ಎನ್‌ಸಿಸಿ ವಿದ್ಯಾರ್ಥಿಗಳಿಂದ ಸೈಕಲ್ ಜಾಥಾ

ದೊಡ್ಡಬಳ್ಳಾಪುರ: ಎನ್‌.ಸಿ.ಸಿ ದಿನಾಚರಣೆಯ ಅಂಗವಾಗಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಮತ್ತು ಪದವಿ ಕಾಲೇಜಿನ ಎನ್‌.ಸಿ.ಸಿ ವಿದ್ಯಾರ್ಥಿಗಳು ಐದು ಕರ್ನಾಟಕ ಎನ್‌ಸಿಸಿ ಬೆಟಾಲಿಯನ್‌ರ ಸಂಯುಕ್ತ ಆಶ್ರಯದಲ್ಲಿ ಸೈಕಲ್ ಜಾಥಾವನ್ನು ಆಯೋಜಿಸಲಾಗಿತ್ತು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸದಾಶಿವ ರಾಮಚಂದ್ರ ಗೌಡ ಅವರು ಸೈಕಲ್ ಜಾಥಾಗೆ ಚಾಲನೆ ನೀಡಿ ಮಾತನಾಡಿ, “ಎನ್‌ಸಿಸಿ ಕೇವಲ ಶಿಸ್ತುಮಯ ಬದುಕಿಗೆ ಮಾತ್ರ ಸೀಮಿತವಲ್ಲ, ಇದು ವಿದ್ಯಾರ್ಥಿಗಳಲ್ಲಿ ರಾಷ್ಟ್ರಭಕ್ತಿ, ಆತ್ಮವಿಶ್ವಾಸ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ ಮಹತ್ವದ ವೇದಿಕೆಯಾಗಿದೆ. ಇಂತಹ ಸೈಕಲ್ ಜಾಥಾಗಳು ವಿದ್ಯಾರ್ಥಿಗಳ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವುದರ ಜೊತೆಗೆ ಆರೋಗ್ಯದ ಮಹತ್ವವನ್ನು ಸಮಾಜದ ಮುಂದಿಡುತ್ತವೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಆರೋಗ್ಯವಂತ ಯುವಶಕ್ತಿ ರಾಷ್ಟ್ರದ ದೊಡ್ಡ ಬಲವಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಅಗತ್ಯ” ಎಂದು ತಿಳಿಸಿದರು.

ಆರೋಗ್ಯ ಜಾಗೃತಿ ಹಾಗೂ ಸದೃಢ ಜೀವನಶೈಲಿಯ ಸಂದೇಶವನ್ನು ಸಾರುವ ಉದ್ದೇಶದಿಂದ ಶ್ರೀ ಕೊಂಗಾಡಿಯಪ್ಪ ಕಾಲೇಜಿನಿಂದ ಆರಂಭವಾದ ಸೈಕಲ್ ಜಾಥಾ ಮಾದಗೊಂಡನಹಳ್ಳಿ ವರೆಗೆ ಸಾಗಿತ್ತು. ಈ ಸೈಕಲ್ ಜಾಥಾದಲ್ಲಿ ಸುಮಾರು 100ಕ್ಕೂ ಹೆಚ್ಚು ಎನ್‌.ಸಿ.ಸಿ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡು, ಆರೋಗ್ಯ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ ಕೊಂಗಾಡಿಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಶ್ರೀನಿವಾಸ್, ಐದು ಕರ್ನಾಟಕ ಎನ್‌.ಸಿ.ಸಿ ಬೆಟಾಲಿಯನ್ ಅಧಿಕಾರಿ ಬೊದಿ, ಸರ್ಕಾರಿ ಕಾಲೇಜಿನ ಎನ್‌.ಸಿ.ಸಿ ಅಧಿಕಾರಿ ಡಾ.ರಾಜಕುಮಾರ್, ಕೊಂಗಾಡಿಯಪ್ಪ ಕಾಲೇಜಿನ ಎನ್‌.ಸಿ.ಸಿ ಅಧಿಕಾರಿ ಶ್ರೀಕಾಂತ್, ಕಾಲೇಜಿನ ಐಕ್ಯೂಎಸಿ ಘಟಕದ ಸಂಚಾಲಕರಾದ ಡಾ.ಬಿ.ಆರ್. ಗಂಗಾಧರಯ್ಯ, ಪ್ರಾಧ್ಯಾಪಕರಾದ ಉಮೇಶ್.ವೈ, ಮಧುಸೂಧನ್, ಗವಿಗಂಗಾಧರಯ್ಯ, ಪಾಪಣ್ಣ, ಮುನಿರಾಜ್, ಸತೀಶ್ ಕುಮಾರ್, ವಿನೋದ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

1 day ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

2 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago