ಚನ್ನಪಟ್ಟಣ: ತೀವ್ರವಾದ ಎಡ ಭುಜದ ನೋವಿನಿಂದ ಬಳಲುತ್ತಿದ್ದ 57 ವರ್ಷದ ಚೆನ್ನಪಟ್ಟಣ ಮೂಲದ ವ್ಯಕ್ತಿಗೆ ನಾಗರಭಾವಿ ಫೋರ್ಟಿಸ್ ಆಸ್ಪತ್ರೆಯಲ್ಲಿ ಭುಜದ ಕೀಲು ಮರುನಿರ್ಮಣ ಮಾಡಾಗಿದೆ.
ನಾಗರಭಾವಿ ಫೋರ್ಟಿಸ್ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಸಲಹೆಗಾರ ಡಾ. ಡಾ. ಮಂಜುನಾಥ್ ಕೋಡಿಹಳ್ಳಿ ಅವರ ತಂಡ ಈ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ್ದು, ಶಸ್ತ್ರಚಿಕಿತ್ಸೆಯಾದ ಒಂದೇ ದಿನದಲ್ಲಿ ರೋಗಿಯನ್ನು ಬಿಡುಗಡೆ ಮಾಡಲಾಗಿದೆ.
ಈ ಕುರಿತು ಮಾತನಾಡಿದ ಫೋರ್ಟಿಸ್ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಸಲಹೆಗಾರ ಡಾ. ಮಂಜುನಾಥ್ ಕೋಡಿಹಳ್ಳಿ , ಚೆನ್ನಪಟ್ಟಣ ಮೂಲದ 57 ವರ್ಷದ ಪ್ರಕಾಶ್ ಎಂಬ ವ್ಯಕ್ತಿಯು ತನ್ನ ಎಡ ಭುಜದಲ್ಲಿ ಅತೀವಾ ನೋವು ಅನುಭವಿಸುತ್ತಿದ್ದರು. ನೋವು ನಿವಾರಿಸಿಕೊಳ್ಳಲು ಸಾಕಷ್ಟು ಪೇನ್ ಕಿಲ್ಲರ್ಗಳನ್ನು ಸತತ 10 ದಿನದವರೆಗೂ ದೂಡಿದ್ದಾರೆ. ಆದರೆ, ಅಸಾಧ್ಯವಾದ ನೋವು ಇದ್ದ ಕಾರಣ ಅವರು ಫೋರ್ಟಿಸ್ ಆಸ್ಪತ್ರೆಗೆ ದಾಖಲಾದರು. ಸಂಪೂರ್ಣ ತಪಾಸಣೆಯ ನಂತರ ಅವರ ಎಡ ಭುಜದ ಅಕ್ರೋಮಿಯೊಕ್ಲಾವಿಕ್ಯುಲರ್ (ಎಸಿ) ಕೀಲುಗಳಲ್ಲಿ ಮುರಿತವಾಗಿರುವುದು ಕಂಡು ಬಂತು.
ಅಕ್ರೋಮಿಯೊಕ್ಲಾವಿಕ್ಯುಲರ್ ಎನ್ನುವುದು ಭುಜದಲ್ಲಿನ ಡಿಸ್ಲೊಕೇಷನ್ಗಳಲ್ಲಿ ಒಂದು. ಇಲ್ಲಿ ಮುರಿತವಾಗಿ ೧೦ ದಿನ ಕಳೆದಿದ್ದರೂ ಅವರು ಹಾಗೇ ನಿರ್ಲಕ್ಷಿಸಿದ್ದರಿಂದ ಪರಿಸ್ಥಿತಿ ಸವಾಲಿನದ್ದಾಗಿತ್ತು. ಅವರ ಫಿಟ್ನೆಸ್ ತಿಳಿದುಕೊಳ್ಳಲು ಹೃದ್ರೋಗತಜ್ಞರ ಅಭಿಪ್ರಾಯದ ಜೊತೆಗೆ, ರೋಗಿಗೆ ಎಡ ಭುಜದ ಆತ್ರೋಸ್ಕೋಪಿಕ್ ಎಸಿ ಕೀಲು ಪುನರ್ನಿರ್ಮಾಣ ಮಾಡಲು ನಿರ್ಣಯಿಸಲಾಯಿತು ಎಂದರು.
ಸಾಕಷ್ಟು ಜನರು ಭುಜದ ನೋವಿದ್ದರೂ ಅದನ್ನು ನಿರ್ಲಕ್ಷಿಸಿ ಬಿಡುತ್ತಾರೆ, ಕೆಲವೊಮ್ಮೆ ಭುಜದ ಮೂಳೆ ಮುರಿತ ಅಥವಾ ಡಿಸ್ಲೊಕೇಷನ್ಗಳಿಂದ ಮುಂದಿನ ದಿನಗಳಲ್ಲಿ ಗಂಭೀರ ಸಮಸ್ಯೆ ಆಗಬಹುದು. ಹೀಗಾಗಿ ಯಾವುದೇ ಕಾರಣಕ್ಕೂ ಭುಜದ ನೋವನ್ನು ನಿರ್ಲಕ್ಷಿಸುವುದು ಒಳ್ಳೆಯದಲ್ಲ ಎಂದು ಹೇಳಿದರು.
ಫೋರ್ಟಿಸ್ ಆಸ್ಪತ್ರೆ ಫೆಸಿಲಿಟಿಸ್ ನಿರ್ದೇಶಕ ತೇಜಸ್ವಿನಿ ಪಾರ್ಥಸಾರಥಿ ಮಾತನಾಡಿ, “ನಮ್ಮಲ್ಲಿರುವ ಅತ್ಯಾಧುನಿಕ ತಂತ್ರಜ್ಞಾನಗಳು ಹಾಗೂ ರೋಬೋಟಿಕ್ ಶಸ್ತ್ರಚಿಕಿತ್ಸೆಗಳು ಹೆಚ್ಚು ಪ್ರಚಲಿದಲ್ಲಿದ್ದು, ವಿಶ್ವ ದರ್ಜೆಯ ಮೂಳೆಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಹೇಳಿದರು.
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…