Categories: ಕೋಲಾರ

ಎಪಿಎಂಸಿ ಕಾರ್ಯದರ್ಶಿಯ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವಂತೆ ಡಿಸಿಗೆ ದೂರು

ಕೋಲಾರ: ನಗರದ ಹೊರವಲಯದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರು, ಮಂಡಿ ಮಾಲೀಕರು ಹಾಗೂ ದಲ್ಲಾಳಿಗಳ ಯಾವುದೇ ಕೆಲಸಗಳು ಆಗಬೇಕಾದರೂ ಎಪಿಎಂಸಿ ಕಾರ್ಯದರ್ಶಿ ಎನ್ ವಿಜಯಲಕ್ಷ್ಮಿ ಅವರಿಗೆ ಲಂಚ ಕೊಟ್ಟರೆ ಮಾತ್ರ ಸಾಧ್ಯವಾಗುತ್ತದೆ ಎಂದು ಆರೋಪಿಸಿ ಜೆ.ಎನ್.ಜಿ ತರಕಾರಿ ದಲ್ಲಾಳಿ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಬುಧವಾರ ಚುನಾವಣೆಯ ತಹಶಿಲ್ದಾರ್ ನಾಗವೇಣಿ ಮೂಲಕ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘದ ಮುಖಂಡ ಎಪಿಎಂಸಿ ಪುಟ್ಟುರಾಜು ಮಾತನಾಡಿ, ಮಾರುಕಟ್ಟೆ ವಿಚಾರವಾಗಿ ಯಾವುದಾದರೂ ಕೆಲಸಕ್ಕೆ ಎಪಿಎಂಸಿ ಕಚೇರಿಗೆ ಹೋದರೆ ಅಧಿಕಾರಿಗಳ ನೆಪದಲ್ಲಿ ಕಿರುಕುಳ ನೀಡಿ ಸರಕಾರ ನಿಗದಿ ಪಡಿಸಿದ ಧರಕ್ಕಿಂತ ಹೆಚ್ಚಿನ ಹಣವನ್ನು ಅಧಿಕಾರಿಗಳಿಗೆ ನೀಡಬೇಕು ಎಂದು ಲಂಚವನ್ನು ನೇರವಾಗಿ ಕೇಳುತ್ತಾರೆ. ನಮ್ಮಲ್ಲಿನ ದಲ್ಲಾಳಿಗಳ ಪರವಾನಗಿ ಪಡೆಯಲು 20 ಸಾವಿರದಿಂದ 40 ಸಾವಿರದಷ್ಟು ಹಣವನ ವ್ಯಕ್ತಿಗೆ ಅನುಗುಣವಾಗಿ ಲಂಚ ಕೊಡಬೇಕು, ಕೊಡದೇ ಹೋದರೆ ಯಾವುದೇ ಕೆಲಸವು ಮಾಡಿಕೊಡುವುದಿಲ್ಲ ಎಂದು ದೂರಿದರು.

ಎಪಿಎಂಸಿ ಆವರಣದ ಒಳಗಡೆ ಜಾಗದ ಸಮಸ್ಯೆಯಿಂದ ಸುಮಾರು 63 ಜನ ತರಕಾರಿ ಮಂಡಿ ಮಾಲೀಕರು ನಮ್ಮ ಫೆಡರೇಶನ್ ಜಾಗದಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಾ ಇದ್ದು, ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಮನವಿ ಮಾಡಿದರೂ ಅ ಜಾಗದಲ್ಲಿ ಅಭಿವೃದ್ಧಿ ಮಾಡಲು ಅವಕಾಶವಿಲ್ಲ ಎಂದು ಹೇಳಿದ್ದಾರೆ, ಆದರೆ, ನಮ್ಮಗಳ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಮಾಡಿದರೆ ಕಾರ್ಯದರ್ಶಿ ಮಾತ್ರ ರೂಲ್ 71 ರಲ್ಲಿ ಬಿಲ್ ಮಾಡಿಕೊಂಡಿದ್ದಾರೆ. ಎಪಿಎಂಸಿಯ ಅಭಿವೃದ್ಧಿ ಕೆಲಸಗಳು ಬಗ್ಗೆ ಮಾಹಿತಿ ಪಡೆದು ತನಿಖೆ ಮಾಡಿಸಿದರೆ ಇನ್ನಷ್ಟು ಸತ್ಯ ಬಯಲಿಗೆ ಬರಲಿದೆ ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕೆ.ಎನ್.ಜಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಗೌಡ ಮಾತನಾಡಿ, ಪರವಾನಿಗೆ ಮತ್ತು ನವೀಕರಣಕ್ಕೆ ಮಾರುಕಟ್ಟೆ ಶುಲ್ಕ ಬಿಟ್ಟು ಹೆಚ್ಚಿನ ಹಣವನ್ನು ವಸೂಲಿ ಮಾಡುವುದು ಇವರ ವೃತ್ತಯಾಗಿದೆ ಕೊಡದೆ ಹೋದರೆ ಒಂದಲ್ಲ ಒಂದು ರೀತಿಯಲ್ಲಿ ಅಧಿಕಾರಿಗಳು ಟಾರ್ಚರ್ ಮಾಡತ್ತಾರೆ. ಎಪಿಎಂಸಿ ಕಚೇರಿಯಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಕಾರ್ಯದರ್ಶಿ ವಿಜಯಲಕ್ಷ್ಮಿ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಜೊತೆಗೆ ನಮಗೆ ನಿಷ್ಠಾವಂತ ಅಧಿಕಾರಿಯನ್ನು ಎಪಿಎಂಸಿಗೆ ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜೆ.ಎನ್.ಜಿ ತರಕಾರಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಂಬರೀಷ್,ಗೌರವ ಅಧ್ಯಕ್ಷ ಎಂ.ಎನ್.ಆರ್ ಮಂಜುನಾಥ್, ಸತೀಶ್ ಪದಾಧಿಕಾರಿಗಳಾದ ಎಸ್.ಎಲ್.ಎನ್ ವೆಂಕಟೇಶ್, ಮುನಿರಾಜು, ಗೋಪಾಲರೆಡ್ಡಿ, ಶ್ರೀನಿವಾಸ್, ರೆಡ್ಡೆಪ್ಪ, ವೆಂಕಟರಮಣ, ಕೇಶವ, ವೆಂಕಟಪತಿ, ನಾಗರಾಜ್ ಮುಂತಾದವರು ಇದ್ದರು

Ramesh Babu

Journalist

Recent Posts

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

2 hours ago

ಪರೀಕ್ಷಾ ಅಕ್ರಮಗಳು……

ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…

4 hours ago

ಮುತ್ತತ್ತಿಯಲ್ಲಿ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು

ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…

5 hours ago

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

19 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

21 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

1 day ago