ಕೋಲಾರ: ನಗರದ ಹೊರವಲಯದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರು, ಮಂಡಿ ಮಾಲೀಕರು ಹಾಗೂ ದಲ್ಲಾಳಿಗಳ ಯಾವುದೇ ಕೆಲಸಗಳು ಆಗಬೇಕಾದರೂ ಎಪಿಎಂಸಿ ಕಾರ್ಯದರ್ಶಿ ಎನ್ ವಿಜಯಲಕ್ಷ್ಮಿ ಅವರಿಗೆ ಲಂಚ ಕೊಟ್ಟರೆ ಮಾತ್ರ ಸಾಧ್ಯವಾಗುತ್ತದೆ ಎಂದು ಆರೋಪಿಸಿ ಜೆ.ಎನ್.ಜಿ ತರಕಾರಿ ದಲ್ಲಾಳಿ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಬುಧವಾರ ಚುನಾವಣೆಯ ತಹಶಿಲ್ದಾರ್ ನಾಗವೇಣಿ ಮೂಲಕ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘದ ಮುಖಂಡ ಎಪಿಎಂಸಿ ಪುಟ್ಟುರಾಜು ಮಾತನಾಡಿ, ಮಾರುಕಟ್ಟೆ ವಿಚಾರವಾಗಿ ಯಾವುದಾದರೂ ಕೆಲಸಕ್ಕೆ ಎಪಿಎಂಸಿ ಕಚೇರಿಗೆ ಹೋದರೆ ಅಧಿಕಾರಿಗಳ ನೆಪದಲ್ಲಿ ಕಿರುಕುಳ ನೀಡಿ ಸರಕಾರ ನಿಗದಿ ಪಡಿಸಿದ ಧರಕ್ಕಿಂತ ಹೆಚ್ಚಿನ ಹಣವನ್ನು ಅಧಿಕಾರಿಗಳಿಗೆ ನೀಡಬೇಕು ಎಂದು ಲಂಚವನ್ನು ನೇರವಾಗಿ ಕೇಳುತ್ತಾರೆ. ನಮ್ಮಲ್ಲಿನ ದಲ್ಲಾಳಿಗಳ ಪರವಾನಗಿ ಪಡೆಯಲು 20 ಸಾವಿರದಿಂದ 40 ಸಾವಿರದಷ್ಟು ಹಣವನ ವ್ಯಕ್ತಿಗೆ ಅನುಗುಣವಾಗಿ ಲಂಚ ಕೊಡಬೇಕು, ಕೊಡದೇ ಹೋದರೆ ಯಾವುದೇ ಕೆಲಸವು ಮಾಡಿಕೊಡುವುದಿಲ್ಲ ಎಂದು ದೂರಿದರು.
ಎಪಿಎಂಸಿ ಆವರಣದ ಒಳಗಡೆ ಜಾಗದ ಸಮಸ್ಯೆಯಿಂದ ಸುಮಾರು 63 ಜನ ತರಕಾರಿ ಮಂಡಿ ಮಾಲೀಕರು ನಮ್ಮ ಫೆಡರೇಶನ್ ಜಾಗದಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಾ ಇದ್ದು, ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಮನವಿ ಮಾಡಿದರೂ ಅ ಜಾಗದಲ್ಲಿ ಅಭಿವೃದ್ಧಿ ಮಾಡಲು ಅವಕಾಶವಿಲ್ಲ ಎಂದು ಹೇಳಿದ್ದಾರೆ, ಆದರೆ, ನಮ್ಮಗಳ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಮಾಡಿದರೆ ಕಾರ್ಯದರ್ಶಿ ಮಾತ್ರ ರೂಲ್ 71 ರಲ್ಲಿ ಬಿಲ್ ಮಾಡಿಕೊಂಡಿದ್ದಾರೆ. ಎಪಿಎಂಸಿಯ ಅಭಿವೃದ್ಧಿ ಕೆಲಸಗಳು ಬಗ್ಗೆ ಮಾಹಿತಿ ಪಡೆದು ತನಿಖೆ ಮಾಡಿಸಿದರೆ ಇನ್ನಷ್ಟು ಸತ್ಯ ಬಯಲಿಗೆ ಬರಲಿದೆ ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕೆ.ಎನ್.ಜಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಗೌಡ ಮಾತನಾಡಿ, ಪರವಾನಿಗೆ ಮತ್ತು ನವೀಕರಣಕ್ಕೆ ಮಾರುಕಟ್ಟೆ ಶುಲ್ಕ ಬಿಟ್ಟು ಹೆಚ್ಚಿನ ಹಣವನ್ನು ವಸೂಲಿ ಮಾಡುವುದು ಇವರ ವೃತ್ತಯಾಗಿದೆ ಕೊಡದೆ ಹೋದರೆ ಒಂದಲ್ಲ ಒಂದು ರೀತಿಯಲ್ಲಿ ಅಧಿಕಾರಿಗಳು ಟಾರ್ಚರ್ ಮಾಡತ್ತಾರೆ. ಎಪಿಎಂಸಿ ಕಚೇರಿಯಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಕಾರ್ಯದರ್ಶಿ ವಿಜಯಲಕ್ಷ್ಮಿ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಜೊತೆಗೆ ನಮಗೆ ನಿಷ್ಠಾವಂತ ಅಧಿಕಾರಿಯನ್ನು ಎಪಿಎಂಸಿಗೆ ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜೆ.ಎನ್.ಜಿ ತರಕಾರಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಂಬರೀಷ್,ಗೌರವ ಅಧ್ಯಕ್ಷ ಎಂ.ಎನ್.ಆರ್ ಮಂಜುನಾಥ್, ಸತೀಶ್ ಪದಾಧಿಕಾರಿಗಳಾದ ಎಸ್.ಎಲ್.ಎನ್ ವೆಂಕಟೇಶ್, ಮುನಿರಾಜು, ಗೋಪಾಲರೆಡ್ಡಿ, ಶ್ರೀನಿವಾಸ್, ರೆಡ್ಡೆಪ್ಪ, ವೆಂಕಟರಮಣ, ಕೇಶವ, ವೆಂಕಟಪತಿ, ನಾಗರಾಜ್ ಮುಂತಾದವರು ಇದ್ದರು
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…