ಕೋಲಾರ: ನಗರದ ಹೊರವಲಯದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರು, ಮಂಡಿ ಮಾಲೀಕರು ಹಾಗೂ ದಲ್ಲಾಳಿಗಳ ಯಾವುದೇ ಕೆಲಸಗಳು ಆಗಬೇಕಾದರೂ ಎಪಿಎಂಸಿ ಕಾರ್ಯದರ್ಶಿ ಎನ್ ವಿಜಯಲಕ್ಷ್ಮಿ ಅವರಿಗೆ ಲಂಚ ಕೊಟ್ಟರೆ ಮಾತ್ರ ಸಾಧ್ಯವಾಗುತ್ತದೆ ಎಂದು ಆರೋಪಿಸಿ ಜೆ.ಎನ್.ಜಿ ತರಕಾರಿ ದಲ್ಲಾಳಿ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಬುಧವಾರ ಚುನಾವಣೆಯ ತಹಶಿಲ್ದಾರ್ ನಾಗವೇಣಿ ಮೂಲಕ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘದ ಮುಖಂಡ ಎಪಿಎಂಸಿ ಪುಟ್ಟುರಾಜು ಮಾತನಾಡಿ, ಮಾರುಕಟ್ಟೆ ವಿಚಾರವಾಗಿ ಯಾವುದಾದರೂ ಕೆಲಸಕ್ಕೆ ಎಪಿಎಂಸಿ ಕಚೇರಿಗೆ ಹೋದರೆ ಅಧಿಕಾರಿಗಳ ನೆಪದಲ್ಲಿ ಕಿರುಕುಳ ನೀಡಿ ಸರಕಾರ ನಿಗದಿ ಪಡಿಸಿದ ಧರಕ್ಕಿಂತ ಹೆಚ್ಚಿನ ಹಣವನ್ನು ಅಧಿಕಾರಿಗಳಿಗೆ ನೀಡಬೇಕು ಎಂದು ಲಂಚವನ್ನು ನೇರವಾಗಿ ಕೇಳುತ್ತಾರೆ. ನಮ್ಮಲ್ಲಿನ ದಲ್ಲಾಳಿಗಳ ಪರವಾನಗಿ ಪಡೆಯಲು 20 ಸಾವಿರದಿಂದ 40 ಸಾವಿರದಷ್ಟು ಹಣವನ ವ್ಯಕ್ತಿಗೆ ಅನುಗುಣವಾಗಿ ಲಂಚ ಕೊಡಬೇಕು, ಕೊಡದೇ ಹೋದರೆ ಯಾವುದೇ ಕೆಲಸವು ಮಾಡಿಕೊಡುವುದಿಲ್ಲ ಎಂದು ದೂರಿದರು.
ಎಪಿಎಂಸಿ ಆವರಣದ ಒಳಗಡೆ ಜಾಗದ ಸಮಸ್ಯೆಯಿಂದ ಸುಮಾರು 63 ಜನ ತರಕಾರಿ ಮಂಡಿ ಮಾಲೀಕರು ನಮ್ಮ ಫೆಡರೇಶನ್ ಜಾಗದಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಾ ಇದ್ದು, ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಮನವಿ ಮಾಡಿದರೂ ಅ ಜಾಗದಲ್ಲಿ ಅಭಿವೃದ್ಧಿ ಮಾಡಲು ಅವಕಾಶವಿಲ್ಲ ಎಂದು ಹೇಳಿದ್ದಾರೆ, ಆದರೆ, ನಮ್ಮಗಳ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಮಾಡಿದರೆ ಕಾರ್ಯದರ್ಶಿ ಮಾತ್ರ ರೂಲ್ 71 ರಲ್ಲಿ ಬಿಲ್ ಮಾಡಿಕೊಂಡಿದ್ದಾರೆ. ಎಪಿಎಂಸಿಯ ಅಭಿವೃದ್ಧಿ ಕೆಲಸಗಳು ಬಗ್ಗೆ ಮಾಹಿತಿ ಪಡೆದು ತನಿಖೆ ಮಾಡಿಸಿದರೆ ಇನ್ನಷ್ಟು ಸತ್ಯ ಬಯಲಿಗೆ ಬರಲಿದೆ ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕೆ.ಎನ್.ಜಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಗೌಡ ಮಾತನಾಡಿ, ಪರವಾನಿಗೆ ಮತ್ತು ನವೀಕರಣಕ್ಕೆ ಮಾರುಕಟ್ಟೆ ಶುಲ್ಕ ಬಿಟ್ಟು ಹೆಚ್ಚಿನ ಹಣವನ್ನು ವಸೂಲಿ ಮಾಡುವುದು ಇವರ ವೃತ್ತಯಾಗಿದೆ ಕೊಡದೆ ಹೋದರೆ ಒಂದಲ್ಲ ಒಂದು ರೀತಿಯಲ್ಲಿ ಅಧಿಕಾರಿಗಳು ಟಾರ್ಚರ್ ಮಾಡತ್ತಾರೆ. ಎಪಿಎಂಸಿ ಕಚೇರಿಯಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಕಾರ್ಯದರ್ಶಿ ವಿಜಯಲಕ್ಷ್ಮಿ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಜೊತೆಗೆ ನಮಗೆ ನಿಷ್ಠಾವಂತ ಅಧಿಕಾರಿಯನ್ನು ಎಪಿಎಂಸಿಗೆ ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜೆ.ಎನ್.ಜಿ ತರಕಾರಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಂಬರೀಷ್,ಗೌರವ ಅಧ್ಯಕ್ಷ ಎಂ.ಎನ್.ಆರ್ ಮಂಜುನಾಥ್, ಸತೀಶ್ ಪದಾಧಿಕಾರಿಗಳಾದ ಎಸ್.ಎಲ್.ಎನ್ ವೆಂಕಟೇಶ್, ಮುನಿರಾಜು, ಗೋಪಾಲರೆಡ್ಡಿ, ಶ್ರೀನಿವಾಸ್, ರೆಡ್ಡೆಪ್ಪ, ವೆಂಕಟರಮಣ, ಕೇಶವ, ವೆಂಕಟಪತಿ, ನಾಗರಾಜ್ ಮುಂತಾದವರು ಇದ್ದರು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…