Categories: ಕೋಲಾರ

ಎಪಿಎಂಸಿ ಕಾರ್ಯದರ್ಶಿಯ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವಂತೆ ಡಿಸಿಗೆ ದೂರು

ಕೋಲಾರ: ನಗರದ ಹೊರವಲಯದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರು, ಮಂಡಿ ಮಾಲೀಕರು ಹಾಗೂ ದಲ್ಲಾಳಿಗಳ ಯಾವುದೇ ಕೆಲಸಗಳು ಆಗಬೇಕಾದರೂ ಎಪಿಎಂಸಿ ಕಾರ್ಯದರ್ಶಿ ಎನ್ ವಿಜಯಲಕ್ಷ್ಮಿ ಅವರಿಗೆ ಲಂಚ ಕೊಟ್ಟರೆ ಮಾತ್ರ ಸಾಧ್ಯವಾಗುತ್ತದೆ ಎಂದು ಆರೋಪಿಸಿ ಜೆ.ಎನ್.ಜಿ ತರಕಾರಿ ದಲ್ಲಾಳಿ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಬುಧವಾರ ಚುನಾವಣೆಯ ತಹಶಿಲ್ದಾರ್ ನಾಗವೇಣಿ ಮೂಲಕ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘದ ಮುಖಂಡ ಎಪಿಎಂಸಿ ಪುಟ್ಟುರಾಜು ಮಾತನಾಡಿ, ಮಾರುಕಟ್ಟೆ ವಿಚಾರವಾಗಿ ಯಾವುದಾದರೂ ಕೆಲಸಕ್ಕೆ ಎಪಿಎಂಸಿ ಕಚೇರಿಗೆ ಹೋದರೆ ಅಧಿಕಾರಿಗಳ ನೆಪದಲ್ಲಿ ಕಿರುಕುಳ ನೀಡಿ ಸರಕಾರ ನಿಗದಿ ಪಡಿಸಿದ ಧರಕ್ಕಿಂತ ಹೆಚ್ಚಿನ ಹಣವನ್ನು ಅಧಿಕಾರಿಗಳಿಗೆ ನೀಡಬೇಕು ಎಂದು ಲಂಚವನ್ನು ನೇರವಾಗಿ ಕೇಳುತ್ತಾರೆ. ನಮ್ಮಲ್ಲಿನ ದಲ್ಲಾಳಿಗಳ ಪರವಾನಗಿ ಪಡೆಯಲು 20 ಸಾವಿರದಿಂದ 40 ಸಾವಿರದಷ್ಟು ಹಣವನ ವ್ಯಕ್ತಿಗೆ ಅನುಗುಣವಾಗಿ ಲಂಚ ಕೊಡಬೇಕು, ಕೊಡದೇ ಹೋದರೆ ಯಾವುದೇ ಕೆಲಸವು ಮಾಡಿಕೊಡುವುದಿಲ್ಲ ಎಂದು ದೂರಿದರು.

ಎಪಿಎಂಸಿ ಆವರಣದ ಒಳಗಡೆ ಜಾಗದ ಸಮಸ್ಯೆಯಿಂದ ಸುಮಾರು 63 ಜನ ತರಕಾರಿ ಮಂಡಿ ಮಾಲೀಕರು ನಮ್ಮ ಫೆಡರೇಶನ್ ಜಾಗದಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಾ ಇದ್ದು, ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಮನವಿ ಮಾಡಿದರೂ ಅ ಜಾಗದಲ್ಲಿ ಅಭಿವೃದ್ಧಿ ಮಾಡಲು ಅವಕಾಶವಿಲ್ಲ ಎಂದು ಹೇಳಿದ್ದಾರೆ, ಆದರೆ, ನಮ್ಮಗಳ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಮಾಡಿದರೆ ಕಾರ್ಯದರ್ಶಿ ಮಾತ್ರ ರೂಲ್ 71 ರಲ್ಲಿ ಬಿಲ್ ಮಾಡಿಕೊಂಡಿದ್ದಾರೆ. ಎಪಿಎಂಸಿಯ ಅಭಿವೃದ್ಧಿ ಕೆಲಸಗಳು ಬಗ್ಗೆ ಮಾಹಿತಿ ಪಡೆದು ತನಿಖೆ ಮಾಡಿಸಿದರೆ ಇನ್ನಷ್ಟು ಸತ್ಯ ಬಯಲಿಗೆ ಬರಲಿದೆ ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕೆ.ಎನ್.ಜಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಗೌಡ ಮಾತನಾಡಿ, ಪರವಾನಿಗೆ ಮತ್ತು ನವೀಕರಣಕ್ಕೆ ಮಾರುಕಟ್ಟೆ ಶುಲ್ಕ ಬಿಟ್ಟು ಹೆಚ್ಚಿನ ಹಣವನ್ನು ವಸೂಲಿ ಮಾಡುವುದು ಇವರ ವೃತ್ತಯಾಗಿದೆ ಕೊಡದೆ ಹೋದರೆ ಒಂದಲ್ಲ ಒಂದು ರೀತಿಯಲ್ಲಿ ಅಧಿಕಾರಿಗಳು ಟಾರ್ಚರ್ ಮಾಡತ್ತಾರೆ. ಎಪಿಎಂಸಿ ಕಚೇರಿಯಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಕಾರ್ಯದರ್ಶಿ ವಿಜಯಲಕ್ಷ್ಮಿ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಜೊತೆಗೆ ನಮಗೆ ನಿಷ್ಠಾವಂತ ಅಧಿಕಾರಿಯನ್ನು ಎಪಿಎಂಸಿಗೆ ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜೆ.ಎನ್.ಜಿ ತರಕಾರಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಂಬರೀಷ್,ಗೌರವ ಅಧ್ಯಕ್ಷ ಎಂ.ಎನ್.ಆರ್ ಮಂಜುನಾಥ್, ಸತೀಶ್ ಪದಾಧಿಕಾರಿಗಳಾದ ಎಸ್.ಎಲ್.ಎನ್ ವೆಂಕಟೇಶ್, ಮುನಿರಾಜು, ಗೋಪಾಲರೆಡ್ಡಿ, ಶ್ರೀನಿವಾಸ್, ರೆಡ್ಡೆಪ್ಪ, ವೆಂಕಟರಮಣ, ಕೇಶವ, ವೆಂಕಟಪತಿ, ನಾಗರಾಜ್ ಮುಂತಾದವರು ಇದ್ದರು

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

4 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

5 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

14 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago