ಎತ್ತಿನಹೊಳೆ ಲಕ್ಕೇನಹಳ್ಳಿ ಜಲಾಶಯ: ಜಮೀನುಗಳ ಸ್ಥಳ ಪರಿಶೀಲನೆಗೆ ಆಗಮಿಸಿದ್ದ ಅಧಿಕಾರಿಗಳಿಗೆ ಗ್ರಾಮಸ್ಥರ ತರಾಟೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಸಲು ಹೋಬಳಿಯಲ್ಲಿ ಎತ್ತಿನಹೊಳೆ ಉದ್ದೇಶಿತ ಜಲಾಶಯ ನಿರ್ಮಾಣದಲ್ಲಿನ ಜಮೀನುಗಳ ಸ್ಥಳ ಪರಿಶೀಲನೆಗೆ ಆಗಮಿಸಿದ್ದ ಅಧಿಕಾರಿಗಳನ್ನು ಸ್ಥಳೀಯ ಗ್ರಾಮಸ್ಥರು ತರಾಟೆ ತೆಗೆದುಕೊಂಡು ಹಿಂದಕ್ಕೆ ಕಳುಹಿಸಿರುವ ಘಟನೆ ನಡೆದಿದೆ.

ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆಯಿಂದ ಬರುವ ನೀರು ಸಂಗ್ರಹಣೆ ಮಾಡಲು ಜಲಾಶಯ ನಿರ್ಮಾಣ ಮಾಡಲು ನಿರ್ಧರಿಸಿದ್ದು, ಇದರಿಂದ ಲಕ್ಕೇನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಐದು ಗ್ರಾಮಗಳು ಮುಳುಗಡೆಯಾಗಲಿವೆ. ಈ ಗ್ರಾಮಗಳ ರೈತರು ಈಗಾಗಲೇ ಹೋರಾಟ ಪ್ರಾರಂಭಿಸಿದ್ದು, ಯಾವುದೇ ಕಾರಣಕ್ಕೂ ಇಲ್ಲಿ ಜಲಾಶಯ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ.

ಮಂಗಳವಾರ ಸ್ಥಳೀಯ ರೈತರಿಗೆ ಮಾಹಿತಿ ನೀಡದೆ ಸರ್ವೇ ಕೆಲಸ ನಡೆಸುವ ಉದ್ದೇಶದಿಂದ ಸ್ಥಳ ಪರಿಶೀಲನೆಗೆ ಆಗಮಿಸಿದ್ದ ಅಧಿಕಾರಿಗಳನ್ನು ನರಸಾಪುರ, ವಡೇರಹಳ್ಳಿ, ಬೆಣಚಿಹಟ್ಟಿ ಗ್ರಾಮಗಳ ರೈತರು ತಡೆದು ಹಿಂದಕ್ಕೆ ಕಳುಹಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ನರಸಾಪುರ ಗ್ರಾಮದ ರೈತ ಕೆಂಪರಾಜ್, ನಮ್ಮ ಸ್ವಂತ ಜಮೀನುಗಳಿಗೆ ಯಾವುದೇ ಸೂಚನೆ ನೀಡದೆ ಅಥವಾ ಅಧಿಕೃತವಾಗಿ ನೋಟಿಸ್ ನೀಡದೆ ಯಾರೇ ಪ್ರವೇಶ ಮಾಡಿದರು ಸಹ ಕಾನೂನು ಕ್ರಮ ಕೈಗೊಳ್ಳುವ ಮೂಲಕ ದೂರು ದಾಖಲಿಸಲಾಗುವುದು ಎಂದು ಸ್ಥಳ ಪರಿಶೀಲನೆ ನೆಪದಲ್ಲಿ ಬಂದಿದ್ದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ. ‘ನಮ್ಮ ಊರು ನಮ್ಮ ಹೆಮ್ಮೆ’ ಯಾವುದೇ ಕಾರಣಕ್ಕು ನಮ್ಮ ಹಿರಿಯರು ಹುಟ್ಟಿ ಬೆಳೆದಿರುವ ಊರನ್ನು ಜಲಾಶಯದಲ್ಲಿ ಮುಳುಗಡೆಯಾಗಲು ಬಿಡುದಿಲ್ಲ ಎಂದು ಹೇಳಿದರು.

Ramesh Babu

Journalist

Recent Posts

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

25 minutes ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

5 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

9 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

10 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

11 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

21 hours ago