Categories: ಕೋಲಾರ

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ಭ್ರಷ್ಟಾಚಾರ ಆರೋಪ: ಮಾರುಕಟ್ಟೆ ಹೆಚ್ಚುವರಿ ನಿರ್ದೇಶಕ ಭೇಟಿ, ಪರಿಶೀಲನೆ

ಕೋಲಾರ: ಎಪಿಎಂಸಿ ಮಾರುಕಟ್ಟೆಯ ಜೆಎನ್‌ಜಿ ತರಕಾರಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದವರು ಕೃಷಿ ಮಾರುಕಟ್ಟೆ ಇಲಾಖೆ ನಿರ್ದೇಶಕರಿಗೆ ಪತ್ರ ಬರೆದು ಎಪಿಎಂಸಿಯಲ್ಲಿನ ಸಮಸ್ಯೆ ಬಗ್ಗೆ ಹೇಳಿಕೊಂಡಿದ್ದರು. ಆ ದೂರಿನ ಸತ್ಯಾಸತ್ಯತೆ ತಿಳಿಯಲು ಭೇಟಿ ನೀಡಿ ವಿವರಣೆ ಪಡೆದಿದ್ದೇನೆ ಎಂದು ಕೃಷಿ ಮಾರುಕಟ್ಟೆ ಇಲಾಖೆ ಹೆಚ್ಚುವರಿ ನಿರ್ದೇಶಕ (ಆಡಳಿತ) ನಜೀಬುಲ್ಲಾ ಖಾನ್‌ ತಿಳಿಸಿದರು.

ನಗರದ ಎಪಿಎಂಸಿ ಸಭಾಂಗಣದಲ್ಲಿ ಸೋಮವಾರ ಜೆಎನ್‌ಜಿ ತರಕಾರಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದವರು ಹಾಗೂ ಇತರೆ ಮಂಡಿ ಮಾಲೀಕರಿಂದ ವಿವರಣೆ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಘದವರು, ಮಂಡಿ ಮಾಲೀಕರು ಹಾಗೂ ಸಿಬ್ಬಂದಿ ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ. ಕೆಲವರು ಭ್ರಷ್ಟಾಚಾರದ ಆರೋಪ ಮಾಡಿದ್ದು, ಅದಕ್ಕೆ ಪೂರಕವಾಗಿ ಮಂಡಿ ಮಾಲೀಕ ಜಿಬಿಆರ್ ಸತೀಶ್ ಸಿಡಿ ನೀಡಿದ್ದಾರೆ. ಅದನ್ನು ನಾನು ಇನ್ನೂ ನೋಡಿಲ್ಲ. ಎಲ್ಲಾ ಅಂಶಗಳನ್ನು ಪರಿಶೀಲಿಸಿ ನಿರ್ದೇಶಕರಿಗೆ ವರದಿ ಸಲ್ಲಿಸುತ್ತೇನೆ ಎಂದರು.

ಮೂಲಸೌಕರ್ಯ ಸಮಸ್ಯೆ, ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿ ಇಲ್ಲದಿರುವುದು, ಮಳಿಗೆ ಹಂಚಿಕೆ ವಿಷಯ, ಪರವಾನಗಿ ನವೀಕರಣ ಸಮಸ್ಯೆ ಕುರಿತು ದೂರುಗಳು ಬಂದಿವೆ. ಈ ಎಲ್ಲಾ ಅಂಶಗಳು ವರದಿಯಲ್ಲಿ ಇರಲಿದ್ದು, ಅದನ್ನು ಆಧರಿಸಿ ನಿರ್ದೇಶಕರು ಕ್ರಮ ಕೈಗೊಳ್ಳುತ್ತಾರೆ ಮಾರುಕಟ್ಟೆಗೆ ಜಾಗದ ಸಮಸ್ಯೆ ಸಂಬಂಧ ಸಚಿವರ ನೇತೃತ್ವದ ಸಮಿತಿಯು ಈಗಾಗಲೇ ಬಂದು ಪರಿಶೀಲಿಸಿದೆ. ಜಾಗ ಕಲ್ಪಿಸಲು ಪ್ರಯತ್ನ ನಡೆಯುತ್ತಿದೆ. ಸಚಿವರು, ಶಾಸಕರು ಬಂದು ಸಮಸ್ಯೆ ಆಲಿಸಿದ್ದಾರೆ. ಕೇಂದ್ರ ಸರ್ಕಾರದ ಗಮನಕ್ಕೂ ಹೋಗಿದೆ ಎಂದರು.

ಸಭೆಯಲ್ಲಿ ಜೆಎನ್‌ಜಿ ತರಕಾರಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದವರು ಇದೇ ಸಂದರ್ಭದಲ್ಲಿ ದೂರಿನ ಸುರಿಮಳೆಗರೆದರು. ಎಪಿಎಂಸಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಅಲ್ಲದೇ, ಎಪಿಎಂಸಿ ಕಾರ್ಯದರ್ಶಿ ಎನ್‌.ವಿಜಯಲಕ್ಷ್ಮಿ ಸುಮಾರು ಐದು ವರ್ಷದಿಂದ ಇಲ್ಲೇ ಇದ್ದು ಅವರನ್ನು ವರ್ಗಾವಣೆ ಮಾಡಿ ನಿಷ್ಠಾವಂತ ಅಧಿಕಾರಿಯನ್ನು ನಿಯೋಜಿಸುವಂತೆ ಆಗ್ರಹಿಸಿದರು.

ತರಕಾರಿ ಮಾರುಕಟ್ಟೆಗೆ ಸದಸ್ಯರೆಲ್ಲಾ ಸೇರಿ ಎರಡೂವರೆ ಲಕ್ಷ ಖರ್ಚು ಮಾಡಿ ಮಣ್ಣು ಹೊಡೆಸಿದೆವು. ಆದರೆ, ಎಪಿಎಂಸಿಯಿಂದ ಇನ್ನೂ ಬಿಲ್ ಮಾಡಿಲ್ಲ. ನಾವೇ ವಿದ್ಯುತ್‌ ಸಂಪರ್ಕ ಕಲ್ಪಿಸಿದ್ದೇವೆ, ಸಿ.ಸಿ.ಟಿ.ವಿ ಹಾಕಿಸಿದ್ದು ನಾವೇ. ಮಾರುಕಟ್ಟೆಯಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲ. ಕುಡಿಯಲು ನೀರು ಇಲ್ಲ. ಆದೇಶವಿದ್ದರೂ ಕಾರ್ಯಗತವಾಗಿಲ್ಲ ಎಂದು ದೂರಿದರು.

ತರಕಾರಿ ಮಾರುಕಟ್ಟೆಯಲ್ಲಿನ ಕುಂದುಕೊರತೆ ಸಂಬಂಧ ಈವರೆಗೆ 50 ಅರ್ಜಿ‌ ಕೊಟ್ಟಿದ್ದೇವೆ. ಒಂದೂ ಸಮಸ್ಯೆ ಬಗೆಹರಿದಿಲ್ಲ ಆರ್‌ಎಂಸಿ ಪಾವತಿಗೆ ಹೆಚ್ಚುವರಿ ಹಣ ಕೇಳುತ್ತಾರೆ. ಆಗಲ್ಲ ಎಂದರೆ ನಿಯಮ ಪ್ರಕಾರ ಹಣ ಪಾವತಿಸಿ ಎನ್ನುತ್ತಾರೆ. ಈ ಎಲ್ಲಾ ವಿಚಾರ ಇಟ್ಟುಕೊಂಡು ಜಿಲ್ಲಾಧಿಕಾರಿಗೂ ದೂರು ಕೊಟ್ಟಿದ್ದೆವು. ಆದರೆ, ಎಪಿಎಂಸಿ ಕಾರ್ಯದರ್ಶಿ ನಮಗೇ ನೋಟಿಸ್ ಕೊಟ್ಟಿದ್ದಾರೆ ಎಂದು ಹೇಳಿದರು.

ಮಂಡಿ ಮಾಲೀಕ ಜಿಬಿಆರ್.ಸತೀಶ್ ಸುದ್ದಿಗಾರರೊಂದಿಗೆ ಮಾತನಾಡಿ, ಎಪಿಎಂಸಿ ಕಾರ್ಯದರ್ಶಿಯ ಭ್ರಷ್ಟಾಚಾರ ಸಂಬಂಧ ಕೃಷಿ ಮಾರುಕಟ್ಟೆ ಇಲಾಖೆ ನಿರ್ದೇಶಕರಿಗೆ ದೂರು ನೀಡಿದ್ದೆವು. ಅದರ ತನಿಖೆಗೆ ನಜೀಬುಲ್ಲಾ ಖಾನ್‌ ಬಂದಿದ್ದಾರೆ. ಪರವಾನಗಿ ನವೀಕರಣಕ್ಕೆ ಹೆಚ್ಚುವರಿ ಹಣ ಕೊಡಬೇಕು, ಸರ್ಕಾರದಿಂದ ಮಂಜೂರಾಗಿರುವ ಗೋದಾಮನ್ನು ನಮ್ಮ ಹೆಸರಿಗೆ ಮಾಡಿಕೊಳ್ಳಲು ಹಿರಿಯ ಅಧಿಕಾರಿಗೆ ಹಣ ಕೊಡಬೇಕು ಎನ್ನುತ್ತಾರೆ. ಕಾರ್ಯದರ್ಶಿಯು ಲಂಚ ಕೇಳಿರುವುದಕ್ಕೆ ಸಾಕ್ಷ್ಯವಿರುವ ಸಿ.ಡಿ ಕೊಟ್ಟಿದ್ದೇವೆ’ ಎಂದರು.

ಸಂಘದ ಅಧ್ಯಕ್ಷ ಅಂಬರೀಶ್ ಮಾತನಾಡಿ, ಪರವಾನಗಿ ನವೀಕರಣದಿಂದ ಹಿಡಿದು ಪ್ರತಿಯೊಂದಕ್ಕೂ ಹಣ ಕೇಳುತ್ತಾರೆ. ಹೀಗಾಗಿ, ತನಿಖೆಗೆ ಆಗ್ರಹಿಸಿದ್ದವುಎಂದು ಹೇಳಿದರು.

ಸಭೆಯಲ್ಲಿ ಸಹಾಯಕ ನಿರ್ದೇಶಕ ರವಿಕುಮಾರ್ ಮಂಡಿ ಮಾಲೀಕರಾದ ಆರ್.ಎ.ಪಿ ನಾರಾಯಣಸ್ವಾಮಿ, ಬೈಚೇಗೌಡ, ಸತೀಶ್ ವೆಂಕಟೇಶ್ ನಾಗೇಶ್ ಎಪಿಎಂಸಿ ಪುಟ್ಟುರಾಜು, ಗೋಪಾಲಕೃಷ್ಣ, ನಾಗರಾಜು ಹರೀಶ್, ಮಂಜುನಾಥ್ ಮುನಿರಾಜು, ಸಂತೋಷ್, ಸುನಿಲ್, ಇದ್ದರು.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

14 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

14 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

15 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

16 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

19 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

19 hours ago