ಎತ್ತಿನಹೊಳೆ ಯೋಜನೆ ವಿಚಾರ: ಲಕ್ಕೇನಹಳ್ಳಿ ಡ್ಯಾಂ ಬಗ್ಗೆ ಡಿಸಿಎಂ ಡಿಕೆಶಿ ಮಾತು…

ಎತ್ತಿನಹೊಳೆ ಯೋಜನೆ ಬಗ್ಗೆ ಫೈಲ್ ಮಾಡಲಾಗಿತ್ತು. ಅದಕ್ಕೆ ಎಲ್ಲವನ್ನು ಕೂಡಲೇ ಬಗೆಹರಿಸಲಾಗುವುದು ಎಂದು ಉತ್ತರ ಸಿಕ್ಕಿದೆ. ಎಲ್ಲೇ ಏನೇ ಕೆಲಸ, ಕಾಮಗಾರಿಗಳು ನಡೆಯಬೇಕಾದರೆ ಅಡ್ಡಿ, ವಿರೋಧಗಳು ವ್ಯಕ್ತವಾಗುತ್ತವೆ. ನೀರು ಬೇಕಲ್ವಾ… ಎಲ್ಲೋ ಒಂದು ಕಡೆ ನೀರನ್ನು ಶೇಖರಿಸಬೇಕಲ್ವಾ… ಎಲ್ಲಿ ಶೇಖರಿಸಬೇಕು ಅಂದಾಗ ಲಕ್ಕೇನಹಳ್ಳಿಯಲ್ಲಿ ಡ್ಯಾಂ ನಿರ್ಮಾಣಕ್ಕೆ ಸುಮಾರು 15 ವರ್ಷಗಳಿಂದೆಯೇ ಜಾಗ ಗುರುತಾಗಿತ್ತು. ನೀರು ಎಲ್ಲಿ ಹೇಗೆ ಹರಿಯುತ್ತದೆ ಎಂದು ಹೇಳೋದಕ್ಕೆ ಆಗಲ್ಲ. ಆದ್ದರಿಂದ ಕೇವಲ ಲಕ್ಕೇನಹಳ್ಳಿ ಮಾತ್ರವಲ್ಲದೇ ಕೊರಟಗೆರೆಯ ಕೆಲವು ಭಾಗಗಳನ್ನು ನೀರು ಶೇಖರಣೆಗೆ ತೆಗೆದುಕೊಳ್ಳಲಾಗಿದೆ. ಅದನ್ನು ನಾನು ಕ್ಯಾಬೆನೆಟ್ ಗೆ ವರ್ಗಾಯಿಸುತ್ತೇನೆ ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಐದು ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆಶಿ ಅವರು, ನಾನು ಒಬ್ಬ ಪಕ್ಷದ ಅಧ್ಯಕ್ಷನಿದ್ದೇನೆ.. ಪಾರ್ಟಿಯವರು ಏನು ಹೇಳಿದ್ದಾರೆ ಎಂದು ಸಿಎಂ ಉಲ್ಲೇಖ ಮಾಡಿದ್ದಾರೆ. ನಿಮ್ಮ ಪ್ರಶಗನೆಗಳಿಗೆಲ್ಲಾ ಅವರೇ ಉತ್ತರ ಕೊಟ್ಟಿದ್ದಾರೆ. ಅವರೇ ಪ್ರಶ್ನೆ ಹಾಕ್ತಾರೆ… ಅವರೇ ಉತ್ತರ ಹೇಳ್ತಾರೆ. ಅವರು ಉತ್ತರ ಕೊಟ್ಟಮೇಲೆ ಪದೇ ಪದೇ ನಾವು ಮಾತನಾಡೋದು ಸೂಕ್ತವಲ್ಲ. ನಾನು ಈ‌ವಿಚಾರವಾಗಿ ಕಾಮೆಂಟ್ ಮಾಡಲು ಹೋಗಲ್ಲ. ಕಾಮೆಂಟ್ ಮಾಡುವ ಅವಶ್ಯಕತೆಯೂ ಇಲ್ಲ. ಸದ್ಯಕ್ಕೆ ನಾನು ಯಾವ ಪ್ರಶ್ನೆಗೂ ಉತ್ತರ ಕೊಡಲ್ಲ ಎಂದು ಹೇಳಿದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

2 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

3 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

4 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

5 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

12 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago