ಎಣ್ಣೆ ಪಾರ್ಟಿ ವೇಳೆ ಶುರುವಾದ ಗಲಾಟೆ, ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತುಮಕೂರಿನ ಭೀಮಸಂದ್ರ ಬಳಿಯಿರುವ ಬೆತ್ತಲೂರಿನಲ್ಲಿ ನಡೆದಿದೆ.
ನಿರಂಜನ್ (35), ಕೊಲೆಯಾದ ಮೃತ ದುರ್ದೈವಿ.
ನಿನ್ನೆ ಕ್ರಿಸ್ ಮಸ್ ಹಬ್ಬದ ಹಿನ್ನೆಲೆ. ಸ್ನೇಹಿತರೆಲ್ಲರು ಸೇರಿ ಎಣ್ಣಿ ಪಾರ್ಟಿ ಮಾಡಲಾಗಿತ್ತು. ಈ ವೇಳೆ ಬೆತ್ತಲೂರು ನಿವಾಸಿಗಳಾದ ಮಧು ಹಾಗೂ ನಿರಂಜನ್ ನಡುವೆ ಗಲಾಟೆ ಶುರುವಾಗಿದೆ. ಗಲಾಟೆಯಲ್ಲಿ ಮಧು ಹಾಗೂ ಸಹಚರರು ನಿರಂಜನ್ ನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.
ಕೊಲೆಗೈದು ಆರೋಪಿಗಳು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಆರೋಪಿ ಮಧು(40), ರೌಡಿಶೀಟರ್ ಎಂದು ಹೇಳಾಗುತ್ತಿದೆ. ಕೊಲೆಯಾದ ನಿರಂಜನ್ ಬಿಲ್ಡಿಂಗ್ ಕಂಟ್ರಾಕ್ಟರ್ ಆಗಿದ್ದ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತುಮಕೂರು ಗ್ರಾಮಾಂತರ ಪೊಲೀಸರಿಂದ ತನಿಖೆ ಮುಂದುವರಿದಿದೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…