Categories: ಕೋಲಾರ

ಎಪಿಎಂಸಿ ಕಾರ್ಯದರ್ಶಿಯ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವಂತೆ ಡಿಸಿಗೆ ದೂರು

ಕೋಲಾರ: ನಗರದ ಹೊರವಲಯದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರು, ಮಂಡಿ ಮಾಲೀಕರು ಹಾಗೂ ದಲ್ಲಾಳಿಗಳ ಯಾವುದೇ ಕೆಲಸಗಳು ಆಗಬೇಕಾದರೂ ಎಪಿಎಂಸಿ ಕಾರ್ಯದರ್ಶಿ ಎನ್ ವಿಜಯಲಕ್ಷ್ಮಿ ಅವರಿಗೆ ಲಂಚ ಕೊಟ್ಟರೆ ಮಾತ್ರ ಸಾಧ್ಯವಾಗುತ್ತದೆ ಎಂದು ಆರೋಪಿಸಿ ಜೆ.ಎನ್.ಜಿ ತರಕಾರಿ ದಲ್ಲಾಳಿ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಬುಧವಾರ ಚುನಾವಣೆಯ ತಹಶಿಲ್ದಾರ್ ನಾಗವೇಣಿ ಮೂಲಕ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘದ ಮುಖಂಡ ಎಪಿಎಂಸಿ ಪುಟ್ಟುರಾಜು ಮಾತನಾಡಿ, ಮಾರುಕಟ್ಟೆ ವಿಚಾರವಾಗಿ ಯಾವುದಾದರೂ ಕೆಲಸಕ್ಕೆ ಎಪಿಎಂಸಿ ಕಚೇರಿಗೆ ಹೋದರೆ ಅಧಿಕಾರಿಗಳ ನೆಪದಲ್ಲಿ ಕಿರುಕುಳ ನೀಡಿ ಸರಕಾರ ನಿಗದಿ ಪಡಿಸಿದ ಧರಕ್ಕಿಂತ ಹೆಚ್ಚಿನ ಹಣವನ್ನು ಅಧಿಕಾರಿಗಳಿಗೆ ನೀಡಬೇಕು ಎಂದು ಲಂಚವನ್ನು ನೇರವಾಗಿ ಕೇಳುತ್ತಾರೆ. ನಮ್ಮಲ್ಲಿನ ದಲ್ಲಾಳಿಗಳ ಪರವಾನಗಿ ಪಡೆಯಲು 20 ಸಾವಿರದಿಂದ 40 ಸಾವಿರದಷ್ಟು ಹಣವನ ವ್ಯಕ್ತಿಗೆ ಅನುಗುಣವಾಗಿ ಲಂಚ ಕೊಡಬೇಕು, ಕೊಡದೇ ಹೋದರೆ ಯಾವುದೇ ಕೆಲಸವು ಮಾಡಿಕೊಡುವುದಿಲ್ಲ ಎಂದು ದೂರಿದರು.

ಎಪಿಎಂಸಿ ಆವರಣದ ಒಳಗಡೆ ಜಾಗದ ಸಮಸ್ಯೆಯಿಂದ ಸುಮಾರು 63 ಜನ ತರಕಾರಿ ಮಂಡಿ ಮಾಲೀಕರು ನಮ್ಮ ಫೆಡರೇಶನ್ ಜಾಗದಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಾ ಇದ್ದು, ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಮನವಿ ಮಾಡಿದರೂ ಅ ಜಾಗದಲ್ಲಿ ಅಭಿವೃದ್ಧಿ ಮಾಡಲು ಅವಕಾಶವಿಲ್ಲ ಎಂದು ಹೇಳಿದ್ದಾರೆ, ಆದರೆ, ನಮ್ಮಗಳ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಮಾಡಿದರೆ ಕಾರ್ಯದರ್ಶಿ ಮಾತ್ರ ರೂಲ್ 71 ರಲ್ಲಿ ಬಿಲ್ ಮಾಡಿಕೊಂಡಿದ್ದಾರೆ. ಎಪಿಎಂಸಿಯ ಅಭಿವೃದ್ಧಿ ಕೆಲಸಗಳು ಬಗ್ಗೆ ಮಾಹಿತಿ ಪಡೆದು ತನಿಖೆ ಮಾಡಿಸಿದರೆ ಇನ್ನಷ್ಟು ಸತ್ಯ ಬಯಲಿಗೆ ಬರಲಿದೆ ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕೆ.ಎನ್.ಜಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಗೌಡ ಮಾತನಾಡಿ, ಪರವಾನಿಗೆ ಮತ್ತು ನವೀಕರಣಕ್ಕೆ ಮಾರುಕಟ್ಟೆ ಶುಲ್ಕ ಬಿಟ್ಟು ಹೆಚ್ಚಿನ ಹಣವನ್ನು ವಸೂಲಿ ಮಾಡುವುದು ಇವರ ವೃತ್ತಯಾಗಿದೆ ಕೊಡದೆ ಹೋದರೆ ಒಂದಲ್ಲ ಒಂದು ರೀತಿಯಲ್ಲಿ ಅಧಿಕಾರಿಗಳು ಟಾರ್ಚರ್ ಮಾಡತ್ತಾರೆ. ಎಪಿಎಂಸಿ ಕಚೇರಿಯಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಕಾರ್ಯದರ್ಶಿ ವಿಜಯಲಕ್ಷ್ಮಿ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಜೊತೆಗೆ ನಮಗೆ ನಿಷ್ಠಾವಂತ ಅಧಿಕಾರಿಯನ್ನು ಎಪಿಎಂಸಿಗೆ ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜೆ.ಎನ್.ಜಿ ತರಕಾರಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಂಬರೀಷ್,ಗೌರವ ಅಧ್ಯಕ್ಷ ಎಂ.ಎನ್.ಆರ್ ಮಂಜುನಾಥ್, ಸತೀಶ್ ಪದಾಧಿಕಾರಿಗಳಾದ ಎಸ್.ಎಲ್.ಎನ್ ವೆಂಕಟೇಶ್, ಮುನಿರಾಜು, ಗೋಪಾಲರೆಡ್ಡಿ, ಶ್ರೀನಿವಾಸ್, ರೆಡ್ಡೆಪ್ಪ, ವೆಂಕಟರಮಣ, ಕೇಶವ, ವೆಂಕಟಪತಿ, ನಾಗರಾಜ್ ಮುಂತಾದವರು ಇದ್ದರು

Ramesh Babu

Journalist

Recent Posts

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 hour ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

2 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

7 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

19 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

20 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

20 hours ago