Categories: ಕೋಲಾರ

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ಭ್ರಷ್ಟಾಚಾರ ಆರೋಪ: ಮಾರುಕಟ್ಟೆ ಹೆಚ್ಚುವರಿ ನಿರ್ದೇಶಕ ಭೇಟಿ, ಪರಿಶೀಲನೆ

ಕೋಲಾರ: ಎಪಿಎಂಸಿ ಮಾರುಕಟ್ಟೆಯ ಜೆಎನ್‌ಜಿ ತರಕಾರಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದವರು ಕೃಷಿ ಮಾರುಕಟ್ಟೆ ಇಲಾಖೆ ನಿರ್ದೇಶಕರಿಗೆ ಪತ್ರ ಬರೆದು ಎಪಿಎಂಸಿಯಲ್ಲಿನ ಸಮಸ್ಯೆ ಬಗ್ಗೆ ಹೇಳಿಕೊಂಡಿದ್ದರು. ಆ ದೂರಿನ ಸತ್ಯಾಸತ್ಯತೆ ತಿಳಿಯಲು ಭೇಟಿ ನೀಡಿ ವಿವರಣೆ ಪಡೆದಿದ್ದೇನೆ ಎಂದು ಕೃಷಿ ಮಾರುಕಟ್ಟೆ ಇಲಾಖೆ ಹೆಚ್ಚುವರಿ ನಿರ್ದೇಶಕ (ಆಡಳಿತ) ನಜೀಬುಲ್ಲಾ ಖಾನ್‌ ತಿಳಿಸಿದರು.

ನಗರದ ಎಪಿಎಂಸಿ ಸಭಾಂಗಣದಲ್ಲಿ ಸೋಮವಾರ ಜೆಎನ್‌ಜಿ ತರಕಾರಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದವರು ಹಾಗೂ ಇತರೆ ಮಂಡಿ ಮಾಲೀಕರಿಂದ ವಿವರಣೆ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಘದವರು, ಮಂಡಿ ಮಾಲೀಕರು ಹಾಗೂ ಸಿಬ್ಬಂದಿ ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ. ಕೆಲವರು ಭ್ರಷ್ಟಾಚಾರದ ಆರೋಪ ಮಾಡಿದ್ದು, ಅದಕ್ಕೆ ಪೂರಕವಾಗಿ ಮಂಡಿ ಮಾಲೀಕ ಜಿಬಿಆರ್ ಸತೀಶ್ ಸಿಡಿ ನೀಡಿದ್ದಾರೆ. ಅದನ್ನು ನಾನು ಇನ್ನೂ ನೋಡಿಲ್ಲ. ಎಲ್ಲಾ ಅಂಶಗಳನ್ನು ಪರಿಶೀಲಿಸಿ ನಿರ್ದೇಶಕರಿಗೆ ವರದಿ ಸಲ್ಲಿಸುತ್ತೇನೆ ಎಂದರು.

ಮೂಲಸೌಕರ್ಯ ಸಮಸ್ಯೆ, ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿ ಇಲ್ಲದಿರುವುದು, ಮಳಿಗೆ ಹಂಚಿಕೆ ವಿಷಯ, ಪರವಾನಗಿ ನವೀಕರಣ ಸಮಸ್ಯೆ ಕುರಿತು ದೂರುಗಳು ಬಂದಿವೆ. ಈ ಎಲ್ಲಾ ಅಂಶಗಳು ವರದಿಯಲ್ಲಿ ಇರಲಿದ್ದು, ಅದನ್ನು ಆಧರಿಸಿ ನಿರ್ದೇಶಕರು ಕ್ರಮ ಕೈಗೊಳ್ಳುತ್ತಾರೆ ಮಾರುಕಟ್ಟೆಗೆ ಜಾಗದ ಸಮಸ್ಯೆ ಸಂಬಂಧ ಸಚಿವರ ನೇತೃತ್ವದ ಸಮಿತಿಯು ಈಗಾಗಲೇ ಬಂದು ಪರಿಶೀಲಿಸಿದೆ. ಜಾಗ ಕಲ್ಪಿಸಲು ಪ್ರಯತ್ನ ನಡೆಯುತ್ತಿದೆ. ಸಚಿವರು, ಶಾಸಕರು ಬಂದು ಸಮಸ್ಯೆ ಆಲಿಸಿದ್ದಾರೆ. ಕೇಂದ್ರ ಸರ್ಕಾರದ ಗಮನಕ್ಕೂ ಹೋಗಿದೆ ಎಂದರು.

ಸಭೆಯಲ್ಲಿ ಜೆಎನ್‌ಜಿ ತರಕಾರಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದವರು ಇದೇ ಸಂದರ್ಭದಲ್ಲಿ ದೂರಿನ ಸುರಿಮಳೆಗರೆದರು. ಎಪಿಎಂಸಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಅಲ್ಲದೇ, ಎಪಿಎಂಸಿ ಕಾರ್ಯದರ್ಶಿ ಎನ್‌.ವಿಜಯಲಕ್ಷ್ಮಿ ಸುಮಾರು ಐದು ವರ್ಷದಿಂದ ಇಲ್ಲೇ ಇದ್ದು ಅವರನ್ನು ವರ್ಗಾವಣೆ ಮಾಡಿ ನಿಷ್ಠಾವಂತ ಅಧಿಕಾರಿಯನ್ನು ನಿಯೋಜಿಸುವಂತೆ ಆಗ್ರಹಿಸಿದರು.

ತರಕಾರಿ ಮಾರುಕಟ್ಟೆಗೆ ಸದಸ್ಯರೆಲ್ಲಾ ಸೇರಿ ಎರಡೂವರೆ ಲಕ್ಷ ಖರ್ಚು ಮಾಡಿ ಮಣ್ಣು ಹೊಡೆಸಿದೆವು. ಆದರೆ, ಎಪಿಎಂಸಿಯಿಂದ ಇನ್ನೂ ಬಿಲ್ ಮಾಡಿಲ್ಲ. ನಾವೇ ವಿದ್ಯುತ್‌ ಸಂಪರ್ಕ ಕಲ್ಪಿಸಿದ್ದೇವೆ, ಸಿ.ಸಿ.ಟಿ.ವಿ ಹಾಕಿಸಿದ್ದು ನಾವೇ. ಮಾರುಕಟ್ಟೆಯಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲ. ಕುಡಿಯಲು ನೀರು ಇಲ್ಲ. ಆದೇಶವಿದ್ದರೂ ಕಾರ್ಯಗತವಾಗಿಲ್ಲ ಎಂದು ದೂರಿದರು.

ತರಕಾರಿ ಮಾರುಕಟ್ಟೆಯಲ್ಲಿನ ಕುಂದುಕೊರತೆ ಸಂಬಂಧ ಈವರೆಗೆ 50 ಅರ್ಜಿ‌ ಕೊಟ್ಟಿದ್ದೇವೆ. ಒಂದೂ ಸಮಸ್ಯೆ ಬಗೆಹರಿದಿಲ್ಲ ಆರ್‌ಎಂಸಿ ಪಾವತಿಗೆ ಹೆಚ್ಚುವರಿ ಹಣ ಕೇಳುತ್ತಾರೆ. ಆಗಲ್ಲ ಎಂದರೆ ನಿಯಮ ಪ್ರಕಾರ ಹಣ ಪಾವತಿಸಿ ಎನ್ನುತ್ತಾರೆ. ಈ ಎಲ್ಲಾ ವಿಚಾರ ಇಟ್ಟುಕೊಂಡು ಜಿಲ್ಲಾಧಿಕಾರಿಗೂ ದೂರು ಕೊಟ್ಟಿದ್ದೆವು. ಆದರೆ, ಎಪಿಎಂಸಿ ಕಾರ್ಯದರ್ಶಿ ನಮಗೇ ನೋಟಿಸ್ ಕೊಟ್ಟಿದ್ದಾರೆ ಎಂದು ಹೇಳಿದರು.

ಮಂಡಿ ಮಾಲೀಕ ಜಿಬಿಆರ್.ಸತೀಶ್ ಸುದ್ದಿಗಾರರೊಂದಿಗೆ ಮಾತನಾಡಿ, ಎಪಿಎಂಸಿ ಕಾರ್ಯದರ್ಶಿಯ ಭ್ರಷ್ಟಾಚಾರ ಸಂಬಂಧ ಕೃಷಿ ಮಾರುಕಟ್ಟೆ ಇಲಾಖೆ ನಿರ್ದೇಶಕರಿಗೆ ದೂರು ನೀಡಿದ್ದೆವು. ಅದರ ತನಿಖೆಗೆ ನಜೀಬುಲ್ಲಾ ಖಾನ್‌ ಬಂದಿದ್ದಾರೆ. ಪರವಾನಗಿ ನವೀಕರಣಕ್ಕೆ ಹೆಚ್ಚುವರಿ ಹಣ ಕೊಡಬೇಕು, ಸರ್ಕಾರದಿಂದ ಮಂಜೂರಾಗಿರುವ ಗೋದಾಮನ್ನು ನಮ್ಮ ಹೆಸರಿಗೆ ಮಾಡಿಕೊಳ್ಳಲು ಹಿರಿಯ ಅಧಿಕಾರಿಗೆ ಹಣ ಕೊಡಬೇಕು ಎನ್ನುತ್ತಾರೆ. ಕಾರ್ಯದರ್ಶಿಯು ಲಂಚ ಕೇಳಿರುವುದಕ್ಕೆ ಸಾಕ್ಷ್ಯವಿರುವ ಸಿ.ಡಿ ಕೊಟ್ಟಿದ್ದೇವೆ’ ಎಂದರು.

ಸಂಘದ ಅಧ್ಯಕ್ಷ ಅಂಬರೀಶ್ ಮಾತನಾಡಿ, ಪರವಾನಗಿ ನವೀಕರಣದಿಂದ ಹಿಡಿದು ಪ್ರತಿಯೊಂದಕ್ಕೂ ಹಣ ಕೇಳುತ್ತಾರೆ. ಹೀಗಾಗಿ, ತನಿಖೆಗೆ ಆಗ್ರಹಿಸಿದ್ದವುಎಂದು ಹೇಳಿದರು.

ಸಭೆಯಲ್ಲಿ ಸಹಾಯಕ ನಿರ್ದೇಶಕ ರವಿಕುಮಾರ್ ಮಂಡಿ ಮಾಲೀಕರಾದ ಆರ್.ಎ.ಪಿ ನಾರಾಯಣಸ್ವಾಮಿ, ಬೈಚೇಗೌಡ, ಸತೀಶ್ ವೆಂಕಟೇಶ್ ನಾಗೇಶ್ ಎಪಿಎಂಸಿ ಪುಟ್ಟುರಾಜು, ಗೋಪಾಲಕೃಷ್ಣ, ನಾಗರಾಜು ಹರೀಶ್, ಮಂಜುನಾಥ್ ಮುನಿರಾಜು, ಸಂತೋಷ್, ಸುನಿಲ್, ಇದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

15 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

19 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago