ಎನ್‌ಸಿಸಿ ವಿದ್ಯಾರ್ಥಿಗಳಿಂದ ಸೈಕಲ್ ಜಾಥಾ

ದೊಡ್ಡಬಳ್ಳಾಪುರ: ಎನ್‌.ಸಿ.ಸಿ ದಿನಾಚರಣೆಯ ಅಂಗವಾಗಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಮತ್ತು ಪದವಿ ಕಾಲೇಜಿನ ಎನ್‌.ಸಿ.ಸಿ ವಿದ್ಯಾರ್ಥಿಗಳು ಐದು ಕರ್ನಾಟಕ ಎನ್‌ಸಿಸಿ ಬೆಟಾಲಿಯನ್‌ರ ಸಂಯುಕ್ತ ಆಶ್ರಯದಲ್ಲಿ ಸೈಕಲ್ ಜಾಥಾವನ್ನು ಆಯೋಜಿಸಲಾಗಿತ್ತು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸದಾಶಿವ ರಾಮಚಂದ್ರ ಗೌಡ ಅವರು ಸೈಕಲ್ ಜಾಥಾಗೆ ಚಾಲನೆ ನೀಡಿ ಮಾತನಾಡಿ, “ಎನ್‌ಸಿಸಿ ಕೇವಲ ಶಿಸ್ತುಮಯ ಬದುಕಿಗೆ ಮಾತ್ರ ಸೀಮಿತವಲ್ಲ, ಇದು ವಿದ್ಯಾರ್ಥಿಗಳಲ್ಲಿ ರಾಷ್ಟ್ರಭಕ್ತಿ, ಆತ್ಮವಿಶ್ವಾಸ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ ಮಹತ್ವದ ವೇದಿಕೆಯಾಗಿದೆ. ಇಂತಹ ಸೈಕಲ್ ಜಾಥಾಗಳು ವಿದ್ಯಾರ್ಥಿಗಳ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವುದರ ಜೊತೆಗೆ ಆರೋಗ್ಯದ ಮಹತ್ವವನ್ನು ಸಮಾಜದ ಮುಂದಿಡುತ್ತವೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಆರೋಗ್ಯವಂತ ಯುವಶಕ್ತಿ ರಾಷ್ಟ್ರದ ದೊಡ್ಡ ಬಲವಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಅಗತ್ಯ” ಎಂದು ತಿಳಿಸಿದರು.

ಆರೋಗ್ಯ ಜಾಗೃತಿ ಹಾಗೂ ಸದೃಢ ಜೀವನಶೈಲಿಯ ಸಂದೇಶವನ್ನು ಸಾರುವ ಉದ್ದೇಶದಿಂದ ಶ್ರೀ ಕೊಂಗಾಡಿಯಪ್ಪ ಕಾಲೇಜಿನಿಂದ ಆರಂಭವಾದ ಸೈಕಲ್ ಜಾಥಾ ಮಾದಗೊಂಡನಹಳ್ಳಿ ವರೆಗೆ ಸಾಗಿತ್ತು. ಈ ಸೈಕಲ್ ಜಾಥಾದಲ್ಲಿ ಸುಮಾರು 100ಕ್ಕೂ ಹೆಚ್ಚು ಎನ್‌.ಸಿ.ಸಿ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡು, ಆರೋಗ್ಯ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ ಕೊಂಗಾಡಿಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಶ್ರೀನಿವಾಸ್, ಐದು ಕರ್ನಾಟಕ ಎನ್‌.ಸಿ.ಸಿ ಬೆಟಾಲಿಯನ್ ಅಧಿಕಾರಿ ಬೊದಿ, ಸರ್ಕಾರಿ ಕಾಲೇಜಿನ ಎನ್‌.ಸಿ.ಸಿ ಅಧಿಕಾರಿ ಡಾ.ರಾಜಕುಮಾರ್, ಕೊಂಗಾಡಿಯಪ್ಪ ಕಾಲೇಜಿನ ಎನ್‌.ಸಿ.ಸಿ ಅಧಿಕಾರಿ ಶ್ರೀಕಾಂತ್, ಕಾಲೇಜಿನ ಐಕ್ಯೂಎಸಿ ಘಟಕದ ಸಂಚಾಲಕರಾದ ಡಾ.ಬಿ.ಆರ್. ಗಂಗಾಧರಯ್ಯ, ಪ್ರಾಧ್ಯಾಪಕರಾದ ಉಮೇಶ್.ವೈ, ಮಧುಸೂಧನ್, ಗವಿಗಂಗಾಧರಯ್ಯ, ಪಾಪಣ್ಣ, ಮುನಿರಾಜ್, ಸತೀಶ್ ಕುಮಾರ್, ವಿನೋದ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

1 hour ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

2 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

3 hours ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

6 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

18 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

18 hours ago