ಎತ್ತಿನಹೊಳೆ ಜಲಾಶಯ: ಬರಡು ಭೂಮಿ ಸರ್ಕಾರಿ ಜಮೀನು ಇರುವ ಕಡೆ ಜಲಾಶಯ ನಿರ್ಮಿಸಲಿ: ನಮ್ಮ ಭೂಮಿ, ಮನೆ ನಮಗೆ ಬೇಕು- ಲಕ್ಕೇನಹಳ್ಳಿಯಲ್ಲಿ ರೈತರ ಪಟ್ಟು

ದೊಡ್ಡಬಳ್ಳಾಪುರ ತಾಲೂಕಿನ ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಉದ್ದೇಶಿತ ಜಲಾಶಯ ನಿರ್ಮಾಣ ಕಾಮಗಾರಿ ಬಹಳ ಬರದಿಂದ ಸಾಗುತ್ತಿದೆ. ಲಕ್ಕೇನಹಳ್ಳಿಯಲ್ಲಿ ಡ್ಯಾಂ ನಿರ್ಮಾಣವಾದರೆ ಡ್ಯಾಂ ಸುತ್ತಾಮುತ್ತ ಇರುವ ಕೆಲವೊಂದು ಹಳ್ಳಿಗಳು ಮುಳುಗಡೆಯಾಗುತ್ತವೆ. ಮುಳುಗಡೆಯಾಗುವ ಹಳ್ಳಿಗಳಲ್ಲಿ ಜನರು ವಾಸ ಮಾಡಲು ಆಗುವುದಿಲ್ಲ. ಆದ್ದರಿಂದ ಈ ಹಳ್ಳಿಗಳ ಜನರಿಗಾಗಿ ಪರ್ಯಾಯವಾಗಿ ಹೊಸ ಹಳ್ಳಿ‌ ಸೃಷ್ಟಿ ಮಾಡಿ ಮನೆ, ಜಮೀನು ನೀಡುತ್ತೇವೆ. ಇದಕ್ಕೆ ಎಲ್ಲರು ಸಹಕರಿಸಬೇಕೆಂದು ಸರ್ಕಾರ ತಿಳಿಸಿದೆ.

ಸರ್ಕಾರದ ಈ ನಿರ್ಧಾರಕ್ಕೆ ಇಲ್ಲಿನ ರೈತರು, ನಿವಾಸಿಗಳು ಭಾರಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನಮಗೆ ಸರ್ಕಾರ ನೀಡುವ ಅಂಗೈ ಅಗಲ ಭೂಮಿ, ಮನೆ ಬೇಡ, ನಮ್ಮ ನಮ್ಮ ಹಳ್ಳಿಗಳಲ್ಲೇ ನಾವು ವಾಸ ಮಾಡುತ್ತೇವೆ. ನಮ್ಮ ಜಮೀನಿನಲ್ಲೇ ಉತ್ತಿಬಿತ್ತು ಬೆಳೆಬೆಳೆದು ಜೀವನ ಸಾಗಿಸುತ್ತೇವೆ. ನಾವು ಹುಟ್ಟಿ ಬೆಳೆದ ಜಾಗವನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ ಎಂದು ಒಕ್ಕೊರಲಿನಿಂದ ಹೇಳಿದ್ದಾರೆ.

ಸಾಸಲು ಹೋಬಳಿಯಲ್ಲಿ ಹೆಚ್ಚಾಗಿ ಭೂಮಿತಾಯಿಯನ್ನೇ ನಂಬಿ ಬದುಕುತ್ತಿದ್ದೇವೆ. ನಮಗೆ ವ್ಯವಸಾಯ ಬಿಟ್ಟರೆ ಬೇರೇನು ಬರುವುದಿಲ್ಲ. ಸುಮಾರು 10 ಕೋಟಿಗೂ ಹೆಚ್ಚು‌ ವಹಿವಾಟಿನ ಅಡಿಕೆ ಬೆಳೆ ಬೆಳೆಯುತ್ತೇವೆ. ಈಗಿದ್ದಾಗ ಇಲ್ಲಿ ಡ್ಯಾಂ ನಿರ್ಮಾಣ‌ ಮಾಡಿ‌ ನಮ್ಮ‌ ಬದುಕನ್ನು‌ ನಾಶ ಮಾಡಲು‌ ಸರ್ಕಾರ ಮುಂದಾಗಿದೆ ಎಂದು ಆಕ್ರೋಶ‌ ವ್ಯಕ್ತಪಡಿಸಿದರು.

ಎತ್ತಿನಹೊಳೆ ಯೋಜನೆಗೆ ನಮ್ಮ ವಿರೋಧವಿಲ್ಲ. ಲಕ್ಕೇನಹಳ್ಳಿಯಲ್ಲಿ ಡ್ಯಾಂ‌ ನಿರ್ಮಾಣ ಮಾಡುವುದಕ್ಕೆ ನಮ್ಮ ವಿರೋಧವಿದೆ. ನಮ್ಮ ಪ್ರಾಣವಾದರೂ ಬಿಡುತ್ತೇವೆ ಡ್ಯಾಂ ನಿರ್ಮಾಣ ಮಾಡುವುದಕ್ಕೆ ಬಿಡುವುದಿಲ್ಲ ಎಂದು ಹೇಳಿದರು.

ದಯವಿಟ್ಟು ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ, ನಮಗೆ ಪರಿಹಾರ ಬೇಡ, ನಮಗೆ ನಮ್ಮ ಬದುಕು ಮುಖ್ಯ. ಆದ್ದರಿಂದ ಇಲ್ಲಿ ಡ್ಯಾಂ ನಿರ್ಮಾಣ ಮಾಡಿ ನಮ್ಮ ಬದುಕಿಗೆ ಕೊಳ್ಳಿ ಇಡಬೇಡಿ ಎಂದು ಮನವಿ ಮಾಡಿದರು.

ಜೂ.21ರಂದು ದೊಡ್ಡಬಳ್ಳಾಪುರ ತಾಲೂಕಿನ ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಉದ್ದೇಶಿತ ಜಲಾಶಯ ನಿರ್ಮಾಣ ಕಾಮಗಾರಿಗಳ ಸ್ಥಳವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪರಿಶೀಲನೆ ನಡೆಸಿ. ಇದೇ ವೇಳೆ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದರು. ಈ‌ ಸಭೆಯಲ್ಲಿ ಅವರು ಹೇಳಿದ ಮಾತುಗಳನ್ನು ನಾವು ಕೇಳಿದ್ದೇವೆ ಅಷ್ಟೆ, ನಮ್ಮ ಮಾತು, ನಮ್ಮ ಅಹವಾಲನ್ನು ಅವರು ಸ್ವೀಕರಿಸದೇ ಸಭೆಯನ್ನು ಮುಕ್ತಾಯಗೊಳಿಸಿ ಹೊರಟು ಹೋದರು ಎಂದರು.

ಬರಡು ಭೂಮಿ ಇರುವ ಕಡೆಯಲ್ಲಿ ಜಲಾಶಯ ನಿರ್ಮಿಸಲಿ. ಇಲ್ಲಿಯೇ ಜಲಾಶಯ ನಿರ್ಮಿಸಬೇಕು ಎನ್ನುವುದಕ್ಕೆ ಇಲ್ಲಿ ಯಾವುದೇ ನದಿಗೆ ಅಡ್ಡಲಾಗಿ ಅಣೆಕಟ್ಟೆ ನಿರ್ಮಿಸುತ್ತಿಲ್ಲ. ಬದಲಿಗೆ ಎಲ್ಲಿಂದಲೋ ಪೈಪ್ ಮೂಲಕ ತರಲಾಗುತ್ತಿರುವ ನೀರು ಸಂಗ್ರಹಣೆಗೆ ಯಾವ ಸ್ಥಳದಲ್ಲಿ ಬೇಕಿದ್ದರು ಜಲಾಶಯ ನಿರ್ಮಿಸಲು ಅವಕಾಶ ಇದೆ. ಹಾಗಾಗಿ ಬರಡು ಹಾಗೂ ಸರ್ಕಾರಿ ಜಮೀನು ಹೆಚ್ಚಾಗಿ ಇರುವ ಸ್ಥಳದಲ್ಲಿ ಜಲಾಶಯ ನಿರ್ಮಿಸಬೇಕು ಎಂದು ಆಗ್ರಹಿಸಿದರು.

ಜಲಾಶಯ ನಿರ್ಮಾಣದಿಂದ ಮುಳುಗಡೆಯಾಗುತ್ತಿರುವ ಲಕ್ಕೇನಹಳ್ಳಿ, ದಾಸರಪಾಳ್ಯ, ಶ್ರೀರಾಮನಹಳ್ಳಿ ಮುಂತಾದ ಗ್ರಾಮಗಳ ರೈತ ಮಹಿಳೆಯರು ಮಾತನಾಡಿ, ತಲೆತಲಾಂತರದಿಂದ ಬದುಕು ಕಟ್ಟಿಕೊಂಡು ಬಂದಿರುವ ಊರು, ಮನೆಗಳನ್ನು ತೊರೆದು ನಾವು ಎಲ್ಲಿಯೂ ಹೋಗುವುದಿಲ್ಲ. ನಮ್ಮ ಉಸಿರು ಇರುವವರೆಗೂ ಹೋರಾಟ ಮಾಡಿಯಾದರು ಸರಿ ನಮ್ಮ ಹಿರಿಯರು ಬಾಳಿ, ಬದುಕಿರುವ ಮನೆಗಳನ್ನು ಉಳಿಸಿಕೊಳ್ಳುತ್ತೇವೆ ಎಂದು ಪ್ರಮಾಣ ಮಾಡಿದರು.

ಈ ಸಂದರ್ಭದಲ್ಲಿ ದಾಸರಪಾಳ್ಯ ರಾಮಣ್ಣ, ವಕೀಲರಾದ ನರಸಿಂಹ ಗೌಡ, ಸಾಸಲು ಗ್ರಾಮ ಪಂಚಾಯ್ತಿ ಅಧ್ಯಕ್ಷ ನಂದಿನಿ ಪ್ರಸನ್ನ, ಗ್ರಾಮ ಪಂಚಾಯ್ತಿ ಸದಸ್ಯ ಗೋವಿಂದರಾಜ್, ಮುಖಂಡರಾದ ಲಕ್ಕಣ್ಣ, ರೈತ ಮುಖಂಡ ಸೇರಿದಂತೆ ಲಕ್ಕೇನಹಳ್ಳಿ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

8 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

13 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

13 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

21 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago