ಎತ್ತಿನಹೊಳೆ ಯೋಜನೆ ಬಗ್ಗೆ ಫೈಲ್ ಮಾಡಲಾಗಿತ್ತು. ಅದಕ್ಕೆ ಎಲ್ಲವನ್ನು ಕೂಡಲೇ ಬಗೆಹರಿಸಲಾಗುವುದು ಎಂದು ಉತ್ತರ ಸಿಕ್ಕಿದೆ. ಎಲ್ಲೇ ಏನೇ ಕೆಲಸ, ಕಾಮಗಾರಿಗಳು ನಡೆಯಬೇಕಾದರೆ ಅಡ್ಡಿ, ವಿರೋಧಗಳು ವ್ಯಕ್ತವಾಗುತ್ತವೆ. ನೀರು ಬೇಕಲ್ವಾ… ಎಲ್ಲೋ ಒಂದು ಕಡೆ ನೀರನ್ನು ಶೇಖರಿಸಬೇಕಲ್ವಾ… ಎಲ್ಲಿ ಶೇಖರಿಸಬೇಕು ಅಂದಾಗ ಲಕ್ಕೇನಹಳ್ಳಿಯಲ್ಲಿ ಡ್ಯಾಂ ನಿರ್ಮಾಣಕ್ಕೆ ಸುಮಾರು 15 ವರ್ಷಗಳಿಂದೆಯೇ ಜಾಗ ಗುರುತಾಗಿತ್ತು. ನೀರು ಎಲ್ಲಿ ಹೇಗೆ ಹರಿಯುತ್ತದೆ ಎಂದು ಹೇಳೋದಕ್ಕೆ ಆಗಲ್ಲ. ಆದ್ದರಿಂದ ಕೇವಲ ಲಕ್ಕೇನಹಳ್ಳಿ ಮಾತ್ರವಲ್ಲದೇ ಕೊರಟಗೆರೆಯ ಕೆಲವು ಭಾಗಗಳನ್ನು ನೀರು ಶೇಖರಣೆಗೆ ತೆಗೆದುಕೊಳ್ಳಲಾಗಿದೆ. ಅದನ್ನು ನಾನು ಕ್ಯಾಬೆನೆಟ್ ಗೆ ವರ್ಗಾಯಿಸುತ್ತೇನೆ ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಐದು ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆಶಿ ಅವರು, ನಾನು ಒಬ್ಬ ಪಕ್ಷದ ಅಧ್ಯಕ್ಷನಿದ್ದೇನೆ.. ಪಾರ್ಟಿಯವರು ಏನು ಹೇಳಿದ್ದಾರೆ ಎಂದು ಸಿಎಂ ಉಲ್ಲೇಖ ಮಾಡಿದ್ದಾರೆ. ನಿಮ್ಮ ಪ್ರಶಗನೆಗಳಿಗೆಲ್ಲಾ ಅವರೇ ಉತ್ತರ ಕೊಟ್ಟಿದ್ದಾರೆ. ಅವರೇ ಪ್ರಶ್ನೆ ಹಾಕ್ತಾರೆ… ಅವರೇ ಉತ್ತರ ಹೇಳ್ತಾರೆ. ಅವರು ಉತ್ತರ ಕೊಟ್ಟಮೇಲೆ ಪದೇ ಪದೇ ನಾವು ಮಾತನಾಡೋದು ಸೂಕ್ತವಲ್ಲ. ನಾನು ಈವಿಚಾರವಾಗಿ ಕಾಮೆಂಟ್ ಮಾಡಲು ಹೋಗಲ್ಲ. ಕಾಮೆಂಟ್ ಮಾಡುವ ಅವಶ್ಯಕತೆಯೂ ಇಲ್ಲ. ಸದ್ಯಕ್ಕೆ ನಾನು ಯಾವ ಪ್ರಶ್ನೆಗೂ ಉತ್ತರ ಕೊಡಲ್ಲ ಎಂದು ಹೇಳಿದರು.
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…
ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…