ಎಡ ಭುಜದ ಮುರಿತಕ್ಕೆ ಒಳಗಾಗಿದ್ದ 57 ವರ್ಷದ ವ್ಯಕ್ತಿಗೆ ಅಪರೂಪದ ಭುಜದ ಕೀಲು ಮರುನಿರ್ಮಣ ಶಸ್ತ್ರಚಿಕಿತ್ಸೆ

ಚನ್ನಪಟ್ಟಣ: ತೀವ್ರವಾದ ಎಡ ಭುಜದ ನೋವಿನಿಂದ ಬಳಲುತ್ತಿದ್ದ 57 ವರ್ಷದ ಚೆನ್ನಪಟ್ಟಣ ಮೂಲದ ವ್ಯಕ್ತಿಗೆ ನಾಗರಭಾವಿ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಭುಜದ ಕೀಲು ಮರುನಿರ್ಮಣ ಮಾಡಾಗಿದೆ.

ನಾಗರಭಾವಿ ಫೋರ್ಟಿಸ್‌ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಸಲಹೆಗಾರ ಡಾ. ಡಾ. ಮಂಜುನಾಥ್ ಕೋಡಿಹಳ್ಳಿ ಅವರ ತಂಡ ಈ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ್ದು, ಶಸ್ತ್ರಚಿಕಿತ್ಸೆಯಾದ ಒಂದೇ ದಿನದಲ್ಲಿ ರೋಗಿಯನ್ನು ಬಿಡುಗಡೆ ಮಾಡಲಾಗಿದೆ.
ಈ ಕುರಿತು ಮಾತನಾಡಿದ ಫೋರ್ಟಿಸ್‌ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಸಲಹೆಗಾರ ಡಾ. ಮಂಜುನಾಥ್ ಕೋಡಿಹಳ್ಳಿ , ಚೆನ್ನಪಟ್ಟಣ ಮೂಲದ 57 ವರ್ಷದ ಪ್ರಕಾಶ್‌ ಎಂಬ ವ್ಯಕ್ತಿಯು ತನ್ನ ಎಡ ಭುಜದಲ್ಲಿ ಅತೀವಾ ನೋವು ಅನುಭವಿಸುತ್ತಿದ್ದರು. ನೋವು ನಿವಾರಿಸಿಕೊಳ್ಳಲು ಸಾಕಷ್ಟು ಪೇನ್‌ ಕಿಲ್ಲರ್‌ಗಳನ್ನು ಸತತ 10 ದಿನದವರೆಗೂ ದೂಡಿದ್ದಾರೆ. ಆದರೆ, ಅಸಾಧ್ಯವಾದ ನೋವು ಇದ್ದ ಕಾರಣ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಸಂಪೂರ್ಣ ತಪಾಸಣೆಯ ನಂತರ ಅವರ ಎಡ ಭುಜದ ಅಕ್ರೋಮಿಯೊಕ್ಲಾವಿಕ್ಯುಲರ್‌ (ಎಸಿ) ಕೀಲುಗಳಲ್ಲಿ ಮುರಿತವಾಗಿರುವುದು ಕಂಡು ಬಂತು.

ಅಕ್ರೋಮಿಯೊಕ್ಲಾವಿಕ್ಯುಲರ್‌ ಎನ್ನುವುದು ಭುಜದಲ್ಲಿನ ಡಿಸ್ಲೊಕೇಷನ್‌ಗಳಲ್ಲಿ ಒಂದು. ಇಲ್ಲಿ ಮುರಿತವಾಗಿ ೧೦ ದಿನ ಕಳೆದಿದ್ದರೂ ಅವರು ಹಾಗೇ ನಿರ್ಲಕ್ಷಿಸಿದ್ದರಿಂದ ಪರಿಸ್ಥಿತಿ ಸವಾಲಿನದ್ದಾಗಿತ್ತು. ಅವರ ಫಿಟ್‌ನೆಸ್‌ ತಿಳಿದುಕೊಳ್ಳಲು ಹೃದ್ರೋಗತಜ್ಞರ ಅಭಿಪ್ರಾಯದ ಜೊತೆಗೆ, ರೋಗಿಗೆ ಎಡ ಭುಜದ ಆತ್ರೋಸ್ಕೋಪಿಕ್‌ ಎಸಿ ಕೀಲು ಪುನರ್‌ನಿರ್ಮಾಣ ಮಾಡಲು ನಿರ್ಣಯಿಸಲಾಯಿತು ಎಂದರು.

ಸಾಕಷ್ಟು ಜನರು ಭುಜದ ನೋವಿದ್ದರೂ ಅದನ್ನು ನಿರ್ಲಕ್ಷಿಸಿ ಬಿಡುತ್ತಾರೆ, ಕೆಲವೊಮ್ಮೆ ಭುಜದ ಮೂಳೆ ಮುರಿತ ಅಥವಾ ಡಿಸ್ಲೊಕೇಷನ್‌ಗಳಿಂದ ಮುಂದಿನ ದಿನಗಳಲ್ಲಿ ಗಂಭೀರ ಸಮಸ್ಯೆ ಆಗಬಹುದು. ಹೀಗಾಗಿ ಯಾವುದೇ ಕಾರಣಕ್ಕೂ ಭುಜದ ನೋವನ್ನು ನಿರ್ಲಕ್ಷಿಸುವುದು ಒಳ್ಳೆಯದಲ್ಲ ಎಂದು ಹೇಳಿದರು.

ಫೋರ್ಟಿಸ್ ಆಸ್ಪತ್ರೆ ಫೆಸಿಲಿಟಿಸ್‌ ನಿರ್ದೇಶಕ ತೇಜಸ್ವಿನಿ ಪಾರ್ಥಸಾರಥಿ ಮಾತನಾಡಿ, “ನಮ್ಮಲ್ಲಿರುವ ಅತ್ಯಾಧುನಿಕ ತಂತ್ರಜ್ಞಾನಗಳು ಹಾಗೂ ರೋಬೋಟಿಕ್‌ ಶಸ್ತ್ರಚಿಕಿತ್ಸೆಗಳು ಹೆಚ್ಚು ಪ್ರಚಲಿದಲ್ಲಿದ್ದು, ವಿಶ್ವ ದರ್ಜೆಯ ಮೂಳೆಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಹೇಳಿದರು.

Ramesh Babu

Journalist

Recent Posts

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

6 hours ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

9 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

9 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

12 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

14 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

1 day ago