ಬೈಂದೂರು ಠಾಣಾ ವ್ಯಾಪ್ತಿಯ ಎಟಿಎಂ ಕೇಂದ್ರಗಳಲ್ಲಿ ಜನರಿಗೆ ಸಹಕಾರ ನೀಡುವ ನೆಪ ಹೇಳಿ ವಂಚಿಸಿ ಎಟಿಎಂ ಕಾರ್ಡ್ ಬದಲಾಯಿಸಿ ಹಣ ಡ್ರಾ ಮಾಡುತ್ತಿದ್ದ ಅಂತಾರಾಜ್ಯ ಆರೋಪಿಗಳನ್ನು ಬಂಧಿಸುವಲ್ಲಿ ಬೈಂದೂರು ಠಾಣೆ ಪಿಎಸ್ಐ ಹಾಗೂ ತಂಡ ಯಶಸ್ವಿಯಾಗಿದ್ದಾರೆ.
ಜ.10 ರಂದು ಕುಂದಾಪುರದಲ್ಲಿ ಹರಿಯಾಣ ರಾಜ್ಯದ ಬರ್ಸಿ ಜಟಾನ್ ಮೂಲದ ಸಂದೀಪ(36), ಹಾಗೂ ಔರಂಗನಗರ ಮೂಲದ ರವಿ(27), ಎಂಬ ಆರೋಪಿಗಳನ್ನ ಬಂಧಿಸಿ, ಬಂಧಿತರಿಂದ 21 ಸಾವಿರ ಹಣ, 217ಎಟಿಎಂ ಕಾರ್ಡ್ ಗಳನ್ನ ವಶಕ್ಕೆ ಪಡೆಯಲಾಗಿದೆ.
ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಿರೂರು ಗ್ರಾಮದ ಶಿರೂರು ಅರ್ಬನ್ ಬ್ಯಾಂಕಿನ ಎಟಿಎಂ, ಶಿರೂರು ಕೆನರಾ ಬ್ಯಾಂಕ್ ಎಟಿಎಂ ಹಾಗೂ ಬೈಂದೂರು ಎಸ್ ಬಿಐ ಬ್ಯಾಂಕ್ ಎಟಿಎಂ ನಲ್ಲಿ ಗ್ರಾಹಕರ ಸೋಗಿನಲ್ಲಿ ಎಟಿಎಂ ಒಳಗಡೆ ಹೋಗಿ ಜನರಿಗೆ ಸಹಕರಿಸುವಂತೆ ನಟಿಸಿ, ಮೋಸ ಮಾಡಿ ಎಟಿಎಂ ಕಾರ್ಡ್ ತೆಗೆದುಕೊಂಡು ಮತ್ತೆ ಅದನ್ನ ಅದಲುಬದಲು ಮಾಡಿ, ಜನರಿಂದ ಪಡೆದಿದ್ದ ಎಟಿಎಂ ಕಾರ್ಡ್ ಬಳಸಿ 2,26,000 ಹಣವನ್ನ ವಿತ್ ಡ್ರಾ ಮಾಡಿಕೊಂಡು ಹೋಗಿರುತ್ತಾರೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಒಟ್ಟು ಮೂರು ಪ್ರಕರಣಗಳು ದಾಖಲಾಗಿದ್ದು, ಪ್ರಕರಣದಲ್ಲಿ ಆರೋಪಿಗಳ ಪತ್ತೆ ಮಾಡಲು ವಿಶೇಷ ತಂಡವನ್ನು ರಚನೆ ಆರೋಪಿಗಳನ್ನ ಬಂಧನ ಮಾಡಲಾಗಿದೆ. ಈ ಆರೋಪಿಗಳ ಮೇಲೆ ವಿವಿಧ ರಾಜ್ಯಗಳಲ್ಲಿ 20ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…