ದೊಡ್ಡಬಳ್ಳಾಪುರ: ಜಲಸಂಪನ್ಮೂಲ ಇಲಾಖೆ ಹಾಗೂ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ವತಿಯಿಂದ ಜಲಸಂಪನ್ಮೂಲ ಸಚಿವರು ಹಾಗೂ ಬೆಂಗಳೂರು ದಕ್ಷಿಣ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಕಾಮಗಾರಿಗಳ ಪರಿವೀಕ್ಷಣಾ ಸಭೆಯಲ್ಲಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಭಾಗವಹಿಸಿದರು.
ಸಭೆಯಲ್ಲಿ ಮಾತನಾಡಿದ ಶಾಸಕ ಧೀರಜ್ ಮುನಿರಾಜ್, ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಎತ್ತಿನಹೊಳೆ ಡ್ಯಾಂ ನಿರ್ಮಾಣಕ್ಕೆ ಸ್ಥಳೀಯ ರೈತರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ರೈತರ ಅಭಿಪ್ರಾಯಕ್ಕೆ ಗೌರವ ನೀಡಿ, ಡ್ಯಾಂ ನಿರ್ಮಾಣವಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಚಿವರಲ್ಲಿ ಮನವಿ ಸಲ್ಲಿಸಿದರು.
ಇದಲ್ಲದೆ, ಎತ್ತಿನಹೊಳೆ ಯೋಜನೆ ಕಾಮಗಾರಿಗಳಿಂದ ಕ್ಷೇತ್ರದ ಹಲವು ಗ್ರಾಮಗಳ ರಸ್ತೆಗಳಿಗೆ ಹಾನಿಯಾಗಿದ್ದು, ಅವುಗಳ ದುರಸ್ತಿ ಕಾಮಗಾರಿಗೆ ಅಗತ್ಯ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ರಾಮಲಿಂಗಾ ರೆಡ್ಡಿ, ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಎತ್ತಿನಹೊಳೆ ಡ್ಯಾಂ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ರೈತರು ಹಾಗೂ ಶಾಸಕ ಧೀರಜ್ ಮುನಿರಾಜ್ ಸಲ್ಲಿಸಿರುವ ಮನವಿ ಮತ್ತು ಅಹವಾಲುಗಳನ್ನು ಸ್ವೀಕರಿಸಿದ್ದು, ಅವುಗಳ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ಭರವಸೆ ನೀಡಿದರು.
ಈ ವೇಳೆ ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಪ್ರಮುಖರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…
ದೊಡ್ಡಬಳ್ಳಾಪುರ: ಬೆಸ್ಕಾಂ ವತಿಯಿಂದ ತುರ್ತು ನಿರ್ವಹಣೆ ಮತ್ತು ವಿದ್ಯುತ್ ಮಾರ್ಗಗಳ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 25ರಂದು (ಶನಿವಾರ) ದೊಡ್ಡಬಳ್ಳಾಪುರ ನಗರದ…
ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಕಳೆದ ಕೆಲವು ದಿನಗಳ ಘಟನೆಗಳನ್ನು ನೋಡುತ್ತಿದ್ದರೆ ನಮ್ಮ ದೇಶದ ಸುತ್ತಮುತ್ತ ನಡೆದ ಬಾಂಗ್ಲಾ,…
ಕರ್ನಾಟಕವನ್ನು ದೇಶದ ಹೂಡಿಕೆ ಸ್ನೇಹಿ ಪ್ರವಾಸೋದ್ಯಮ ರಾಜ್ಯವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಪ್ರವಾಸೋದ್ಯಮ ನೀತಿಗಳನ್ನು ಮತ್ತಷ್ಟು ಸರಳೀಕರಿಸುತ್ತಿದ್ದು, ಖಾಸಗಿ ಹೂಡಿಕೆದಾರರಿಗೆ…