ಎತ್ತಿನಹೊಳೆ ಯೋಜನೆ ಬಗ್ಗೆ ಫೈಲ್ ಮಾಡಲಾಗಿತ್ತು. ಅದಕ್ಕೆ ಎಲ್ಲವನ್ನು ಕೂಡಲೇ ಬಗೆಹರಿಸಲಾಗುವುದು ಎಂದು ಉತ್ತರ ಸಿಕ್ಕಿದೆ. ಎಲ್ಲೇ ಏನೇ ಕೆಲಸ, ಕಾಮಗಾರಿಗಳು ನಡೆಯಬೇಕಾದರೆ ಅಡ್ಡಿ, ವಿರೋಧಗಳು ವ್ಯಕ್ತವಾಗುತ್ತವೆ. ನೀರು ಬೇಕಲ್ವಾ… ಎಲ್ಲೋ ಒಂದು ಕಡೆ ನೀರನ್ನು ಶೇಖರಿಸಬೇಕಲ್ವಾ… ಎಲ್ಲಿ ಶೇಖರಿಸಬೇಕು ಅಂದಾಗ ಲಕ್ಕೇನಹಳ್ಳಿಯಲ್ಲಿ ಡ್ಯಾಂ ನಿರ್ಮಾಣಕ್ಕೆ ಸುಮಾರು 15 ವರ್ಷಗಳಿಂದೆಯೇ ಜಾಗ ಗುರುತಾಗಿತ್ತು. ನೀರು ಎಲ್ಲಿ ಹೇಗೆ ಹರಿಯುತ್ತದೆ ಎಂದು ಹೇಳೋದಕ್ಕೆ ಆಗಲ್ಲ. ಆದ್ದರಿಂದ ಕೇವಲ ಲಕ್ಕೇನಹಳ್ಳಿ ಮಾತ್ರವಲ್ಲದೇ ಕೊರಟಗೆರೆಯ ಕೆಲವು ಭಾಗಗಳನ್ನು ನೀರು ಶೇಖರಣೆಗೆ ತೆಗೆದುಕೊಳ್ಳಲಾಗಿದೆ. ಅದನ್ನು ನಾನು ಕ್ಯಾಬೆನೆಟ್ ಗೆ ವರ್ಗಾಯಿಸುತ್ತೇನೆ ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಐದು ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆಶಿ ಅವರು, ನಾನು ಒಬ್ಬ ಪಕ್ಷದ ಅಧ್ಯಕ್ಷನಿದ್ದೇನೆ.. ಪಾರ್ಟಿಯವರು ಏನು ಹೇಳಿದ್ದಾರೆ ಎಂದು ಸಿಎಂ ಉಲ್ಲೇಖ ಮಾಡಿದ್ದಾರೆ. ನಿಮ್ಮ ಪ್ರಶಗನೆಗಳಿಗೆಲ್ಲಾ ಅವರೇ ಉತ್ತರ ಕೊಟ್ಟಿದ್ದಾರೆ. ಅವರೇ ಪ್ರಶ್ನೆ ಹಾಕ್ತಾರೆ… ಅವರೇ ಉತ್ತರ ಹೇಳ್ತಾರೆ. ಅವರು ಉತ್ತರ ಕೊಟ್ಟಮೇಲೆ ಪದೇ ಪದೇ ನಾವು ಮಾತನಾಡೋದು ಸೂಕ್ತವಲ್ಲ. ನಾನು ಈವಿಚಾರವಾಗಿ ಕಾಮೆಂಟ್ ಮಾಡಲು ಹೋಗಲ್ಲ. ಕಾಮೆಂಟ್ ಮಾಡುವ ಅವಶ್ಯಕತೆಯೂ ಇಲ್ಲ. ಸದ್ಯಕ್ಕೆ ನಾನು ಯಾವ ಪ್ರಶ್ನೆಗೂ ಉತ್ತರ ಕೊಡಲ್ಲ ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…