ಎತ್ತಿನಹೊಳೆ ಯೋಜ‌ನೆ: ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ: ಜಲಾಶಯ ನಿರ್ಮಾಣ ಮಾಡದಂತೆ ರಾಷ್ಟ್ರಪತಿಗೆ ಪತ್ರ ಬರೆದ ಲಕ್ಕೇನಹಳ್ಳಿ‌ ಹಾಗೂ ಸುತ್ತಮುತ್ತ ಗ್ರಾಮಗಳ ಗ್ರಾಮಸ್ಥರು

ಎತ್ತಿನಹೊಳೆಯಿಂದ ಬರುವ ನೀರು ಸಂಗ್ರಹಣೆ ಮಾಡಲು ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ನಿರ್ಧರಿಸಿದ್ದು, ಇದರಿಂದ ಲಕ್ಕೇನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಐದು ಗ್ರಾಮಗಳು ಮುಳುಗಡೆಯಾಗಲಿವೆ. ಈ ಗ್ರಾಮಗಳ ರೈತರು ಈಗಾಗಲೇ ಈ ಜಲಾಶಯ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಹೋರಾಟ ಪ್ರಾರಂಭಿಸಿದ್ದು, ಯಾವುದೇ ಕಾರಣಕ್ಕೂ ಇಲ್ಲಿ ಜಲಾಶಯ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ.

ಲಕ್ಕೇನಹಳ್ಳಿಯಲ್ಲಿ ಯಾವುದೇ ಕಾರಣಕ್ಕೂ ಜಲಾಶಯ ನಿರ್ಮಾಣ ಮಾಡಬಾರದೆಂದು ರಾಷ್ಟ್ರಪತಿ ದ್ರೌಪದಿ ಮುರ್ಮು, ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಇತರರಿಗೆ ಲಿಖಿತ ರೂಪದಲ್ಲಿ ಪತ್ರ ಬರೆದು ಗಮನ ಸೆಳೆಯಲಾಗಿದೆ.

ಈಗಾಗಲೇ ಮನವಿ ಪತ್ರ ಸರ್ಕಾರದ ಗಮನಕ್ಕೆ ತಲುಪಿದ್ದು, ಮುಖ್ಯಮಂತ್ರಿಗಳ ಕಚೇರಿಯಿಂದ ಜಲಸಂಪನ್ಮೂಲ ಇಲಾಖೆಗೆ ಸೂಕ್ತ ಕ್ರಮಕ್ಕಾಗಿ ಮಂಡಿಸಲಾಗಿದೆ.  ಮುಖ್ಯಮಂತ್ರಿಗಳನ್ನು ಈ ಭಾಗದ ರೈತರು ಭೇಟಿಯಾಗುವಂತೆ ಜಲಸಂಪನ್ಮೂಲ ಇಲಾಖೆ ತಿಳಿಸಿದೆ. ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಿಂದ ಶುಕ್ರವಾರ ಬರುವರೆಂದು, ಆನಂತರ ರೈತರ ಭೇಟಿಯ ಬಗ್ಗೆ ಮಾಹಿತಿ ನೀಡಲಾಗುವುದೆಂದು ಸಿಎಂ ಕಚೇರಿ ಮಾಹಿತಿ ನೀಡಲಾಗಿದೆ ಎಂದು ತಿಳಿದುಬಂದಿದೆ…

ಪತ್ರದಲ್ಲೇನಿದೆ…?

ವ್ಯವಸಾಯ ಬಿಟ್ಟರೆ ನಮಗೆ ಏನು ಗತಿಯಿಲ್ಲ. ಈಗ ಎತ್ತಿನಹೊಳೆ ಯೋಜನೆಯಿಂದ ವ್ಯವಸಾಯಕ್ಕೆ ಕುತ್ತು ಬಂದೊದಗಿ ನಾವುಗಳು ಸ್ವಾವಲಂಬಿ ಕೃಷಿ ಜೀವನದಿಂದ ಪರವಾಲಂಬಿಗಳಾಗುವಂಥ ಪರಿಸ್ಥಿತಿಯನ್ನು ಕೃತಕವಾಗಿ ದುರುದ್ದೇಶದಿಂದ ಸೃಷ್ಠಿ ಮಾಡಲಾಗುತ್ತಿರುವ ದುರಂತವು ನಮ್ಮ ಮುಂದಿದೆ. ನಮ್ಮಂತಹ ಬಡಪಾಯಿಗಳ ಬದುಕುಗಳ ಕತ್ತು ಹಿಚುಕಿ ಕೊಲ್ಲುವ ಉಮೇದು ಯಾಕೋ?.

ಎತ್ತಿನಹೊಳೆ ಯೋಜನೆಯ ಹಿನ್ನೆಲೆಯಲ್ಲಿ ನಮ್ಮ ಗ್ರಾಮಗಳಲ್ಲಿ ಸಾಮಾಜಿಕ ಪರಿಣಾಮ ನಿರ್ಧರಣಾ ಅಧ್ಯಯನವನ್ನು ಮಾಡಿರುವುದಿಲ್ಲ. ಹಾಗೇನಾದರೂ, ಸಾಮಾಜಿಕ ನಿರ್ಧರಣಾ ಅಧ್ಯಯನವನ್ನು ಮಾಡಿದರೆ ವಾಸ್ತವಾಂಶವು ಹೊರಹೊಮ್ಮುವುದೆಂಬ ದುರುದ್ದೇಶದಿಂದ ಸಾಮಾಜಿಕ ಪರಿಣಾಮ ನಿರ್ಧರಣಾ ಅಧ್ಯಯನವನ್ನು ಮಾಡದಂತೆ ಮರೆಮಾಚಲಾಗಿದೆ. ಸಾಮಾಜಿಕ ಪರಿಣಾಮ ನಿರ್ಧರಣಾ ಅಧ್ಯಯನವನ್ನು ಮಾಡದೇ ಇರುವುದು ಕಾನೂನುಬಾಹಿರ ಹಾಗೂ ಜೀವವಿರೋಧಿಯಾಗಿರುತ್ತದೆ.

ಎತ್ತಿನಹೊಳೆ ಯೋಜನೆಯ ಪೂರ್ವಾಪರದ ಬಗ್ಗೆಯಾಗಲಿ ಅದರ ಪ್ರಕ್ರಿಯೆಯ ಬಗ್ಗೆಯಾಗಲಿ ಒಟ್ಟಾರೆ ಎತ್ತಿನಹೊಳೆ ಯೋಜನೆ ಭಾಗವಾಗಿ ಈ ಹಿಂದೆ ಬೈರಗೊಂಡ್ಲು ಜಲಾಶಯ ನಿರ್ಮಾಣ ಸಂಬಂಧ, ಈಗ ಲಕ್ಕೇನಹಳ್ಳಿ ಬಳಿಯ ಜಲಾಶಯ ನಿರ್ಮಾಣ ಸಂಬಂಧ ಯಾವುದೇ ಮಾಹಿತಿಯನ್ನು ರೈತರಿಗೆ ನೀಡದೆ ರೈತರನ್ನು ಕಗ್ಗತ್ತಲಿನಲ್ಲಿಟ್ಟು ಯೋಜನೆಯನ್ನು ಮುಂದುವರೆಸಲು ಮುಂದಾಗಿರುವುದು ಜೀವವಿರೋಧಿ, ಕಾನೂನು ವಿರೋಧಿ, ನ್ಯಾಯ ವಿರೋಧಿಯಾಗಿರುತ್ತದೆ ಹಾಗೂ ಏಕಪಕ್ಷೀಯವಾಗಿರುತ್ತದೆ.

ನಮ್ಮ ಗ್ರಾಮದ ಪರಿಸರ, ಜೀವವೈವಿಧ್ಯ ಪರಂಪರೆ ಇತಿಹಾಸಕ್ಕೆ ಧಕ್ಕೆಯುಂಟು ಮಾಡಿ ನಾಶಗೊಳಿಸುವ ಹುನ್ನಾರವು ಈ ಯೊಜನೆಯ ಹಿಂದಿರುವುದು ಸ್ಪಷ್ಟವಾಗಿರುತ್ತದೆ.

ನಮ್ಮ ಪರಂಪರೆಯಂತೆ, ಸಂಪ್ರದಾಯದಂತೆ, ಸಂಸ್ಕೃತಿಯಂತೆ ನಮ್ಮ ಪೂರ್ವಿಕರನ್ನು ಅವರ ಸಮಾಧಿಗಳನ್ನು ಪೂಜಿಸುವುದು ಕೂಡ ನಮ್ಮ ಬದುಕಿನ ಭಾಗ ಹಾಗೂ ನಮ್ಮ ಧಾರ್ಮಿಕತೆಯಾಗಿರುತ್ತದೆ. ಆ ನಮ್ಮ ಧಾರ್ಮಿಕ ಹಕ್ಕಿಗೆ ಎತ್ತಿನಹೊಳೆ ಯೋಜನೆ ಭಾಗವಾಗಿ ನಿರ್ಮಾಣವಾಗುವ ಜಲಾಶಯವು ಧಕ್ಕೆಯುಂಟು ಮಾಡುತ್ತಿದೆ.

ನಮ್ಮ ಗ್ರಾಮವನ್ನು ನಮ್ಮ ಗ್ರಾಮಗಳ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳುವ ಮೂಲಕ ನಮ್ಮ ಬದುಕುವ ಹಕ್ಕನ್ನು ಉಲ್ಲಂಘನೆ ಮಾಡುವುದಾಗಿರುತ್ತದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೇ ಜಲಾಶಯ ನಿರ್ಮಾಣ ಮಾಡಬಹುದಿತ್ತಾದರೂ ನಮ್ಮ ಭಾಗದಲ್ಲಿಯೇ ಮಾಡಬೇಕೆಂಬ ಹಠವೇಕೆ?

ನೂರಾರು ಕಿಲೋಮೀಟರ್‌ ದೂರದಿಂದ ನೀರು ತರುವ ಸಾಮರ್ಥ್ಯವಿರುವವರಿಗೆ ಇನ್ನೊಂದಷ್ಟು ಕಿಲೋಮೀಟರ್‌ ದೂರ ಸಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ವ್ಯಾಪ್ತಿಯಲ್ಲಿಯೇ ಜಲಾಶಯ ನಿರ್ಮಾಣ ಮಾಡಬಹುದಲ್ಲವೇ? ಇದೇನು ರಾಜಕೀಯ ಷಡ್ಯಂತ್ರವೇ…?!

ದಯಮಾಡಿ ಸಾಮಾಜಿಕ ನ್ಯಾಯವನ್ನು ಪಾಲಿಸಿ ಸಂವಿಧಾನದತ್ತ ನಮ್ಮ ಮಾನವಹಕ್ಕುಗಳಿಗೆ ಧಕ್ಕೆಯುಂಟು ಮಾಡಬೇಡಿ.

ಜಲಾಶಯ ನಿರ್ಮಾಣಕ್ಕೆ ನಾವು ಒಪ್ಪದೇ ಇದ್ದರೂ ಒಪ್ಪಿರುವ ಹಾಗೆ ಸುಳ್ಳು ಸೃಷ್ಠಿ ಮಾಡಿ ಡಿಸಿಎಂ ಡಿಕೆಶಿ ಹಾಗೂ ಇತರೆ ರಾಜಕಾರಣಿಗಳು ಮಾತಾಡುತ್ತಿರುವುದೇಕೆ? ಸ್ವಾಧೀನವಾದ ಭೂಮಿಗೆ ಪರಿಹಾರ ನೀಡಬೇಕೆಂಬ ಅಂಶವು ಕಾನೂನಿನಲ್ಲಿಯೇ ಇರುವಾಗ ಏನೋ  ಧಾರಾಳತನದಿಂದ ಕೊಡಿಸಿಕೊಡುವಂತೆ ಸುಖಾಸುಮ್ಮನೆ ಜನರನ್ನು ಮರುಳು ಮಾಡುವ ಮಾತುಗಳೇಕೆ? ನಾವು ಒಪ್ಪಿಯೇ ಇಲ್ಲ ಆಗಲೇ ಪರಿಹಾರ, ಪುನರ್ವಸತಿಯ ಮಾತುಗಳು ಏಕೆ?  ಇರುವ ಗ್ರಾಮಗಳನ್ನು ನಾಶಗೊಳಿಸಿ ಹೊಸದಾಗಿ ಹಳ್ಳಿಗಳನ್ನು ಕಟ್ಟೋದು ಏಕೆ? ಏನಿದರ ಮರ್ಮ? ಎಂದು ರೈತರು ಪ್ರಶ್ನೆ ಮಾಡಿದ್ದಾರೆ…..

Ramesh Babu

Journalist

Recent Posts

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

2 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

2 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

13 hours ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

13 hours ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

16 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

19 hours ago