Categories: ಕೋಲಾರ

ಎಡಿಜಿಪಿ ಚಂದ್ರಶೇಖರ್ ರಾಜೀನಾಮೆಗೆ ಜೆಡಿಎಸ್ ಒತ್ತಾಯ

ಕೋಲಾರ: ಕೇಂದ್ರ ಸಚಿವ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಅವಹೇಳನ‌ ಪದ ಬಳಕೆ ಮಾಡಿರುವ ಎಸ್ಐಟಿ ವಿಭಾಗದ ಎಡಿಜಿಪಿ ಚಂದ್ರಶೇಖರ್ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ತಾಲೂಕು ಜೆಡಿಎಸ್ ವತಿಯಿಂದ ಹೊಸ ಬಸ್ ನಿಲ್ದಾಣ ಬಳಿ ರಸ್ತೆ ತಡೆ ನಡೆಸಿ ನಂತರ ತಹಶಿಲ್ದಾರ್ ಮೂಲಕ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ ರಾಜ್ಯದಲ್ಲಿ ಎಸ್ಐಟಿ ಒಂದು ತನಿಖಾ ಸಂಸ್ಥೆಯಾಗಿ ಉಳಿದಿಲ್ಲ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಪ್ರಾಯೋಜಕತ್ವದ ಸಂಸ್ಥೆಯಾಗಿದೆ ಅಧಿಕಾರಿಗಳಿಗೆ ಅವರದೇ ಆದ ನಿಯಮಗಳಿದ್ದರೂ ಹಿರಿಯ ಐಪಿಎಸ್ ಅಧಿಕಾರಿ ಚಂದ್ರಶೇಖರ್ ತಮ್ಮ ನಿಯಮಗಳನ್ನು ಬದಿಗೊತ್ತಿ ಕೇಂದ್ರ ಸಚಿವರ ಬಗ್ಗೆ ಅವಹೇಳನಕಾರಿ ಪದಬಳಕೆ ಮಾಡಿದ್ದಾರೆ ಕೂಡಲೇ ಚಂದ್ರಶೇಖರ್ ರಾಜೀನಾಮೆ ನೀಡಬೇಕು ಮತ್ತು ಅವರ ವಿರುದ್ದ ಶಿಸ್ತು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಲೋಕಾಯುಕ್ತ ಎಸ್.ಐ.ಟಿ ಎಡಿಜಿಪಿ ಚಂದ್ರಶೇಖರ್ ಕೇಂದ್ರ ಸಚಿವರ ಬಗ್ಗೆ ಬಳಸಿರುವ ವಾಕ್ಯವನ್ನು ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳ ಹಾದಿಯಲ್ಲಿ ಬಹುತೇಕ ಸಚಿವರು ಸಮರ್ಥನೆ ಮಾಡುತ್ತಿದ್ದಾರೆ, ಅಧಿಕಾರ ಯಾರಿಗೂ ಶಾಶ್ವತವಲ್ಲ ಆದರೆ ಕಾಂಗ್ರೆಸ್‌ ನಾಯಕರು ನೇರವಾಗಿ ಕುಮಾರಸ್ವಾಮಿಯವರ ವಿರುದ್ದ ಮಾತನಾಡದೆ ಜನರ ತೆರಿಗೆ ಹಣದಲ್ಲಿ ಕೆಲಸ ಮಾಡುತ್ತಿರುವ ಸರ್ಕಾರಿ ಅಧಿಕಾರಿಗಳಿಂದ ಕುಮಾರಸ್ವಾಮಿಯವರ ವಿರುದ್ದ ಮಾತನಾಡಿಸಿದ್ದಾರೆ ಇದು ರಾಜ್ಯದ ಜನತೆಗೆ ಮಾಡಿದ ಅವಮಾನವಾಗಿದೆ ಎಂದು ಆರೋಪಿಸಿದರು.

ಜಿಲ್ಲಾ ಜೆಡಿಎಸ್‌ ಕಾರ್ಯಾಧ್ಯಕ್ಷ ಬನಕನಹಳ್ಳಿ‌ ನಟರಾಜ್ ಮಾತನಾಡಿ ಎಡಿಜಿಪಿ ಚಂದ್ರಶೇಖರ್ ಆಂದ್ರಪ್ರದೇಶದ ಮೂಲದ ವ್ಯಕ್ತಿಯಾಗಿದ್ದು ಅವರ ಅಧಿಕಾರ ಅವಧಿಯಲ್ಲಿ ಕೋಟ್ಯಾಂತರ ರೂ.ಗಳ ಭ್ರಷ್ಟಾಚಾರ ಮಾಡಿದ್ದು ಅವರ ಇಲಾಖೆಯ ಅಧಿಕಾರಿಗಳ ಆತನ ವಿರುದ್ದ ದೂರು ನೀಡಿ ಕಾನೂನು ಹೋರಾಟ ಮಾಡಿದ್ದಾರೆ ಅಂತಹ ಭ್ರಷ್ಟ ಅಧಿಕಾರಿಯಿಂದ ಕಾಂಗ್ರೆಸ್ ನಾಯಕರು ಮಾತನಾಡಿಸುತ್ತಿರುವುದು ನೋಡಿದರೆ ಮುಂದಿನ ದಿನಗಳಲ್ಲಿ ಅದರ ಪ್ರತಿಫಲ ಕಾಂಗ್ರೆಸ್ ನವರೇ ಎದುರಿಸಬೇಕಾಗುತ್ತದೆ ಎಂದರು.

ಪ್ರತಿಭಟನೆಯಲ್ಲಿ ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಡಾ.ಡಿ.ಕೆ ರಮೇಶ್, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಬಾಬು ಮೌನಿ, ಮುಖಂಡರಾದ ಕಡಗಟ್ಟೂರು ದಯಾನಂದ್, ಎಪಿಎಂಸಿ ಪುಟ್ಟರಾಜು, ದಿಂಬ ನಾಗರಾಜಗೌಡ, ಕಲಾ ರಮೇಶ್, ಜಯನಗರ ಕಾರ್ತಿಕ್, ವಿಜಿಗೌಡ, ಯಲುವಗುಳಿ ನಾಗರಾಜ್ ಛತ್ರಕೋಡಿಹಳ್ಳಿ ಕುಮಾರ್, ಅಮ್ಮೇರಹಳ್ಳಿ ಸತೀಶ್, ಅಮ್ಮನಲ್ಲೂರು ರಮೇಶ್, ನುಕ್ಕನಹಳ್ಳಿ ರಘು, ಚಿಕ್ಕಹಸಾಳ ಲೋಕೇಶ್, ಜಗನ್ನಾಥ, ಶ್ರೀಕಾಂತ್, ಸುಧಾಕರ್, ಜನ್ನಘಟ್ಟ ರವಿ, ಯಡಹಳ್ಳಿ ವೇಣುಗೋಪಾಲ ಮುಂತಾದವರು ಇದ್ದರು.

Ramesh Babu

Journalist

Recent Posts

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

5 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

9 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

18 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

20 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

23 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

1 day ago