Categories: ಕೋಲಾರ

ಎಪಿಎಂಸಿ ಕಾರ್ಯದರ್ಶಿಯ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವಂತೆ ಡಿಸಿಗೆ ದೂರು

ಕೋಲಾರ: ನಗರದ ಹೊರವಲಯದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರು, ಮಂಡಿ ಮಾಲೀಕರು ಹಾಗೂ ದಲ್ಲಾಳಿಗಳ ಯಾವುದೇ ಕೆಲಸಗಳು ಆಗಬೇಕಾದರೂ ಎಪಿಎಂಸಿ ಕಾರ್ಯದರ್ಶಿ ಎನ್ ವಿಜಯಲಕ್ಷ್ಮಿ ಅವರಿಗೆ ಲಂಚ ಕೊಟ್ಟರೆ ಮಾತ್ರ ಸಾಧ್ಯವಾಗುತ್ತದೆ ಎಂದು ಆರೋಪಿಸಿ ಜೆ.ಎನ್.ಜಿ ತರಕಾರಿ ದಲ್ಲಾಳಿ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಬುಧವಾರ ಚುನಾವಣೆಯ ತಹಶಿಲ್ದಾರ್ ನಾಗವೇಣಿ ಮೂಲಕ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘದ ಮುಖಂಡ ಎಪಿಎಂಸಿ ಪುಟ್ಟುರಾಜು ಮಾತನಾಡಿ, ಮಾರುಕಟ್ಟೆ ವಿಚಾರವಾಗಿ ಯಾವುದಾದರೂ ಕೆಲಸಕ್ಕೆ ಎಪಿಎಂಸಿ ಕಚೇರಿಗೆ ಹೋದರೆ ಅಧಿಕಾರಿಗಳ ನೆಪದಲ್ಲಿ ಕಿರುಕುಳ ನೀಡಿ ಸರಕಾರ ನಿಗದಿ ಪಡಿಸಿದ ಧರಕ್ಕಿಂತ ಹೆಚ್ಚಿನ ಹಣವನ್ನು ಅಧಿಕಾರಿಗಳಿಗೆ ನೀಡಬೇಕು ಎಂದು ಲಂಚವನ್ನು ನೇರವಾಗಿ ಕೇಳುತ್ತಾರೆ. ನಮ್ಮಲ್ಲಿನ ದಲ್ಲಾಳಿಗಳ ಪರವಾನಗಿ ಪಡೆಯಲು 20 ಸಾವಿರದಿಂದ 40 ಸಾವಿರದಷ್ಟು ಹಣವನ ವ್ಯಕ್ತಿಗೆ ಅನುಗುಣವಾಗಿ ಲಂಚ ಕೊಡಬೇಕು, ಕೊಡದೇ ಹೋದರೆ ಯಾವುದೇ ಕೆಲಸವು ಮಾಡಿಕೊಡುವುದಿಲ್ಲ ಎಂದು ದೂರಿದರು.

ಎಪಿಎಂಸಿ ಆವರಣದ ಒಳಗಡೆ ಜಾಗದ ಸಮಸ್ಯೆಯಿಂದ ಸುಮಾರು 63 ಜನ ತರಕಾರಿ ಮಂಡಿ ಮಾಲೀಕರು ನಮ್ಮ ಫೆಡರೇಶನ್ ಜಾಗದಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಾ ಇದ್ದು, ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಮನವಿ ಮಾಡಿದರೂ ಅ ಜಾಗದಲ್ಲಿ ಅಭಿವೃದ್ಧಿ ಮಾಡಲು ಅವಕಾಶವಿಲ್ಲ ಎಂದು ಹೇಳಿದ್ದಾರೆ, ಆದರೆ, ನಮ್ಮಗಳ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಮಾಡಿದರೆ ಕಾರ್ಯದರ್ಶಿ ಮಾತ್ರ ರೂಲ್ 71 ರಲ್ಲಿ ಬಿಲ್ ಮಾಡಿಕೊಂಡಿದ್ದಾರೆ. ಎಪಿಎಂಸಿಯ ಅಭಿವೃದ್ಧಿ ಕೆಲಸಗಳು ಬಗ್ಗೆ ಮಾಹಿತಿ ಪಡೆದು ತನಿಖೆ ಮಾಡಿಸಿದರೆ ಇನ್ನಷ್ಟು ಸತ್ಯ ಬಯಲಿಗೆ ಬರಲಿದೆ ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕೆ.ಎನ್.ಜಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಗೌಡ ಮಾತನಾಡಿ, ಪರವಾನಿಗೆ ಮತ್ತು ನವೀಕರಣಕ್ಕೆ ಮಾರುಕಟ್ಟೆ ಶುಲ್ಕ ಬಿಟ್ಟು ಹೆಚ್ಚಿನ ಹಣವನ್ನು ವಸೂಲಿ ಮಾಡುವುದು ಇವರ ವೃತ್ತಯಾಗಿದೆ ಕೊಡದೆ ಹೋದರೆ ಒಂದಲ್ಲ ಒಂದು ರೀತಿಯಲ್ಲಿ ಅಧಿಕಾರಿಗಳು ಟಾರ್ಚರ್ ಮಾಡತ್ತಾರೆ. ಎಪಿಎಂಸಿ ಕಚೇರಿಯಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಕಾರ್ಯದರ್ಶಿ ವಿಜಯಲಕ್ಷ್ಮಿ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಜೊತೆಗೆ ನಮಗೆ ನಿಷ್ಠಾವಂತ ಅಧಿಕಾರಿಯನ್ನು ಎಪಿಎಂಸಿಗೆ ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜೆ.ಎನ್.ಜಿ ತರಕಾರಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಂಬರೀಷ್,ಗೌರವ ಅಧ್ಯಕ್ಷ ಎಂ.ಎನ್.ಆರ್ ಮಂಜುನಾಥ್, ಸತೀಶ್ ಪದಾಧಿಕಾರಿಗಳಾದ ಎಸ್.ಎಲ್.ಎನ್ ವೆಂಕಟೇಶ್, ಮುನಿರಾಜು, ಗೋಪಾಲರೆಡ್ಡಿ, ಶ್ರೀನಿವಾಸ್, ರೆಡ್ಡೆಪ್ಪ, ವೆಂಕಟರಮಣ, ಕೇಶವ, ವೆಂಕಟಪತಿ, ನಾಗರಾಜ್ ಮುಂತಾದವರು ಇದ್ದರು

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

6 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

14 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

15 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago