ಎತ್ತಿನಹೊಳೆ ಯೋಜನೆಗೆ ಅರಣ್ಯ ಭೂಮಿ ಬಳಕೆಗೆ ಶೀಘ್ರ ತಾತ್ವಿಕ ಅನುಮೋದನೆಗೆ ಮನವಿ

ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ನವದೆಹಲಿಯಲ್ಲಿ ಮಂಗಳವಾರ ಭೇಟಿಯಾಗಿ, ದಕ್ಷಿಣ ಕರ್ನಾಟಕದ ಬರಪೀಡಿತ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸುವ ಉದ್ದೇಶದ ಎತ್ತಿನಹೊಳೆ ಯೋಜನೆಗೆ ಅರಣ್ಯ ಭೂಮಿ ಬಳಕೆಗೆ ಶೀಘ್ರ ತಾತ್ವಿಕ ಅನುಮೋದನೆ ನೀಡುವಂತೆ ಕೋರಿ ಮನವಿ ಸಲ್ಲಿಸಿದ್ದಾರೆ.

ಹಾಸನ ಮತ್ತು ತುಮಕೂರು ಜಿಲ್ಲೆಗಳಲ್ಲಿ 111.02 ಹೆಕ್ಟೇರ್ (173.31 ಹೆಕ್ಟೇರ್ ನಿಂದ ಪರಿಷ್ಕೃತ) ಅರಣ್ಯ ಭೂಮಿ ಬಳಕೆಗೆ ಒಪ್ಪಿಗೆ ನೀಡುವಂತೆ ರಾಜ್ಯ ಸರ್ಕಾರವು ಜೂನ್ 4 ರಂದು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ (MoEF) ಪ್ರಸ್ತಾವ ಸಲ್ಲಿಸಿದೆ ಎಂದು ಜಲಸಂಪನ್ಮೂಲ ಸಚಿವರು ಆಗಿರುವ ಡಿ.ಕೆ.ಶಿವಕುಮಾರ್ ಸಭೆಯಲ್ಲಿ ತಿಳಿಸಿದರು.

ಈ ಪ್ರಸ್ತಾವನ್ನು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯದ ಸಲಹಾ ಸಮಿತಿಯು ಜೂನ್ 24 ರಂದು ಚರ್ಚಿಸಿತ್ತು. ನಂತರ ಜುಲೈ 7 ರಂದು ಅರಣ್ಯಗಳ ಮಹಾನಿರೀಕ್ಷಕರು ( Inspector General of Forests) EDS (ಅಗತ್ಯ ವಿವರ) ಕೋರಿದ್ದಾರೆ.

ಇದು ಪರಿಸರ ಅಥವಾ ಅರಣ್ಯ ಬಳಕೆಗೆ ಅಗತ್ಯವಿರುವ ಯೋಜನೆಗಳ ಮೌಲ್ಯಮಾಪನದ ಸಮಯದಲ್ಲಿ ಕೇಂದ್ರ ಸಚಿವಾಲಯವು ಬಳಸುವ ಔಪಚಾರಿಕ ಪ್ರಕ್ರಿಯೆಯಾಗಿದೆ. EDS ಸಿದ್ಧಪಡಿಸಲಾಗುತ್ತಿದ್ದು, ಅನುಮೋದನೆಗಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಆದಷ್ಟು ಬೇಗ ತಾತ್ವಿಕ ಅನುಮೋದನೆ ನೀಡಲು ನಿಮ್ಮ ಮಧ್ಯಸ್ಥಿಕೆ ಕೋರುವುದಾಗಿ ಡಿಕೆ ಶಿವಕುಮಾರ್ ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಎತ್ತಿನಹೊಳೆ ಯೋಜನೆ ಅನುಷ್ಟಾನದಿಂದ ಏಳು ಜಿಲ್ಲೆಗಳಲ್ಲಿ 75.59 ಲಕ್ಷ ಜನರಿಗೆ ಅನುಕೂಲವಾಗಲಿದೆ. 527 ಕೆರೆಗಳನ್ನು ಅವುಗಳ ಶೇ. 50 ರಷ್ಟು ಸಾಮರ್ಥ್ಯದಷ್ಟು ತುಂಬಿಸಲು ಮತ್ತು ಅಂತರ್ಜಲದ ಮಟ್ಟವನ್ನು ಮರುಪೂರಣಗೊಳಿಸಲು ನೆರವಾಗುತ್ತದೆ ಎಂದು ಅವರು ಹೇಳಿದ್ದಾರೆ.

ಈ ಯೋಜನೆಯು ಕರ್ನಾಟಕದ 6,657 ಹಳ್ಳಿಗಳು ಮತ್ತು 38 ಪಟ್ಟಣಗಳ 75 ಲಕ್ಷಕ್ಕೂ ಹೆಚ್ಚು ಜನರಿಗೆ ಪ್ರಯೋಜನವನ್ನು ನೀಡುತ್ತದೆ ಎಂದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

3 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

4 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

5 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

12 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago