ಎನ್‌ಸಿಸಿ ವಿದ್ಯಾರ್ಥಿಗಳಿಂದ ಸೈಕಲ್ ಜಾಥಾ

ದೊಡ್ಡಬಳ್ಳಾಪುರ: ಎನ್‌.ಸಿ.ಸಿ ದಿನಾಚರಣೆಯ ಅಂಗವಾಗಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಮತ್ತು ಪದವಿ ಕಾಲೇಜಿನ ಎನ್‌.ಸಿ.ಸಿ ವಿದ್ಯಾರ್ಥಿಗಳು ಐದು ಕರ್ನಾಟಕ ಎನ್‌ಸಿಸಿ ಬೆಟಾಲಿಯನ್‌ರ ಸಂಯುಕ್ತ ಆಶ್ರಯದಲ್ಲಿ ಸೈಕಲ್ ಜಾಥಾವನ್ನು ಆಯೋಜಿಸಲಾಗಿತ್ತು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸದಾಶಿವ ರಾಮಚಂದ್ರ ಗೌಡ ಅವರು ಸೈಕಲ್ ಜಾಥಾಗೆ ಚಾಲನೆ ನೀಡಿ ಮಾತನಾಡಿ, “ಎನ್‌ಸಿಸಿ ಕೇವಲ ಶಿಸ್ತುಮಯ ಬದುಕಿಗೆ ಮಾತ್ರ ಸೀಮಿತವಲ್ಲ, ಇದು ವಿದ್ಯಾರ್ಥಿಗಳಲ್ಲಿ ರಾಷ್ಟ್ರಭಕ್ತಿ, ಆತ್ಮವಿಶ್ವಾಸ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ ಮಹತ್ವದ ವೇದಿಕೆಯಾಗಿದೆ. ಇಂತಹ ಸೈಕಲ್ ಜಾಥಾಗಳು ವಿದ್ಯಾರ್ಥಿಗಳ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವುದರ ಜೊತೆಗೆ ಆರೋಗ್ಯದ ಮಹತ್ವವನ್ನು ಸಮಾಜದ ಮುಂದಿಡುತ್ತವೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಆರೋಗ್ಯವಂತ ಯುವಶಕ್ತಿ ರಾಷ್ಟ್ರದ ದೊಡ್ಡ ಬಲವಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಅಗತ್ಯ” ಎಂದು ತಿಳಿಸಿದರು.

ಆರೋಗ್ಯ ಜಾಗೃತಿ ಹಾಗೂ ಸದೃಢ ಜೀವನಶೈಲಿಯ ಸಂದೇಶವನ್ನು ಸಾರುವ ಉದ್ದೇಶದಿಂದ ಶ್ರೀ ಕೊಂಗಾಡಿಯಪ್ಪ ಕಾಲೇಜಿನಿಂದ ಆರಂಭವಾದ ಸೈಕಲ್ ಜಾಥಾ ಮಾದಗೊಂಡನಹಳ್ಳಿ ವರೆಗೆ ಸಾಗಿತ್ತು. ಈ ಸೈಕಲ್ ಜಾಥಾದಲ್ಲಿ ಸುಮಾರು 100ಕ್ಕೂ ಹೆಚ್ಚು ಎನ್‌.ಸಿ.ಸಿ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡು, ಆರೋಗ್ಯ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ ಕೊಂಗಾಡಿಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಶ್ರೀನಿವಾಸ್, ಐದು ಕರ್ನಾಟಕ ಎನ್‌.ಸಿ.ಸಿ ಬೆಟಾಲಿಯನ್ ಅಧಿಕಾರಿ ಬೊದಿ, ಸರ್ಕಾರಿ ಕಾಲೇಜಿನ ಎನ್‌.ಸಿ.ಸಿ ಅಧಿಕಾರಿ ಡಾ.ರಾಜಕುಮಾರ್, ಕೊಂಗಾಡಿಯಪ್ಪ ಕಾಲೇಜಿನ ಎನ್‌.ಸಿ.ಸಿ ಅಧಿಕಾರಿ ಶ್ರೀಕಾಂತ್, ಕಾಲೇಜಿನ ಐಕ್ಯೂಎಸಿ ಘಟಕದ ಸಂಚಾಲಕರಾದ ಡಾ.ಬಿ.ಆರ್. ಗಂಗಾಧರಯ್ಯ, ಪ್ರಾಧ್ಯಾಪಕರಾದ ಉಮೇಶ್.ವೈ, ಮಧುಸೂಧನ್, ಗವಿಗಂಗಾಧರಯ್ಯ, ಪಾಪಣ್ಣ, ಮುನಿರಾಜ್, ಸತೀಶ್ ಕುಮಾರ್, ವಿನೋದ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

9 hours ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

11 hours ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

13 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

21 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

1 day ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

1 day ago