ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಸಲು ಹೋಬಳಿಯಲ್ಲಿ ಎತ್ತಿನಹೊಳೆ ಉದ್ದೇಶಿತ ಜಲಾಶಯ ನಿರ್ಮಾಣದಲ್ಲಿನ ಜಮೀನುಗಳ ಸ್ಥಳ ಪರಿಶೀಲನೆಗೆ ಆಗಮಿಸಿದ್ದ ಅಧಿಕಾರಿಗಳನ್ನು ಸ್ಥಳೀಯ ಗ್ರಾಮಸ್ಥರು ತರಾಟೆ ತೆಗೆದುಕೊಂಡು ಹಿಂದಕ್ಕೆ ಕಳುಹಿಸಿರುವ ಘಟನೆ ನಡೆದಿದೆ.
ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆಯಿಂದ ಬರುವ ನೀರು ಸಂಗ್ರಹಣೆ ಮಾಡಲು ಜಲಾಶಯ ನಿರ್ಮಾಣ ಮಾಡಲು ನಿರ್ಧರಿಸಿದ್ದು, ಇದರಿಂದ ಲಕ್ಕೇನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಐದು ಗ್ರಾಮಗಳು ಮುಳುಗಡೆಯಾಗಲಿವೆ. ಈ ಗ್ರಾಮಗಳ ರೈತರು ಈಗಾಗಲೇ ಹೋರಾಟ ಪ್ರಾರಂಭಿಸಿದ್ದು, ಯಾವುದೇ ಕಾರಣಕ್ಕೂ ಇಲ್ಲಿ ಜಲಾಶಯ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ.
ಮಂಗಳವಾರ ಸ್ಥಳೀಯ ರೈತರಿಗೆ ಮಾಹಿತಿ ನೀಡದೆ ಸರ್ವೇ ಕೆಲಸ ನಡೆಸುವ ಉದ್ದೇಶದಿಂದ ಸ್ಥಳ ಪರಿಶೀಲನೆಗೆ ಆಗಮಿಸಿದ್ದ ಅಧಿಕಾರಿಗಳನ್ನು ನರಸಾಪುರ, ವಡೇರಹಳ್ಳಿ, ಬೆಣಚಿಹಟ್ಟಿ ಗ್ರಾಮಗಳ ರೈತರು ತಡೆದು ಹಿಂದಕ್ಕೆ ಕಳುಹಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ನರಸಾಪುರ ಗ್ರಾಮದ ರೈತ ಕೆಂಪರಾಜ್, ನಮ್ಮ ಸ್ವಂತ ಜಮೀನುಗಳಿಗೆ ಯಾವುದೇ ಸೂಚನೆ ನೀಡದೆ ಅಥವಾ ಅಧಿಕೃತವಾಗಿ ನೋಟಿಸ್ ನೀಡದೆ ಯಾರೇ ಪ್ರವೇಶ ಮಾಡಿದರು ಸಹ ಕಾನೂನು ಕ್ರಮ ಕೈಗೊಳ್ಳುವ ಮೂಲಕ ದೂರು ದಾಖಲಿಸಲಾಗುವುದು ಎಂದು ಸ್ಥಳ ಪರಿಶೀಲನೆ ನೆಪದಲ್ಲಿ ಬಂದಿದ್ದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ. ‘ನಮ್ಮ ಊರು ನಮ್ಮ ಹೆಮ್ಮೆ’ ಯಾವುದೇ ಕಾರಣಕ್ಕು ನಮ್ಮ ಹಿರಿಯರು ಹುಟ್ಟಿ ಬೆಳೆದಿರುವ ಊರನ್ನು ಜಲಾಶಯದಲ್ಲಿ ಮುಳುಗಡೆಯಾಗಲು ಬಿಡುದಿಲ್ಲ ಎಂದು ಹೇಳಿದರು.
ವಿಡಿ ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ…
ದೊಡ್ಡಬಳ್ಳಾಪುರ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಬೆಂಗಳೂರು…
ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…
ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…
ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…