ಎನ್‌ಸಿಸಿ ವಿದ್ಯಾರ್ಥಿಗಳಿಂದ ಸೈಕಲ್ ಜಾಥಾ

ದೊಡ್ಡಬಳ್ಳಾಪುರ: ಎನ್‌.ಸಿ.ಸಿ ದಿನಾಚರಣೆಯ ಅಂಗವಾಗಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಮತ್ತು ಪದವಿ ಕಾಲೇಜಿನ ಎನ್‌.ಸಿ.ಸಿ ವಿದ್ಯಾರ್ಥಿಗಳು ಐದು ಕರ್ನಾಟಕ ಎನ್‌ಸಿಸಿ ಬೆಟಾಲಿಯನ್‌ರ ಸಂಯುಕ್ತ ಆಶ್ರಯದಲ್ಲಿ ಸೈಕಲ್ ಜಾಥಾವನ್ನು ಆಯೋಜಿಸಲಾಗಿತ್ತು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸದಾಶಿವ ರಾಮಚಂದ್ರ ಗೌಡ ಅವರು ಸೈಕಲ್ ಜಾಥಾಗೆ ಚಾಲನೆ ನೀಡಿ ಮಾತನಾಡಿ, “ಎನ್‌ಸಿಸಿ ಕೇವಲ ಶಿಸ್ತುಮಯ ಬದುಕಿಗೆ ಮಾತ್ರ ಸೀಮಿತವಲ್ಲ, ಇದು ವಿದ್ಯಾರ್ಥಿಗಳಲ್ಲಿ ರಾಷ್ಟ್ರಭಕ್ತಿ, ಆತ್ಮವಿಶ್ವಾಸ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ ಮಹತ್ವದ ವೇದಿಕೆಯಾಗಿದೆ. ಇಂತಹ ಸೈಕಲ್ ಜಾಥಾಗಳು ವಿದ್ಯಾರ್ಥಿಗಳ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವುದರ ಜೊತೆಗೆ ಆರೋಗ್ಯದ ಮಹತ್ವವನ್ನು ಸಮಾಜದ ಮುಂದಿಡುತ್ತವೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಆರೋಗ್ಯವಂತ ಯುವಶಕ್ತಿ ರಾಷ್ಟ್ರದ ದೊಡ್ಡ ಬಲವಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಅಗತ್ಯ” ಎಂದು ತಿಳಿಸಿದರು.

ಆರೋಗ್ಯ ಜಾಗೃತಿ ಹಾಗೂ ಸದೃಢ ಜೀವನಶೈಲಿಯ ಸಂದೇಶವನ್ನು ಸಾರುವ ಉದ್ದೇಶದಿಂದ ಶ್ರೀ ಕೊಂಗಾಡಿಯಪ್ಪ ಕಾಲೇಜಿನಿಂದ ಆರಂಭವಾದ ಸೈಕಲ್ ಜಾಥಾ ಮಾದಗೊಂಡನಹಳ್ಳಿ ವರೆಗೆ ಸಾಗಿತ್ತು. ಈ ಸೈಕಲ್ ಜಾಥಾದಲ್ಲಿ ಸುಮಾರು 100ಕ್ಕೂ ಹೆಚ್ಚು ಎನ್‌.ಸಿ.ಸಿ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡು, ಆರೋಗ್ಯ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ ಕೊಂಗಾಡಿಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಶ್ರೀನಿವಾಸ್, ಐದು ಕರ್ನಾಟಕ ಎನ್‌.ಸಿ.ಸಿ ಬೆಟಾಲಿಯನ್ ಅಧಿಕಾರಿ ಬೊದಿ, ಸರ್ಕಾರಿ ಕಾಲೇಜಿನ ಎನ್‌.ಸಿ.ಸಿ ಅಧಿಕಾರಿ ಡಾ.ರಾಜಕುಮಾರ್, ಕೊಂಗಾಡಿಯಪ್ಪ ಕಾಲೇಜಿನ ಎನ್‌.ಸಿ.ಸಿ ಅಧಿಕಾರಿ ಶ್ರೀಕಾಂತ್, ಕಾಲೇಜಿನ ಐಕ್ಯೂಎಸಿ ಘಟಕದ ಸಂಚಾಲಕರಾದ ಡಾ.ಬಿ.ಆರ್. ಗಂಗಾಧರಯ್ಯ, ಪ್ರಾಧ್ಯಾಪಕರಾದ ಉಮೇಶ್.ವೈ, ಮಧುಸೂಧನ್, ಗವಿಗಂಗಾಧರಯ್ಯ, ಪಾಪಣ್ಣ, ಮುನಿರಾಜ್, ಸತೀಶ್ ಕುಮಾರ್, ವಿನೋದ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

38 minutes ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

2 hours ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

3 hours ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

4 hours ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

6 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

11 hours ago