ಎಡ ಭುಜದ ಮುರಿತಕ್ಕೆ ಒಳಗಾಗಿದ್ದ 57 ವರ್ಷದ ವ್ಯಕ್ತಿಗೆ ಅಪರೂಪದ ಭುಜದ ಕೀಲು ಮರುನಿರ್ಮಣ ಶಸ್ತ್ರಚಿಕಿತ್ಸೆ

ಚನ್ನಪಟ್ಟಣ: ತೀವ್ರವಾದ ಎಡ ಭುಜದ ನೋವಿನಿಂದ ಬಳಲುತ್ತಿದ್ದ 57 ವರ್ಷದ ಚೆನ್ನಪಟ್ಟಣ ಮೂಲದ ವ್ಯಕ್ತಿಗೆ ನಾಗರಭಾವಿ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಭುಜದ ಕೀಲು ಮರುನಿರ್ಮಣ ಮಾಡಾಗಿದೆ.

ನಾಗರಭಾವಿ ಫೋರ್ಟಿಸ್‌ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಸಲಹೆಗಾರ ಡಾ. ಡಾ. ಮಂಜುನಾಥ್ ಕೋಡಿಹಳ್ಳಿ ಅವರ ತಂಡ ಈ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ್ದು, ಶಸ್ತ್ರಚಿಕಿತ್ಸೆಯಾದ ಒಂದೇ ದಿನದಲ್ಲಿ ರೋಗಿಯನ್ನು ಬಿಡುಗಡೆ ಮಾಡಲಾಗಿದೆ.
ಈ ಕುರಿತು ಮಾತನಾಡಿದ ಫೋರ್ಟಿಸ್‌ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಸಲಹೆಗಾರ ಡಾ. ಮಂಜುನಾಥ್ ಕೋಡಿಹಳ್ಳಿ , ಚೆನ್ನಪಟ್ಟಣ ಮೂಲದ 57 ವರ್ಷದ ಪ್ರಕಾಶ್‌ ಎಂಬ ವ್ಯಕ್ತಿಯು ತನ್ನ ಎಡ ಭುಜದಲ್ಲಿ ಅತೀವಾ ನೋವು ಅನುಭವಿಸುತ್ತಿದ್ದರು. ನೋವು ನಿವಾರಿಸಿಕೊಳ್ಳಲು ಸಾಕಷ್ಟು ಪೇನ್‌ ಕಿಲ್ಲರ್‌ಗಳನ್ನು ಸತತ 10 ದಿನದವರೆಗೂ ದೂಡಿದ್ದಾರೆ. ಆದರೆ, ಅಸಾಧ್ಯವಾದ ನೋವು ಇದ್ದ ಕಾರಣ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಸಂಪೂರ್ಣ ತಪಾಸಣೆಯ ನಂತರ ಅವರ ಎಡ ಭುಜದ ಅಕ್ರೋಮಿಯೊಕ್ಲಾವಿಕ್ಯುಲರ್‌ (ಎಸಿ) ಕೀಲುಗಳಲ್ಲಿ ಮುರಿತವಾಗಿರುವುದು ಕಂಡು ಬಂತು.

ಅಕ್ರೋಮಿಯೊಕ್ಲಾವಿಕ್ಯುಲರ್‌ ಎನ್ನುವುದು ಭುಜದಲ್ಲಿನ ಡಿಸ್ಲೊಕೇಷನ್‌ಗಳಲ್ಲಿ ಒಂದು. ಇಲ್ಲಿ ಮುರಿತವಾಗಿ ೧೦ ದಿನ ಕಳೆದಿದ್ದರೂ ಅವರು ಹಾಗೇ ನಿರ್ಲಕ್ಷಿಸಿದ್ದರಿಂದ ಪರಿಸ್ಥಿತಿ ಸವಾಲಿನದ್ದಾಗಿತ್ತು. ಅವರ ಫಿಟ್‌ನೆಸ್‌ ತಿಳಿದುಕೊಳ್ಳಲು ಹೃದ್ರೋಗತಜ್ಞರ ಅಭಿಪ್ರಾಯದ ಜೊತೆಗೆ, ರೋಗಿಗೆ ಎಡ ಭುಜದ ಆತ್ರೋಸ್ಕೋಪಿಕ್‌ ಎಸಿ ಕೀಲು ಪುನರ್‌ನಿರ್ಮಾಣ ಮಾಡಲು ನಿರ್ಣಯಿಸಲಾಯಿತು ಎಂದರು.

ಸಾಕಷ್ಟು ಜನರು ಭುಜದ ನೋವಿದ್ದರೂ ಅದನ್ನು ನಿರ್ಲಕ್ಷಿಸಿ ಬಿಡುತ್ತಾರೆ, ಕೆಲವೊಮ್ಮೆ ಭುಜದ ಮೂಳೆ ಮುರಿತ ಅಥವಾ ಡಿಸ್ಲೊಕೇಷನ್‌ಗಳಿಂದ ಮುಂದಿನ ದಿನಗಳಲ್ಲಿ ಗಂಭೀರ ಸಮಸ್ಯೆ ಆಗಬಹುದು. ಹೀಗಾಗಿ ಯಾವುದೇ ಕಾರಣಕ್ಕೂ ಭುಜದ ನೋವನ್ನು ನಿರ್ಲಕ್ಷಿಸುವುದು ಒಳ್ಳೆಯದಲ್ಲ ಎಂದು ಹೇಳಿದರು.

ಫೋರ್ಟಿಸ್ ಆಸ್ಪತ್ರೆ ಫೆಸಿಲಿಟಿಸ್‌ ನಿರ್ದೇಶಕ ತೇಜಸ್ವಿನಿ ಪಾರ್ಥಸಾರಥಿ ಮಾತನಾಡಿ, “ನಮ್ಮಲ್ಲಿರುವ ಅತ್ಯಾಧುನಿಕ ತಂತ್ರಜ್ಞಾನಗಳು ಹಾಗೂ ರೋಬೋಟಿಕ್‌ ಶಸ್ತ್ರಚಿಕಿತ್ಸೆಗಳು ಹೆಚ್ಚು ಪ್ರಚಲಿದಲ್ಲಿದ್ದು, ವಿಶ್ವ ದರ್ಜೆಯ ಮೂಳೆಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಹೇಳಿದರು.

Ramesh Babu

Journalist

Recent Posts

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

42 minutes ago

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…

2 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

4 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

4 hours ago

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ: ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರೋ ದುಷ್ಕರ್ಮಿಗಳು

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…

4 hours ago

ಭವಿಷ್ಯದ ಸಮಾಜಕ್ಕಾಗಿ…….

ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…

6 hours ago