ಎತ್ತಿನಹೊಳೆ ಯೋಜನೆಗೆ ಅರಣ್ಯ ಭೂಮಿ ಬಳಕೆಗೆ ಶೀಘ್ರ ತಾತ್ವಿಕ ಅನುಮೋದನೆಗೆ ಮನವಿ

ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ನವದೆಹಲಿಯಲ್ಲಿ ಮಂಗಳವಾರ ಭೇಟಿಯಾಗಿ, ದಕ್ಷಿಣ ಕರ್ನಾಟಕದ ಬರಪೀಡಿತ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸುವ ಉದ್ದೇಶದ ಎತ್ತಿನಹೊಳೆ ಯೋಜನೆಗೆ ಅರಣ್ಯ ಭೂಮಿ ಬಳಕೆಗೆ ಶೀಘ್ರ ತಾತ್ವಿಕ ಅನುಮೋದನೆ ನೀಡುವಂತೆ ಕೋರಿ ಮನವಿ ಸಲ್ಲಿಸಿದ್ದಾರೆ.

ಹಾಸನ ಮತ್ತು ತುಮಕೂರು ಜಿಲ್ಲೆಗಳಲ್ಲಿ 111.02 ಹೆಕ್ಟೇರ್ (173.31 ಹೆಕ್ಟೇರ್ ನಿಂದ ಪರಿಷ್ಕೃತ) ಅರಣ್ಯ ಭೂಮಿ ಬಳಕೆಗೆ ಒಪ್ಪಿಗೆ ನೀಡುವಂತೆ ರಾಜ್ಯ ಸರ್ಕಾರವು ಜೂನ್ 4 ರಂದು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ (MoEF) ಪ್ರಸ್ತಾವ ಸಲ್ಲಿಸಿದೆ ಎಂದು ಜಲಸಂಪನ್ಮೂಲ ಸಚಿವರು ಆಗಿರುವ ಡಿ.ಕೆ.ಶಿವಕುಮಾರ್ ಸಭೆಯಲ್ಲಿ ತಿಳಿಸಿದರು.

ಈ ಪ್ರಸ್ತಾವನ್ನು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯದ ಸಲಹಾ ಸಮಿತಿಯು ಜೂನ್ 24 ರಂದು ಚರ್ಚಿಸಿತ್ತು. ನಂತರ ಜುಲೈ 7 ರಂದು ಅರಣ್ಯಗಳ ಮಹಾನಿರೀಕ್ಷಕರು ( Inspector General of Forests) EDS (ಅಗತ್ಯ ವಿವರ) ಕೋರಿದ್ದಾರೆ.

ಇದು ಪರಿಸರ ಅಥವಾ ಅರಣ್ಯ ಬಳಕೆಗೆ ಅಗತ್ಯವಿರುವ ಯೋಜನೆಗಳ ಮೌಲ್ಯಮಾಪನದ ಸಮಯದಲ್ಲಿ ಕೇಂದ್ರ ಸಚಿವಾಲಯವು ಬಳಸುವ ಔಪಚಾರಿಕ ಪ್ರಕ್ರಿಯೆಯಾಗಿದೆ. EDS ಸಿದ್ಧಪಡಿಸಲಾಗುತ್ತಿದ್ದು, ಅನುಮೋದನೆಗಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಆದಷ್ಟು ಬೇಗ ತಾತ್ವಿಕ ಅನುಮೋದನೆ ನೀಡಲು ನಿಮ್ಮ ಮಧ್ಯಸ್ಥಿಕೆ ಕೋರುವುದಾಗಿ ಡಿಕೆ ಶಿವಕುಮಾರ್ ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಎತ್ತಿನಹೊಳೆ ಯೋಜನೆ ಅನುಷ್ಟಾನದಿಂದ ಏಳು ಜಿಲ್ಲೆಗಳಲ್ಲಿ 75.59 ಲಕ್ಷ ಜನರಿಗೆ ಅನುಕೂಲವಾಗಲಿದೆ. 527 ಕೆರೆಗಳನ್ನು ಅವುಗಳ ಶೇ. 50 ರಷ್ಟು ಸಾಮರ್ಥ್ಯದಷ್ಟು ತುಂಬಿಸಲು ಮತ್ತು ಅಂತರ್ಜಲದ ಮಟ್ಟವನ್ನು ಮರುಪೂರಣಗೊಳಿಸಲು ನೆರವಾಗುತ್ತದೆ ಎಂದು ಅವರು ಹೇಳಿದ್ದಾರೆ.

ಈ ಯೋಜನೆಯು ಕರ್ನಾಟಕದ 6,657 ಹಳ್ಳಿಗಳು ಮತ್ತು 38 ಪಟ್ಟಣಗಳ 75 ಲಕ್ಷಕ್ಕೂ ಹೆಚ್ಚು ಜನರಿಗೆ ಪ್ರಯೋಜನವನ್ನು ನೀಡುತ್ತದೆ ಎಂದರು.

Ramesh Babu

Journalist

Recent Posts

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

4 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

16 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

16 hours ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

16 hours ago

ಮುಂದಿನ ದಿನಗಳಲ್ಲಿ 1000 ಸಬ್ ಇನ್ಸ್ ಪೆಕ್ಟರ್, 8000 ಕಾನ್ಸ್ಟೇಬಲ್ ಗಳ ನೇಮಕ – ಗೃಹ ಸಚಿವ ಪರಮೇಶ್ವರ್

  ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…

16 hours ago

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

20 hours ago