ಎತ್ತಿನಹೊಳೆ ಜಲಾಶಯ: ಬರಡು ಭೂಮಿ ಸರ್ಕಾರಿ ಜಮೀನು ಇರುವ ಕಡೆ ಜಲಾಶಯ ನಿರ್ಮಿಸಲಿ: ನಮ್ಮ ಭೂಮಿ, ಮನೆ ನಮಗೆ ಬೇಕು- ಲಕ್ಕೇನಹಳ್ಳಿಯಲ್ಲಿ ರೈತರ ಪಟ್ಟು

ದೊಡ್ಡಬಳ್ಳಾಪುರ ತಾಲೂಕಿನ ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಉದ್ದೇಶಿತ ಜಲಾಶಯ ನಿರ್ಮಾಣ ಕಾಮಗಾರಿ ಬಹಳ ಬರದಿಂದ ಸಾಗುತ್ತಿದೆ. ಲಕ್ಕೇನಹಳ್ಳಿಯಲ್ಲಿ ಡ್ಯಾಂ ನಿರ್ಮಾಣವಾದರೆ ಡ್ಯಾಂ ಸುತ್ತಾಮುತ್ತ ಇರುವ ಕೆಲವೊಂದು ಹಳ್ಳಿಗಳು ಮುಳುಗಡೆಯಾಗುತ್ತವೆ. ಮುಳುಗಡೆಯಾಗುವ ಹಳ್ಳಿಗಳಲ್ಲಿ ಜನರು ವಾಸ ಮಾಡಲು ಆಗುವುದಿಲ್ಲ. ಆದ್ದರಿಂದ ಈ ಹಳ್ಳಿಗಳ ಜನರಿಗಾಗಿ ಪರ್ಯಾಯವಾಗಿ ಹೊಸ ಹಳ್ಳಿ‌ ಸೃಷ್ಟಿ ಮಾಡಿ ಮನೆ, ಜಮೀನು ನೀಡುತ್ತೇವೆ. ಇದಕ್ಕೆ ಎಲ್ಲರು ಸಹಕರಿಸಬೇಕೆಂದು ಸರ್ಕಾರ ತಿಳಿಸಿದೆ.

ಸರ್ಕಾರದ ಈ ನಿರ್ಧಾರಕ್ಕೆ ಇಲ್ಲಿನ ರೈತರು, ನಿವಾಸಿಗಳು ಭಾರಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನಮಗೆ ಸರ್ಕಾರ ನೀಡುವ ಅಂಗೈ ಅಗಲ ಭೂಮಿ, ಮನೆ ಬೇಡ, ನಮ್ಮ ನಮ್ಮ ಹಳ್ಳಿಗಳಲ್ಲೇ ನಾವು ವಾಸ ಮಾಡುತ್ತೇವೆ. ನಮ್ಮ ಜಮೀನಿನಲ್ಲೇ ಉತ್ತಿಬಿತ್ತು ಬೆಳೆಬೆಳೆದು ಜೀವನ ಸಾಗಿಸುತ್ತೇವೆ. ನಾವು ಹುಟ್ಟಿ ಬೆಳೆದ ಜಾಗವನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ ಎಂದು ಒಕ್ಕೊರಲಿನಿಂದ ಹೇಳಿದ್ದಾರೆ.

ಸಾಸಲು ಹೋಬಳಿಯಲ್ಲಿ ಹೆಚ್ಚಾಗಿ ಭೂಮಿತಾಯಿಯನ್ನೇ ನಂಬಿ ಬದುಕುತ್ತಿದ್ದೇವೆ. ನಮಗೆ ವ್ಯವಸಾಯ ಬಿಟ್ಟರೆ ಬೇರೇನು ಬರುವುದಿಲ್ಲ. ಸುಮಾರು 10 ಕೋಟಿಗೂ ಹೆಚ್ಚು‌ ವಹಿವಾಟಿನ ಅಡಿಕೆ ಬೆಳೆ ಬೆಳೆಯುತ್ತೇವೆ. ಈಗಿದ್ದಾಗ ಇಲ್ಲಿ ಡ್ಯಾಂ ನಿರ್ಮಾಣ‌ ಮಾಡಿ‌ ನಮ್ಮ‌ ಬದುಕನ್ನು‌ ನಾಶ ಮಾಡಲು‌ ಸರ್ಕಾರ ಮುಂದಾಗಿದೆ ಎಂದು ಆಕ್ರೋಶ‌ ವ್ಯಕ್ತಪಡಿಸಿದರು.

ಎತ್ತಿನಹೊಳೆ ಯೋಜನೆಗೆ ನಮ್ಮ ವಿರೋಧವಿಲ್ಲ. ಲಕ್ಕೇನಹಳ್ಳಿಯಲ್ಲಿ ಡ್ಯಾಂ‌ ನಿರ್ಮಾಣ ಮಾಡುವುದಕ್ಕೆ ನಮ್ಮ ವಿರೋಧವಿದೆ. ನಮ್ಮ ಪ್ರಾಣವಾದರೂ ಬಿಡುತ್ತೇವೆ ಡ್ಯಾಂ ನಿರ್ಮಾಣ ಮಾಡುವುದಕ್ಕೆ ಬಿಡುವುದಿಲ್ಲ ಎಂದು ಹೇಳಿದರು.

ದಯವಿಟ್ಟು ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ, ನಮಗೆ ಪರಿಹಾರ ಬೇಡ, ನಮಗೆ ನಮ್ಮ ಬದುಕು ಮುಖ್ಯ. ಆದ್ದರಿಂದ ಇಲ್ಲಿ ಡ್ಯಾಂ ನಿರ್ಮಾಣ ಮಾಡಿ ನಮ್ಮ ಬದುಕಿಗೆ ಕೊಳ್ಳಿ ಇಡಬೇಡಿ ಎಂದು ಮನವಿ ಮಾಡಿದರು.

ಜೂ.21ರಂದು ದೊಡ್ಡಬಳ್ಳಾಪುರ ತಾಲೂಕಿನ ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಉದ್ದೇಶಿತ ಜಲಾಶಯ ನಿರ್ಮಾಣ ಕಾಮಗಾರಿಗಳ ಸ್ಥಳವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪರಿಶೀಲನೆ ನಡೆಸಿ. ಇದೇ ವೇಳೆ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದರು. ಈ‌ ಸಭೆಯಲ್ಲಿ ಅವರು ಹೇಳಿದ ಮಾತುಗಳನ್ನು ನಾವು ಕೇಳಿದ್ದೇವೆ ಅಷ್ಟೆ, ನಮ್ಮ ಮಾತು, ನಮ್ಮ ಅಹವಾಲನ್ನು ಅವರು ಸ್ವೀಕರಿಸದೇ ಸಭೆಯನ್ನು ಮುಕ್ತಾಯಗೊಳಿಸಿ ಹೊರಟು ಹೋದರು ಎಂದರು.

ಬರಡು ಭೂಮಿ ಇರುವ ಕಡೆಯಲ್ಲಿ ಜಲಾಶಯ ನಿರ್ಮಿಸಲಿ. ಇಲ್ಲಿಯೇ ಜಲಾಶಯ ನಿರ್ಮಿಸಬೇಕು ಎನ್ನುವುದಕ್ಕೆ ಇಲ್ಲಿ ಯಾವುದೇ ನದಿಗೆ ಅಡ್ಡಲಾಗಿ ಅಣೆಕಟ್ಟೆ ನಿರ್ಮಿಸುತ್ತಿಲ್ಲ. ಬದಲಿಗೆ ಎಲ್ಲಿಂದಲೋ ಪೈಪ್ ಮೂಲಕ ತರಲಾಗುತ್ತಿರುವ ನೀರು ಸಂಗ್ರಹಣೆಗೆ ಯಾವ ಸ್ಥಳದಲ್ಲಿ ಬೇಕಿದ್ದರು ಜಲಾಶಯ ನಿರ್ಮಿಸಲು ಅವಕಾಶ ಇದೆ. ಹಾಗಾಗಿ ಬರಡು ಹಾಗೂ ಸರ್ಕಾರಿ ಜಮೀನು ಹೆಚ್ಚಾಗಿ ಇರುವ ಸ್ಥಳದಲ್ಲಿ ಜಲಾಶಯ ನಿರ್ಮಿಸಬೇಕು ಎಂದು ಆಗ್ರಹಿಸಿದರು.

ಜಲಾಶಯ ನಿರ್ಮಾಣದಿಂದ ಮುಳುಗಡೆಯಾಗುತ್ತಿರುವ ಲಕ್ಕೇನಹಳ್ಳಿ, ದಾಸರಪಾಳ್ಯ, ಶ್ರೀರಾಮನಹಳ್ಳಿ ಮುಂತಾದ ಗ್ರಾಮಗಳ ರೈತ ಮಹಿಳೆಯರು ಮಾತನಾಡಿ, ತಲೆತಲಾಂತರದಿಂದ ಬದುಕು ಕಟ್ಟಿಕೊಂಡು ಬಂದಿರುವ ಊರು, ಮನೆಗಳನ್ನು ತೊರೆದು ನಾವು ಎಲ್ಲಿಯೂ ಹೋಗುವುದಿಲ್ಲ. ನಮ್ಮ ಉಸಿರು ಇರುವವರೆಗೂ ಹೋರಾಟ ಮಾಡಿಯಾದರು ಸರಿ ನಮ್ಮ ಹಿರಿಯರು ಬಾಳಿ, ಬದುಕಿರುವ ಮನೆಗಳನ್ನು ಉಳಿಸಿಕೊಳ್ಳುತ್ತೇವೆ ಎಂದು ಪ್ರಮಾಣ ಮಾಡಿದರು.

ಈ ಸಂದರ್ಭದಲ್ಲಿ ದಾಸರಪಾಳ್ಯ ರಾಮಣ್ಣ, ವಕೀಲರಾದ ನರಸಿಂಹ ಗೌಡ, ಸಾಸಲು ಗ್ರಾಮ ಪಂಚಾಯ್ತಿ ಅಧ್ಯಕ್ಷ ನಂದಿನಿ ಪ್ರಸನ್ನ, ಗ್ರಾಮ ಪಂಚಾಯ್ತಿ ಸದಸ್ಯ ಗೋವಿಂದರಾಜ್, ಮುಖಂಡರಾದ ಲಕ್ಕಣ್ಣ, ರೈತ ಮುಖಂಡ ಸೇರಿದಂತೆ ಲಕ್ಕೇನಹಳ್ಳಿ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

3 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

12 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

22 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

24 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

1 day ago