ ಬಂಧಿಸಿ, ಬಂಧಿತರಿಂದ 21 ಸಾವಿರ ಹಣ, 217ಎಟಿಎಂ ಕಾರ್ಡ್ ಗಳನ್ನ ವಶಕ್ಕೆ ಪಡೆಯಲಾಗಿದೆ.
ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಿರೂರು ಗ್ರಾಮದ ಶಿರೂರು ಅರ್ಬನ್ ಬ್ಯಾಂಕಿನ ಎಟಿಎಂ, ಶಿರೂರು ಕೆನರಾ ಬ್ಯಾಂಕ್ ಎಟಿಎಂ ಹಾಗೂ ಬೈಂದೂರು ಎಸ್ ಬಿಐ ಬ್ಯಾಂಕ್ ಎಟಿಎಂ ನಲ್ಲಿ ಗ್ರಾಹಕರ ಸೋಗಿನಲ್ಲಿ ಎಟಿಎಂ ಒಳಗಡೆ ಹೋಗಿ ಜನರಿಗೆ ಸಹಕರಿಸುವಂತೆ ನಟಿಸಿ, ಮೋಸ ಮಾಡಿ ಎಟಿಎಂ ಕಾರ್ಡ್ ತೆಗೆದುಕೊಂಡು ಮತ್ತೆ ಅದನ್ನ ಅದಲುಬದಲು ಮಾಡಿ, ಜನರಿಂದ ಪಡೆದಿದ್ದ ಎಟಿಎಂ ಕಾರ್ಡ್ ಬಳಸಿ 2,26,000 ಹಣವನ್ನ ವಿತ್ ಡ್ರಾ ಮಾಡಿಕೊಂಡು ಹೋಗಿರುತ್ತಾರೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಒಟ್ಟು ಮೂರು ಪ್ರಕರಣಗಳು ದಾಖಲಾಗಿದ್ದು, ಪ್ರಕರಣದಲ್ಲಿ ಆರೋಪಿಗಳ ಪತ್ತೆ ಮಾಡಲು ವಿಶೇಷ ತಂಡವನ್ನು ರಚನೆ ಆರೋಪಿಗಳನ್ನ ಬಂಧನ ಮಾಡಲಾಗಿದೆ. ಈ ಆರೋಪಿಗಳ ಮೇಲೆ ವಿವಿಧ ರಾಜ್ಯಗಳಲ್ಲಿ 20ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…