ಎತ್ತಿನಹೊಳೆ ಜಲಾಶಯ: ಬರಡು ಭೂಮಿ ಸರ್ಕಾರಿ ಜಮೀನು ಇರುವ ಕಡೆ ಜಲಾಶಯ ನಿರ್ಮಿಸಲಿ: ನಮ್ಮ ಭೂಮಿ, ಮನೆ ನಮಗೆ ಬೇಕು- ಲಕ್ಕೇನಹಳ್ಳಿಯಲ್ಲಿ ರೈತರ ಪಟ್ಟು

ದೊಡ್ಡಬಳ್ಳಾಪುರ ತಾಲೂಕಿನ ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಉದ್ದೇಶಿತ ಜಲಾಶಯ ನಿರ್ಮಾಣ ಕಾಮಗಾರಿ ಬಹಳ ಬರದಿಂದ ಸಾಗುತ್ತಿದೆ. ಲಕ್ಕೇನಹಳ್ಳಿಯಲ್ಲಿ ಡ್ಯಾಂ ನಿರ್ಮಾಣವಾದರೆ ಡ್ಯಾಂ ಸುತ್ತಾಮುತ್ತ ಇರುವ ಕೆಲವೊಂದು ಹಳ್ಳಿಗಳು ಮುಳುಗಡೆಯಾಗುತ್ತವೆ. ಮುಳುಗಡೆಯಾಗುವ ಹಳ್ಳಿಗಳಲ್ಲಿ ಜನರು ವಾಸ ಮಾಡಲು ಆಗುವುದಿಲ್ಲ. ಆದ್ದರಿಂದ ಈ ಹಳ್ಳಿಗಳ ಜನರಿಗಾಗಿ ಪರ್ಯಾಯವಾಗಿ ಹೊಸ ಹಳ್ಳಿ‌ ಸೃಷ್ಟಿ ಮಾಡಿ ಮನೆ, ಜಮೀನು ನೀಡುತ್ತೇವೆ. ಇದಕ್ಕೆ ಎಲ್ಲರು ಸಹಕರಿಸಬೇಕೆಂದು ಸರ್ಕಾರ ತಿಳಿಸಿದೆ.

ಸರ್ಕಾರದ ಈ ನಿರ್ಧಾರಕ್ಕೆ ಇಲ್ಲಿನ ರೈತರು, ನಿವಾಸಿಗಳು ಭಾರಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನಮಗೆ ಸರ್ಕಾರ ನೀಡುವ ಅಂಗೈ ಅಗಲ ಭೂಮಿ, ಮನೆ ಬೇಡ, ನಮ್ಮ ನಮ್ಮ ಹಳ್ಳಿಗಳಲ್ಲೇ ನಾವು ವಾಸ ಮಾಡುತ್ತೇವೆ. ನಮ್ಮ ಜಮೀನಿನಲ್ಲೇ ಉತ್ತಿಬಿತ್ತು ಬೆಳೆಬೆಳೆದು ಜೀವನ ಸಾಗಿಸುತ್ತೇವೆ. ನಾವು ಹುಟ್ಟಿ ಬೆಳೆದ ಜಾಗವನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ ಎಂದು ಒಕ್ಕೊರಲಿನಿಂದ ಹೇಳಿದ್ದಾರೆ.

ಸಾಸಲು ಹೋಬಳಿಯಲ್ಲಿ ಹೆಚ್ಚಾಗಿ ಭೂಮಿತಾಯಿಯನ್ನೇ ನಂಬಿ ಬದುಕುತ್ತಿದ್ದೇವೆ. ನಮಗೆ ವ್ಯವಸಾಯ ಬಿಟ್ಟರೆ ಬೇರೇನು ಬರುವುದಿಲ್ಲ. ಸುಮಾರು 10 ಕೋಟಿಗೂ ಹೆಚ್ಚು‌ ವಹಿವಾಟಿನ ಅಡಿಕೆ ಬೆಳೆ ಬೆಳೆಯುತ್ತೇವೆ. ಈಗಿದ್ದಾಗ ಇಲ್ಲಿ ಡ್ಯಾಂ ನಿರ್ಮಾಣ‌ ಮಾಡಿ‌ ನಮ್ಮ‌ ಬದುಕನ್ನು‌ ನಾಶ ಮಾಡಲು‌ ಸರ್ಕಾರ ಮುಂದಾಗಿದೆ ಎಂದು ಆಕ್ರೋಶ‌ ವ್ಯಕ್ತಪಡಿಸಿದರು.

ಎತ್ತಿನಹೊಳೆ ಯೋಜನೆಗೆ ನಮ್ಮ ವಿರೋಧವಿಲ್ಲ. ಲಕ್ಕೇನಹಳ್ಳಿಯಲ್ಲಿ ಡ್ಯಾಂ‌ ನಿರ್ಮಾಣ ಮಾಡುವುದಕ್ಕೆ ನಮ್ಮ ವಿರೋಧವಿದೆ. ನಮ್ಮ ಪ್ರಾಣವಾದರೂ ಬಿಡುತ್ತೇವೆ ಡ್ಯಾಂ ನಿರ್ಮಾಣ ಮಾಡುವುದಕ್ಕೆ ಬಿಡುವುದಿಲ್ಲ ಎಂದು ಹೇಳಿದರು.

ದಯವಿಟ್ಟು ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ, ನಮಗೆ ಪರಿಹಾರ ಬೇಡ, ನಮಗೆ ನಮ್ಮ ಬದುಕು ಮುಖ್ಯ. ಆದ್ದರಿಂದ ಇಲ್ಲಿ ಡ್ಯಾಂ ನಿರ್ಮಾಣ ಮಾಡಿ ನಮ್ಮ ಬದುಕಿಗೆ ಕೊಳ್ಳಿ ಇಡಬೇಡಿ ಎಂದು ಮನವಿ ಮಾಡಿದರು.

ಜೂ.21ರಂದು ದೊಡ್ಡಬಳ್ಳಾಪುರ ತಾಲೂಕಿನ ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಉದ್ದೇಶಿತ ಜಲಾಶಯ ನಿರ್ಮಾಣ ಕಾಮಗಾರಿಗಳ ಸ್ಥಳವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪರಿಶೀಲನೆ ನಡೆಸಿ. ಇದೇ ವೇಳೆ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದರು. ಈ‌ ಸಭೆಯಲ್ಲಿ ಅವರು ಹೇಳಿದ ಮಾತುಗಳನ್ನು ನಾವು ಕೇಳಿದ್ದೇವೆ ಅಷ್ಟೆ, ನಮ್ಮ ಮಾತು, ನಮ್ಮ ಅಹವಾಲನ್ನು ಅವರು ಸ್ವೀಕರಿಸದೇ ಸಭೆಯನ್ನು ಮುಕ್ತಾಯಗೊಳಿಸಿ ಹೊರಟು ಹೋದರು ಎಂದರು.

ಬರಡು ಭೂಮಿ ಇರುವ ಕಡೆಯಲ್ಲಿ ಜಲಾಶಯ ನಿರ್ಮಿಸಲಿ. ಇಲ್ಲಿಯೇ ಜಲಾಶಯ ನಿರ್ಮಿಸಬೇಕು ಎನ್ನುವುದಕ್ಕೆ ಇಲ್ಲಿ ಯಾವುದೇ ನದಿಗೆ ಅಡ್ಡಲಾಗಿ ಅಣೆಕಟ್ಟೆ ನಿರ್ಮಿಸುತ್ತಿಲ್ಲ. ಬದಲಿಗೆ ಎಲ್ಲಿಂದಲೋ ಪೈಪ್ ಮೂಲಕ ತರಲಾಗುತ್ತಿರುವ ನೀರು ಸಂಗ್ರಹಣೆಗೆ ಯಾವ ಸ್ಥಳದಲ್ಲಿ ಬೇಕಿದ್ದರು ಜಲಾಶಯ ನಿರ್ಮಿಸಲು ಅವಕಾಶ ಇದೆ. ಹಾಗಾಗಿ ಬರಡು ಹಾಗೂ ಸರ್ಕಾರಿ ಜಮೀನು ಹೆಚ್ಚಾಗಿ ಇರುವ ಸ್ಥಳದಲ್ಲಿ ಜಲಾಶಯ ನಿರ್ಮಿಸಬೇಕು ಎಂದು ಆಗ್ರಹಿಸಿದರು.

ಜಲಾಶಯ ನಿರ್ಮಾಣದಿಂದ ಮುಳುಗಡೆಯಾಗುತ್ತಿರುವ ಲಕ್ಕೇನಹಳ್ಳಿ, ದಾಸರಪಾಳ್ಯ, ಶ್ರೀರಾಮನಹಳ್ಳಿ ಮುಂತಾದ ಗ್ರಾಮಗಳ ರೈತ ಮಹಿಳೆಯರು ಮಾತನಾಡಿ, ತಲೆತಲಾಂತರದಿಂದ ಬದುಕು ಕಟ್ಟಿಕೊಂಡು ಬಂದಿರುವ ಊರು, ಮನೆಗಳನ್ನು ತೊರೆದು ನಾವು ಎಲ್ಲಿಯೂ ಹೋಗುವುದಿಲ್ಲ. ನಮ್ಮ ಉಸಿರು ಇರುವವರೆಗೂ ಹೋರಾಟ ಮಾಡಿಯಾದರು ಸರಿ ನಮ್ಮ ಹಿರಿಯರು ಬಾಳಿ, ಬದುಕಿರುವ ಮನೆಗಳನ್ನು ಉಳಿಸಿಕೊಳ್ಳುತ್ತೇವೆ ಎಂದು ಪ್ರಮಾಣ ಮಾಡಿದರು.

ಈ ಸಂದರ್ಭದಲ್ಲಿ ದಾಸರಪಾಳ್ಯ ರಾಮಣ್ಣ, ವಕೀಲರಾದ ನರಸಿಂಹ ಗೌಡ, ಸಾಸಲು ಗ್ರಾಮ ಪಂಚಾಯ್ತಿ ಅಧ್ಯಕ್ಷ ನಂದಿನಿ ಪ್ರಸನ್ನ, ಗ್ರಾಮ ಪಂಚಾಯ್ತಿ ಸದಸ್ಯ ಗೋವಿಂದರಾಜ್, ಮುಖಂಡರಾದ ಲಕ್ಕಣ್ಣ, ರೈತ ಮುಖಂಡ ಸೇರಿದಂತೆ ಲಕ್ಕೇನಹಳ್ಳಿ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

8 minutes ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

12 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

13 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

14 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

14 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

21 hours ago