ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನವದೆಹಲಿಯಲ್ಲಿ ಮಂಗಳವಾರ ಭೇಟಿಯಾಗಿ, ದಕ್ಷಿಣ ಕರ್ನಾಟಕದ ಬರಪೀಡಿತ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸುವ ಉದ್ದೇಶದ ಎತ್ತಿನಹೊಳೆ ಯೋಜನೆಗೆ ಅರಣ್ಯ ಭೂಮಿ ಬಳಕೆಗೆ ಶೀಘ್ರ ತಾತ್ವಿಕ ಅನುಮೋದನೆ ನೀಡುವಂತೆ ಕೋರಿ ಮನವಿ ಸಲ್ಲಿಸಿದ್ದಾರೆ.
ಹಾಸನ ಮತ್ತು ತುಮಕೂರು ಜಿಲ್ಲೆಗಳಲ್ಲಿ 111.02 ಹೆಕ್ಟೇರ್ (173.31 ಹೆಕ್ಟೇರ್ ನಿಂದ ಪರಿಷ್ಕೃತ) ಅರಣ್ಯ ಭೂಮಿ ಬಳಕೆಗೆ ಒಪ್ಪಿಗೆ ನೀಡುವಂತೆ ರಾಜ್ಯ ಸರ್ಕಾರವು ಜೂನ್ 4 ರಂದು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ (MoEF) ಪ್ರಸ್ತಾವ ಸಲ್ಲಿಸಿದೆ ಎಂದು ಜಲಸಂಪನ್ಮೂಲ ಸಚಿವರು ಆಗಿರುವ ಡಿ.ಕೆ.ಶಿವಕುಮಾರ್ ಸಭೆಯಲ್ಲಿ ತಿಳಿಸಿದರು.
ಈ ಪ್ರಸ್ತಾವನ್ನು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯದ ಸಲಹಾ ಸಮಿತಿಯು ಜೂನ್ 24 ರಂದು ಚರ್ಚಿಸಿತ್ತು. ನಂತರ ಜುಲೈ 7 ರಂದು ಅರಣ್ಯಗಳ ಮಹಾನಿರೀಕ್ಷಕರು ( Inspector General of Forests) EDS (ಅಗತ್ಯ ವಿವರ) ಕೋರಿದ್ದಾರೆ.
ಇದು ಪರಿಸರ ಅಥವಾ ಅರಣ್ಯ ಬಳಕೆಗೆ ಅಗತ್ಯವಿರುವ ಯೋಜನೆಗಳ ಮೌಲ್ಯಮಾಪನದ ಸಮಯದಲ್ಲಿ ಕೇಂದ್ರ ಸಚಿವಾಲಯವು ಬಳಸುವ ಔಪಚಾರಿಕ ಪ್ರಕ್ರಿಯೆಯಾಗಿದೆ. EDS ಸಿದ್ಧಪಡಿಸಲಾಗುತ್ತಿದ್ದು, ಅನುಮೋದನೆಗಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಆದಷ್ಟು ಬೇಗ ತಾತ್ವಿಕ ಅನುಮೋದನೆ ನೀಡಲು ನಿಮ್ಮ ಮಧ್ಯಸ್ಥಿಕೆ ಕೋರುವುದಾಗಿ ಡಿಕೆ ಶಿವಕುಮಾರ್ ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಎತ್ತಿನಹೊಳೆ ಯೋಜನೆ ಅನುಷ್ಟಾನದಿಂದ ಏಳು ಜಿಲ್ಲೆಗಳಲ್ಲಿ 75.59 ಲಕ್ಷ ಜನರಿಗೆ ಅನುಕೂಲವಾಗಲಿದೆ. 527 ಕೆರೆಗಳನ್ನು ಅವುಗಳ ಶೇ. 50 ರಷ್ಟು ಸಾಮರ್ಥ್ಯದಷ್ಟು ತುಂಬಿಸಲು ಮತ್ತು ಅಂತರ್ಜಲದ ಮಟ್ಟವನ್ನು ಮರುಪೂರಣಗೊಳಿಸಲು ನೆರವಾಗುತ್ತದೆ ಎಂದು ಅವರು ಹೇಳಿದ್ದಾರೆ.
ಈ ಯೋಜನೆಯು ಕರ್ನಾಟಕದ 6,657 ಹಳ್ಳಿಗಳು ಮತ್ತು 38 ಪಟ್ಟಣಗಳ 75 ಲಕ್ಷಕ್ಕೂ ಹೆಚ್ಚು ಜನರಿಗೆ ಪ್ರಯೋಜನವನ್ನು ನೀಡುತ್ತದೆ ಎಂದರು.
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…