ಎತ್ತಿನಹೊಳೆ ಜಲಾಶಯ: ಬರಡು ಭೂಮಿ ಸರ್ಕಾರಿ ಜಮೀನು ಇರುವ ಕಡೆ ಜಲಾಶಯ ನಿರ್ಮಿಸಲಿ: ನಮ್ಮ ಭೂಮಿ, ಮನೆ ನಮಗೆ ಬೇಕು- ಲಕ್ಕೇನಹಳ್ಳಿಯಲ್ಲಿ ರೈತರ ಪಟ್ಟು

ದೊಡ್ಡಬಳ್ಳಾಪುರ ತಾಲೂಕಿನ ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಉದ್ದೇಶಿತ ಜಲಾಶಯ ನಿರ್ಮಾಣ ಕಾಮಗಾರಿ ಬಹಳ ಬರದಿಂದ ಸಾಗುತ್ತಿದೆ. ಲಕ್ಕೇನಹಳ್ಳಿಯಲ್ಲಿ ಡ್ಯಾಂ ನಿರ್ಮಾಣವಾದರೆ ಡ್ಯಾಂ ಸುತ್ತಾಮುತ್ತ ಇರುವ ಕೆಲವೊಂದು ಹಳ್ಳಿಗಳು ಮುಳುಗಡೆಯಾಗುತ್ತವೆ. ಮುಳುಗಡೆಯಾಗುವ ಹಳ್ಳಿಗಳಲ್ಲಿ ಜನರು ವಾಸ ಮಾಡಲು ಆಗುವುದಿಲ್ಲ. ಆದ್ದರಿಂದ ಈ ಹಳ್ಳಿಗಳ ಜನರಿಗಾಗಿ ಪರ್ಯಾಯವಾಗಿ ಹೊಸ ಹಳ್ಳಿ‌ ಸೃಷ್ಟಿ ಮಾಡಿ ಮನೆ, ಜಮೀನು ನೀಡುತ್ತೇವೆ. ಇದಕ್ಕೆ ಎಲ್ಲರು ಸಹಕರಿಸಬೇಕೆಂದು ಸರ್ಕಾರ ತಿಳಿಸಿದೆ.

ಸರ್ಕಾರದ ಈ ನಿರ್ಧಾರಕ್ಕೆ ಇಲ್ಲಿನ ರೈತರು, ನಿವಾಸಿಗಳು ಭಾರಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನಮಗೆ ಸರ್ಕಾರ ನೀಡುವ ಅಂಗೈ ಅಗಲ ಭೂಮಿ, ಮನೆ ಬೇಡ, ನಮ್ಮ ನಮ್ಮ ಹಳ್ಳಿಗಳಲ್ಲೇ ನಾವು ವಾಸ ಮಾಡುತ್ತೇವೆ. ನಮ್ಮ ಜಮೀನಿನಲ್ಲೇ ಉತ್ತಿಬಿತ್ತು ಬೆಳೆಬೆಳೆದು ಜೀವನ ಸಾಗಿಸುತ್ತೇವೆ. ನಾವು ಹುಟ್ಟಿ ಬೆಳೆದ ಜಾಗವನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ ಎಂದು ಒಕ್ಕೊರಲಿನಿಂದ ಹೇಳಿದ್ದಾರೆ.

ಸಾಸಲು ಹೋಬಳಿಯಲ್ಲಿ ಹೆಚ್ಚಾಗಿ ಭೂಮಿತಾಯಿಯನ್ನೇ ನಂಬಿ ಬದುಕುತ್ತಿದ್ದೇವೆ. ನಮಗೆ ವ್ಯವಸಾಯ ಬಿಟ್ಟರೆ ಬೇರೇನು ಬರುವುದಿಲ್ಲ. ಸುಮಾರು 10 ಕೋಟಿಗೂ ಹೆಚ್ಚು‌ ವಹಿವಾಟಿನ ಅಡಿಕೆ ಬೆಳೆ ಬೆಳೆಯುತ್ತೇವೆ. ಈಗಿದ್ದಾಗ ಇಲ್ಲಿ ಡ್ಯಾಂ ನಿರ್ಮಾಣ‌ ಮಾಡಿ‌ ನಮ್ಮ‌ ಬದುಕನ್ನು‌ ನಾಶ ಮಾಡಲು‌ ಸರ್ಕಾರ ಮುಂದಾಗಿದೆ ಎಂದು ಆಕ್ರೋಶ‌ ವ್ಯಕ್ತಪಡಿಸಿದರು.

ಎತ್ತಿನಹೊಳೆ ಯೋಜನೆಗೆ ನಮ್ಮ ವಿರೋಧವಿಲ್ಲ. ಲಕ್ಕೇನಹಳ್ಳಿಯಲ್ಲಿ ಡ್ಯಾಂ‌ ನಿರ್ಮಾಣ ಮಾಡುವುದಕ್ಕೆ ನಮ್ಮ ವಿರೋಧವಿದೆ. ನಮ್ಮ ಪ್ರಾಣವಾದರೂ ಬಿಡುತ್ತೇವೆ ಡ್ಯಾಂ ನಿರ್ಮಾಣ ಮಾಡುವುದಕ್ಕೆ ಬಿಡುವುದಿಲ್ಲ ಎಂದು ಹೇಳಿದರು.

ದಯವಿಟ್ಟು ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ, ನಮಗೆ ಪರಿಹಾರ ಬೇಡ, ನಮಗೆ ನಮ್ಮ ಬದುಕು ಮುಖ್ಯ. ಆದ್ದರಿಂದ ಇಲ್ಲಿ ಡ್ಯಾಂ ನಿರ್ಮಾಣ ಮಾಡಿ ನಮ್ಮ ಬದುಕಿಗೆ ಕೊಳ್ಳಿ ಇಡಬೇಡಿ ಎಂದು ಮನವಿ ಮಾಡಿದರು.

ಜೂ.21ರಂದು ದೊಡ್ಡಬಳ್ಳಾಪುರ ತಾಲೂಕಿನ ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಉದ್ದೇಶಿತ ಜಲಾಶಯ ನಿರ್ಮಾಣ ಕಾಮಗಾರಿಗಳ ಸ್ಥಳವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪರಿಶೀಲನೆ ನಡೆಸಿ. ಇದೇ ವೇಳೆ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದರು. ಈ‌ ಸಭೆಯಲ್ಲಿ ಅವರು ಹೇಳಿದ ಮಾತುಗಳನ್ನು ನಾವು ಕೇಳಿದ್ದೇವೆ ಅಷ್ಟೆ, ನಮ್ಮ ಮಾತು, ನಮ್ಮ ಅಹವಾಲನ್ನು ಅವರು ಸ್ವೀಕರಿಸದೇ ಸಭೆಯನ್ನು ಮುಕ್ತಾಯಗೊಳಿಸಿ ಹೊರಟು ಹೋದರು ಎಂದರು.

ಬರಡು ಭೂಮಿ ಇರುವ ಕಡೆಯಲ್ಲಿ ಜಲಾಶಯ ನಿರ್ಮಿಸಲಿ. ಇಲ್ಲಿಯೇ ಜಲಾಶಯ ನಿರ್ಮಿಸಬೇಕು ಎನ್ನುವುದಕ್ಕೆ ಇಲ್ಲಿ ಯಾವುದೇ ನದಿಗೆ ಅಡ್ಡಲಾಗಿ ಅಣೆಕಟ್ಟೆ ನಿರ್ಮಿಸುತ್ತಿಲ್ಲ. ಬದಲಿಗೆ ಎಲ್ಲಿಂದಲೋ ಪೈಪ್ ಮೂಲಕ ತರಲಾಗುತ್ತಿರುವ ನೀರು ಸಂಗ್ರಹಣೆಗೆ ಯಾವ ಸ್ಥಳದಲ್ಲಿ ಬೇಕಿದ್ದರು ಜಲಾಶಯ ನಿರ್ಮಿಸಲು ಅವಕಾಶ ಇದೆ. ಹಾಗಾಗಿ ಬರಡು ಹಾಗೂ ಸರ್ಕಾರಿ ಜಮೀನು ಹೆಚ್ಚಾಗಿ ಇರುವ ಸ್ಥಳದಲ್ಲಿ ಜಲಾಶಯ ನಿರ್ಮಿಸಬೇಕು ಎಂದು ಆಗ್ರಹಿಸಿದರು.

ಜಲಾಶಯ ನಿರ್ಮಾಣದಿಂದ ಮುಳುಗಡೆಯಾಗುತ್ತಿರುವ ಲಕ್ಕೇನಹಳ್ಳಿ, ದಾಸರಪಾಳ್ಯ, ಶ್ರೀರಾಮನಹಳ್ಳಿ ಮುಂತಾದ ಗ್ರಾಮಗಳ ರೈತ ಮಹಿಳೆಯರು ಮಾತನಾಡಿ, ತಲೆತಲಾಂತರದಿಂದ ಬದುಕು ಕಟ್ಟಿಕೊಂಡು ಬಂದಿರುವ ಊರು, ಮನೆಗಳನ್ನು ತೊರೆದು ನಾವು ಎಲ್ಲಿಯೂ ಹೋಗುವುದಿಲ್ಲ. ನಮ್ಮ ಉಸಿರು ಇರುವವರೆಗೂ ಹೋರಾಟ ಮಾಡಿಯಾದರು ಸರಿ ನಮ್ಮ ಹಿರಿಯರು ಬಾಳಿ, ಬದುಕಿರುವ ಮನೆಗಳನ್ನು ಉಳಿಸಿಕೊಳ್ಳುತ್ತೇವೆ ಎಂದು ಪ್ರಮಾಣ ಮಾಡಿದರು.

ಈ ಸಂದರ್ಭದಲ್ಲಿ ದಾಸರಪಾಳ್ಯ ರಾಮಣ್ಣ, ವಕೀಲರಾದ ನರಸಿಂಹ ಗೌಡ, ಸಾಸಲು ಗ್ರಾಮ ಪಂಚಾಯ್ತಿ ಅಧ್ಯಕ್ಷ ನಂದಿನಿ ಪ್ರಸನ್ನ, ಗ್ರಾಮ ಪಂಚಾಯ್ತಿ ಸದಸ್ಯ ಗೋವಿಂದರಾಜ್, ಮುಖಂಡರಾದ ಲಕ್ಕಣ್ಣ, ರೈತ ಮುಖಂಡ ಸೇರಿದಂತೆ ಲಕ್ಕೇನಹಳ್ಳಿ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

8 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

18 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

18 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

1 day ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

1 day ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

1 day ago