ಎಡ ಭುಜದ ಮುರಿತಕ್ಕೆ ಒಳಗಾಗಿದ್ದ 57 ವರ್ಷದ ವ್ಯಕ್ತಿಗೆ ಅಪರೂಪದ ಭುಜದ ಕೀಲು ಮರುನಿರ್ಮಣ ಶಸ್ತ್ರಚಿಕಿತ್ಸೆ

ಚನ್ನಪಟ್ಟಣ: ತೀವ್ರವಾದ ಎಡ ಭುಜದ ನೋವಿನಿಂದ ಬಳಲುತ್ತಿದ್ದ 57 ವರ್ಷದ ಚೆನ್ನಪಟ್ಟಣ ಮೂಲದ ವ್ಯಕ್ತಿಗೆ ನಾಗರಭಾವಿ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಭುಜದ ಕೀಲು ಮರುನಿರ್ಮಣ ಮಾಡಾಗಿದೆ.

ನಾಗರಭಾವಿ ಫೋರ್ಟಿಸ್‌ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಸಲಹೆಗಾರ ಡಾ. ಡಾ. ಮಂಜುನಾಥ್ ಕೋಡಿಹಳ್ಳಿ ಅವರ ತಂಡ ಈ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ್ದು, ಶಸ್ತ್ರಚಿಕಿತ್ಸೆಯಾದ ಒಂದೇ ದಿನದಲ್ಲಿ ರೋಗಿಯನ್ನು ಬಿಡುಗಡೆ ಮಾಡಲಾಗಿದೆ.
ಈ ಕುರಿತು ಮಾತನಾಡಿದ ಫೋರ್ಟಿಸ್‌ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಸಲಹೆಗಾರ ಡಾ. ಮಂಜುನಾಥ್ ಕೋಡಿಹಳ್ಳಿ , ಚೆನ್ನಪಟ್ಟಣ ಮೂಲದ 57 ವರ್ಷದ ಪ್ರಕಾಶ್‌ ಎಂಬ ವ್ಯಕ್ತಿಯು ತನ್ನ ಎಡ ಭುಜದಲ್ಲಿ ಅತೀವಾ ನೋವು ಅನುಭವಿಸುತ್ತಿದ್ದರು. ನೋವು ನಿವಾರಿಸಿಕೊಳ್ಳಲು ಸಾಕಷ್ಟು ಪೇನ್‌ ಕಿಲ್ಲರ್‌ಗಳನ್ನು ಸತತ 10 ದಿನದವರೆಗೂ ದೂಡಿದ್ದಾರೆ. ಆದರೆ, ಅಸಾಧ್ಯವಾದ ನೋವು ಇದ್ದ ಕಾರಣ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಸಂಪೂರ್ಣ ತಪಾಸಣೆಯ ನಂತರ ಅವರ ಎಡ ಭುಜದ ಅಕ್ರೋಮಿಯೊಕ್ಲಾವಿಕ್ಯುಲರ್‌ (ಎಸಿ) ಕೀಲುಗಳಲ್ಲಿ ಮುರಿತವಾಗಿರುವುದು ಕಂಡು ಬಂತು.

ಅಕ್ರೋಮಿಯೊಕ್ಲಾವಿಕ್ಯುಲರ್‌ ಎನ್ನುವುದು ಭುಜದಲ್ಲಿನ ಡಿಸ್ಲೊಕೇಷನ್‌ಗಳಲ್ಲಿ ಒಂದು. ಇಲ್ಲಿ ಮುರಿತವಾಗಿ ೧೦ ದಿನ ಕಳೆದಿದ್ದರೂ ಅವರು ಹಾಗೇ ನಿರ್ಲಕ್ಷಿಸಿದ್ದರಿಂದ ಪರಿಸ್ಥಿತಿ ಸವಾಲಿನದ್ದಾಗಿತ್ತು. ಅವರ ಫಿಟ್‌ನೆಸ್‌ ತಿಳಿದುಕೊಳ್ಳಲು ಹೃದ್ರೋಗತಜ್ಞರ ಅಭಿಪ್ರಾಯದ ಜೊತೆಗೆ, ರೋಗಿಗೆ ಎಡ ಭುಜದ ಆತ್ರೋಸ್ಕೋಪಿಕ್‌ ಎಸಿ ಕೀಲು ಪುನರ್‌ನಿರ್ಮಾಣ ಮಾಡಲು ನಿರ್ಣಯಿಸಲಾಯಿತು ಎಂದರು.

ಸಾಕಷ್ಟು ಜನರು ಭುಜದ ನೋವಿದ್ದರೂ ಅದನ್ನು ನಿರ್ಲಕ್ಷಿಸಿ ಬಿಡುತ್ತಾರೆ, ಕೆಲವೊಮ್ಮೆ ಭುಜದ ಮೂಳೆ ಮುರಿತ ಅಥವಾ ಡಿಸ್ಲೊಕೇಷನ್‌ಗಳಿಂದ ಮುಂದಿನ ದಿನಗಳಲ್ಲಿ ಗಂಭೀರ ಸಮಸ್ಯೆ ಆಗಬಹುದು. ಹೀಗಾಗಿ ಯಾವುದೇ ಕಾರಣಕ್ಕೂ ಭುಜದ ನೋವನ್ನು ನಿರ್ಲಕ್ಷಿಸುವುದು ಒಳ್ಳೆಯದಲ್ಲ ಎಂದು ಹೇಳಿದರು.

ಫೋರ್ಟಿಸ್ ಆಸ್ಪತ್ರೆ ಫೆಸಿಲಿಟಿಸ್‌ ನಿರ್ದೇಶಕ ತೇಜಸ್ವಿನಿ ಪಾರ್ಥಸಾರಥಿ ಮಾತನಾಡಿ, “ನಮ್ಮಲ್ಲಿರುವ ಅತ್ಯಾಧುನಿಕ ತಂತ್ರಜ್ಞಾನಗಳು ಹಾಗೂ ರೋಬೋಟಿಕ್‌ ಶಸ್ತ್ರಚಿಕಿತ್ಸೆಗಳು ಹೆಚ್ಚು ಪ್ರಚಲಿದಲ್ಲಿದ್ದು, ವಿಶ್ವ ದರ್ಜೆಯ ಮೂಳೆಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಹೇಳಿದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

11 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

12 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

13 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

13 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

20 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago