ಎಣ್ಣೆ ಪಾರ್ಟಿ ವೇಳೆ ಶುರುವಾದ ಗಲಾಟೆ, ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತುಮಕೂರಿನ ಭೀಮಸಂದ್ರ ಬಳಿಯಿರುವ ಬೆತ್ತಲೂರಿನಲ್ಲಿ ನಡೆದಿದೆ.
ನಿರಂಜನ್ (35), ಕೊಲೆಯಾದ ಮೃತ ದುರ್ದೈವಿ.
ನಿನ್ನೆ ಕ್ರಿಸ್ ಮಸ್ ಹಬ್ಬದ ಹಿನ್ನೆಲೆ. ಸ್ನೇಹಿತರೆಲ್ಲರು ಸೇರಿ ಎಣ್ಣಿ ಪಾರ್ಟಿ ಮಾಡಲಾಗಿತ್ತು. ಈ ವೇಳೆ ಬೆತ್ತಲೂರು ನಿವಾಸಿಗಳಾದ ಮಧು ಹಾಗೂ ನಿರಂಜನ್ ನಡುವೆ ಗಲಾಟೆ ಶುರುವಾಗಿದೆ. ಗಲಾಟೆಯಲ್ಲಿ ಮಧು ಹಾಗೂ ಸಹಚರರು ನಿರಂಜನ್ ನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.
ಕೊಲೆಗೈದು ಆರೋಪಿಗಳು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಆರೋಪಿ ಮಧು(40), ರೌಡಿಶೀಟರ್ ಎಂದು ಹೇಳಾಗುತ್ತಿದೆ. ಕೊಲೆಯಾದ ನಿರಂಜನ್ ಬಿಲ್ಡಿಂಗ್ ಕಂಟ್ರಾಕ್ಟರ್ ಆಗಿದ್ದ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತುಮಕೂರು ಗ್ರಾಮಾಂತರ ಪೊಲೀಸರಿಂದ ತನಿಖೆ ಮುಂದುವರಿದಿದೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…