ಎತ್ತಿನಹೊಳೆ ಯೋಜನೆಗೆ ಅರಣ್ಯ ಭೂಮಿ ಬಳಕೆಗೆ ಶೀಘ್ರ ತಾತ್ವಿಕ ಅನುಮೋದನೆಗೆ ಮನವಿ

ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ನವದೆಹಲಿಯಲ್ಲಿ ಮಂಗಳವಾರ ಭೇಟಿಯಾಗಿ, ದಕ್ಷಿಣ ಕರ್ನಾಟಕದ ಬರಪೀಡಿತ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸುವ ಉದ್ದೇಶದ ಎತ್ತಿನಹೊಳೆ ಯೋಜನೆಗೆ ಅರಣ್ಯ ಭೂಮಿ ಬಳಕೆಗೆ ಶೀಘ್ರ ತಾತ್ವಿಕ ಅನುಮೋದನೆ ನೀಡುವಂತೆ ಕೋರಿ ಮನವಿ ಸಲ್ಲಿಸಿದ್ದಾರೆ.

ಹಾಸನ ಮತ್ತು ತುಮಕೂರು ಜಿಲ್ಲೆಗಳಲ್ಲಿ 111.02 ಹೆಕ್ಟೇರ್ (173.31 ಹೆಕ್ಟೇರ್ ನಿಂದ ಪರಿಷ್ಕೃತ) ಅರಣ್ಯ ಭೂಮಿ ಬಳಕೆಗೆ ಒಪ್ಪಿಗೆ ನೀಡುವಂತೆ ರಾಜ್ಯ ಸರ್ಕಾರವು ಜೂನ್ 4 ರಂದು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ (MoEF) ಪ್ರಸ್ತಾವ ಸಲ್ಲಿಸಿದೆ ಎಂದು ಜಲಸಂಪನ್ಮೂಲ ಸಚಿವರು ಆಗಿರುವ ಡಿ.ಕೆ.ಶಿವಕುಮಾರ್ ಸಭೆಯಲ್ಲಿ ತಿಳಿಸಿದರು.

ಈ ಪ್ರಸ್ತಾವನ್ನು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯದ ಸಲಹಾ ಸಮಿತಿಯು ಜೂನ್ 24 ರಂದು ಚರ್ಚಿಸಿತ್ತು. ನಂತರ ಜುಲೈ 7 ರಂದು ಅರಣ್ಯಗಳ ಮಹಾನಿರೀಕ್ಷಕರು ( Inspector General of Forests) EDS (ಅಗತ್ಯ ವಿವರ) ಕೋರಿದ್ದಾರೆ.

ಇದು ಪರಿಸರ ಅಥವಾ ಅರಣ್ಯ ಬಳಕೆಗೆ ಅಗತ್ಯವಿರುವ ಯೋಜನೆಗಳ ಮೌಲ್ಯಮಾಪನದ ಸಮಯದಲ್ಲಿ ಕೇಂದ್ರ ಸಚಿವಾಲಯವು ಬಳಸುವ ಔಪಚಾರಿಕ ಪ್ರಕ್ರಿಯೆಯಾಗಿದೆ. EDS ಸಿದ್ಧಪಡಿಸಲಾಗುತ್ತಿದ್ದು, ಅನುಮೋದನೆಗಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಆದಷ್ಟು ಬೇಗ ತಾತ್ವಿಕ ಅನುಮೋದನೆ ನೀಡಲು ನಿಮ್ಮ ಮಧ್ಯಸ್ಥಿಕೆ ಕೋರುವುದಾಗಿ ಡಿಕೆ ಶಿವಕುಮಾರ್ ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಎತ್ತಿನಹೊಳೆ ಯೋಜನೆ ಅನುಷ್ಟಾನದಿಂದ ಏಳು ಜಿಲ್ಲೆಗಳಲ್ಲಿ 75.59 ಲಕ್ಷ ಜನರಿಗೆ ಅನುಕೂಲವಾಗಲಿದೆ. 527 ಕೆರೆಗಳನ್ನು ಅವುಗಳ ಶೇ. 50 ರಷ್ಟು ಸಾಮರ್ಥ್ಯದಷ್ಟು ತುಂಬಿಸಲು ಮತ್ತು ಅಂತರ್ಜಲದ ಮಟ್ಟವನ್ನು ಮರುಪೂರಣಗೊಳಿಸಲು ನೆರವಾಗುತ್ತದೆ ಎಂದು ಅವರು ಹೇಳಿದ್ದಾರೆ.

ಈ ಯೋಜನೆಯು ಕರ್ನಾಟಕದ 6,657 ಹಳ್ಳಿಗಳು ಮತ್ತು 38 ಪಟ್ಟಣಗಳ 75 ಲಕ್ಷಕ್ಕೂ ಹೆಚ್ಚು ಜನರಿಗೆ ಪ್ರಯೋಜನವನ್ನು ನೀಡುತ್ತದೆ ಎಂದರು.

Ramesh Babu

Journalist

Recent Posts

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

2 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

11 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

21 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

23 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

1 day ago