ಎತ್ತಿನಹೊಳೆ ಜಲಾಶಯ: ಬರಡು ಭೂಮಿ ಸರ್ಕಾರಿ ಜಮೀನು ಇರುವ ಕಡೆ ಜಲಾಶಯ ನಿರ್ಮಿಸಲಿ: ನಮ್ಮ ಭೂಮಿ, ಮನೆ ನಮಗೆ ಬೇಕು- ಲಕ್ಕೇನಹಳ್ಳಿಯಲ್ಲಿ ರೈತರ ಪಟ್ಟು

ದೊಡ್ಡಬಳ್ಳಾಪುರ ತಾಲೂಕಿನ ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಉದ್ದೇಶಿತ ಜಲಾಶಯ ನಿರ್ಮಾಣ ಕಾಮಗಾರಿ ಬಹಳ ಬರದಿಂದ ಸಾಗುತ್ತಿದೆ. ಲಕ್ಕೇನಹಳ್ಳಿಯಲ್ಲಿ ಡ್ಯಾಂ ನಿರ್ಮಾಣವಾದರೆ ಡ್ಯಾಂ ಸುತ್ತಾಮುತ್ತ ಇರುವ ಕೆಲವೊಂದು ಹಳ್ಳಿಗಳು ಮುಳುಗಡೆಯಾಗುತ್ತವೆ. ಮುಳುಗಡೆಯಾಗುವ ಹಳ್ಳಿಗಳಲ್ಲಿ ಜನರು ವಾಸ ಮಾಡಲು ಆಗುವುದಿಲ್ಲ. ಆದ್ದರಿಂದ ಈ ಹಳ್ಳಿಗಳ ಜನರಿಗಾಗಿ ಪರ್ಯಾಯವಾಗಿ ಹೊಸ ಹಳ್ಳಿ‌ ಸೃಷ್ಟಿ ಮಾಡಿ ಮನೆ, ಜಮೀನು ನೀಡುತ್ತೇವೆ. ಇದಕ್ಕೆ ಎಲ್ಲರು ಸಹಕರಿಸಬೇಕೆಂದು ಸರ್ಕಾರ ತಿಳಿಸಿದೆ.

ಸರ್ಕಾರದ ಈ ನಿರ್ಧಾರಕ್ಕೆ ಇಲ್ಲಿನ ರೈತರು, ನಿವಾಸಿಗಳು ಭಾರಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನಮಗೆ ಸರ್ಕಾರ ನೀಡುವ ಅಂಗೈ ಅಗಲ ಭೂಮಿ, ಮನೆ ಬೇಡ, ನಮ್ಮ ನಮ್ಮ ಹಳ್ಳಿಗಳಲ್ಲೇ ನಾವು ವಾಸ ಮಾಡುತ್ತೇವೆ. ನಮ್ಮ ಜಮೀನಿನಲ್ಲೇ ಉತ್ತಿಬಿತ್ತು ಬೆಳೆಬೆಳೆದು ಜೀವನ ಸಾಗಿಸುತ್ತೇವೆ. ನಾವು ಹುಟ್ಟಿ ಬೆಳೆದ ಜಾಗವನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ ಎಂದು ಒಕ್ಕೊರಲಿನಿಂದ ಹೇಳಿದ್ದಾರೆ.

ಸಾಸಲು ಹೋಬಳಿಯಲ್ಲಿ ಹೆಚ್ಚಾಗಿ ಭೂಮಿತಾಯಿಯನ್ನೇ ನಂಬಿ ಬದುಕುತ್ತಿದ್ದೇವೆ. ನಮಗೆ ವ್ಯವಸಾಯ ಬಿಟ್ಟರೆ ಬೇರೇನು ಬರುವುದಿಲ್ಲ. ಸುಮಾರು 10 ಕೋಟಿಗೂ ಹೆಚ್ಚು‌ ವಹಿವಾಟಿನ ಅಡಿಕೆ ಬೆಳೆ ಬೆಳೆಯುತ್ತೇವೆ. ಈಗಿದ್ದಾಗ ಇಲ್ಲಿ ಡ್ಯಾಂ ನಿರ್ಮಾಣ‌ ಮಾಡಿ‌ ನಮ್ಮ‌ ಬದುಕನ್ನು‌ ನಾಶ ಮಾಡಲು‌ ಸರ್ಕಾರ ಮುಂದಾಗಿದೆ ಎಂದು ಆಕ್ರೋಶ‌ ವ್ಯಕ್ತಪಡಿಸಿದರು.

ಎತ್ತಿನಹೊಳೆ ಯೋಜನೆಗೆ ನಮ್ಮ ವಿರೋಧವಿಲ್ಲ. ಲಕ್ಕೇನಹಳ್ಳಿಯಲ್ಲಿ ಡ್ಯಾಂ‌ ನಿರ್ಮಾಣ ಮಾಡುವುದಕ್ಕೆ ನಮ್ಮ ವಿರೋಧವಿದೆ. ನಮ್ಮ ಪ್ರಾಣವಾದರೂ ಬಿಡುತ್ತೇವೆ ಡ್ಯಾಂ ನಿರ್ಮಾಣ ಮಾಡುವುದಕ್ಕೆ ಬಿಡುವುದಿಲ್ಲ ಎಂದು ಹೇಳಿದರು.

ದಯವಿಟ್ಟು ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ, ನಮಗೆ ಪರಿಹಾರ ಬೇಡ, ನಮಗೆ ನಮ್ಮ ಬದುಕು ಮುಖ್ಯ. ಆದ್ದರಿಂದ ಇಲ್ಲಿ ಡ್ಯಾಂ ನಿರ್ಮಾಣ ಮಾಡಿ ನಮ್ಮ ಬದುಕಿಗೆ ಕೊಳ್ಳಿ ಇಡಬೇಡಿ ಎಂದು ಮನವಿ ಮಾಡಿದರು.

ಜೂ.21ರಂದು ದೊಡ್ಡಬಳ್ಳಾಪುರ ತಾಲೂಕಿನ ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಉದ್ದೇಶಿತ ಜಲಾಶಯ ನಿರ್ಮಾಣ ಕಾಮಗಾರಿಗಳ ಸ್ಥಳವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪರಿಶೀಲನೆ ನಡೆಸಿ. ಇದೇ ವೇಳೆ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದರು. ಈ‌ ಸಭೆಯಲ್ಲಿ ಅವರು ಹೇಳಿದ ಮಾತುಗಳನ್ನು ನಾವು ಕೇಳಿದ್ದೇವೆ ಅಷ್ಟೆ, ನಮ್ಮ ಮಾತು, ನಮ್ಮ ಅಹವಾಲನ್ನು ಅವರು ಸ್ವೀಕರಿಸದೇ ಸಭೆಯನ್ನು ಮುಕ್ತಾಯಗೊಳಿಸಿ ಹೊರಟು ಹೋದರು ಎಂದರು.

ಬರಡು ಭೂಮಿ ಇರುವ ಕಡೆಯಲ್ಲಿ ಜಲಾಶಯ ನಿರ್ಮಿಸಲಿ. ಇಲ್ಲಿಯೇ ಜಲಾಶಯ ನಿರ್ಮಿಸಬೇಕು ಎನ್ನುವುದಕ್ಕೆ ಇಲ್ಲಿ ಯಾವುದೇ ನದಿಗೆ ಅಡ್ಡಲಾಗಿ ಅಣೆಕಟ್ಟೆ ನಿರ್ಮಿಸುತ್ತಿಲ್ಲ. ಬದಲಿಗೆ ಎಲ್ಲಿಂದಲೋ ಪೈಪ್ ಮೂಲಕ ತರಲಾಗುತ್ತಿರುವ ನೀರು ಸಂಗ್ರಹಣೆಗೆ ಯಾವ ಸ್ಥಳದಲ್ಲಿ ಬೇಕಿದ್ದರು ಜಲಾಶಯ ನಿರ್ಮಿಸಲು ಅವಕಾಶ ಇದೆ. ಹಾಗಾಗಿ ಬರಡು ಹಾಗೂ ಸರ್ಕಾರಿ ಜಮೀನು ಹೆಚ್ಚಾಗಿ ಇರುವ ಸ್ಥಳದಲ್ಲಿ ಜಲಾಶಯ ನಿರ್ಮಿಸಬೇಕು ಎಂದು ಆಗ್ರಹಿಸಿದರು.

ಜಲಾಶಯ ನಿರ್ಮಾಣದಿಂದ ಮುಳುಗಡೆಯಾಗುತ್ತಿರುವ ಲಕ್ಕೇನಹಳ್ಳಿ, ದಾಸರಪಾಳ್ಯ, ಶ್ರೀರಾಮನಹಳ್ಳಿ ಮುಂತಾದ ಗ್ರಾಮಗಳ ರೈತ ಮಹಿಳೆಯರು ಮಾತನಾಡಿ, ತಲೆತಲಾಂತರದಿಂದ ಬದುಕು ಕಟ್ಟಿಕೊಂಡು ಬಂದಿರುವ ಊರು, ಮನೆಗಳನ್ನು ತೊರೆದು ನಾವು ಎಲ್ಲಿಯೂ ಹೋಗುವುದಿಲ್ಲ. ನಮ್ಮ ಉಸಿರು ಇರುವವರೆಗೂ ಹೋರಾಟ ಮಾಡಿಯಾದರು ಸರಿ ನಮ್ಮ ಹಿರಿಯರು ಬಾಳಿ, ಬದುಕಿರುವ ಮನೆಗಳನ್ನು ಉಳಿಸಿಕೊಳ್ಳುತ್ತೇವೆ ಎಂದು ಪ್ರಮಾಣ ಮಾಡಿದರು.

ಈ ಸಂದರ್ಭದಲ್ಲಿ ದಾಸರಪಾಳ್ಯ ರಾಮಣ್ಣ, ವಕೀಲರಾದ ನರಸಿಂಹ ಗೌಡ, ಸಾಸಲು ಗ್ರಾಮ ಪಂಚಾಯ್ತಿ ಅಧ್ಯಕ್ಷ ನಂದಿನಿ ಪ್ರಸನ್ನ, ಗ್ರಾಮ ಪಂಚಾಯ್ತಿ ಸದಸ್ಯ ಗೋವಿಂದರಾಜ್, ಮುಖಂಡರಾದ ಲಕ್ಕಣ್ಣ, ರೈತ ಮುಖಂಡ ಸೇರಿದಂತೆ ಲಕ್ಕೇನಹಳ್ಳಿ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

8 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

8 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

11 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

12 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

16 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

20 hours ago