Categories: ಕೋಲಾರ

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ

ಕೋಲಾರ: ನಗರದ ಹೊರವಲಯದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿನ ಕಾರ್ಯದರ್ಶಿ ವಿಜಯಲಕ್ಷ್ಮಿ ಅವರ ಭ್ರಷ್ಟಾಚಾರದ ವಿರುದ್ದ ದೂರು ನೀಡಿ 50 ದಿನ ಕಳೆದರೂ ಯಾವುದೇ ಕ್ರಮ ವಹಿಸಿಲ್ಲ ಎಂದು ಆರೋಪಿಸಿ ಎಪಿಎಂಸಿ ಕಚೇರಿ ಎದುರು ಶುಕ್ರವಾರ ಜೆ.ಎನ್.ಜಿ ತರಕಾರಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಧರಣಿ ನಡೆಸಿ ಎಪಿಎಂಸಿ ಸಹಾಯಕ ನಿರ್ದೇಶಕ ರವಿಕುಮಾರ್ ಅವರಿಗೆ ಮನವಿ ನೀಡಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಂಡಿ ಮಾಲೀಕ ಜಿ.ಬಿ.ಆರ್ ಸತೀಶ್ ಮಾತನಾಡಿ, ಎಪಿಎಂಸಿಯಲ್ಲಿ ರೈತರು, ಮಂಡಿ ಮಾಲೀಕರು ಹಾಗೂ ದಲ್ಲಾಳಿಗಳ ಮಾರುಕಟ್ಟೆಗೆ ಸಂಬಂಧಿಸಿದಂತೆ ಯಾವುದೇ ಕೆಲಸಗಳು ಆಗಬೇಕಾದರೂ ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ಅವರಿಗೆ ಲಂಚ ನೀಡಬೇಕಾಗಿದೆ. ಇದಕ್ಕೆ ಸಂಬಂಧಿಸಿದ ಲಂಚದ ದಾಖಲೆಗಳು ಸಹ ಇದ್ದು, ಈ ವ್ಯವಸ್ಥೆಗೆ ಕಡಿವಾಣ ಹಾಕಬೇಕೆಂದು ಸಂಬಂಧಿಸಿದಂತೆ ಅಧಿಕಾರಿಗಳಿಗೆ ದೂರು ನೀಡಿದ್ದು ಅಧಿಕಾರಿಗಳು ಬಂದು ಕಚೇರಿಯಲ್ಲಿ ಪರಿಶೀಲನೆ ನಡೆಸಲಾಗಿದೆ ಹೊರತು ಅವರ ವಿರುದ್ಧ ಯಾವುದೇ ಕ್ರಮವಾಗಿಲ್ಲ ಎಂದು ದೂರಿದರು.

ಈ ಸಂದರ್ಭದಲ್ಲಿ ಸಂಘದ ಮುಖಂಡ ಎಪಿಎಂಸಿ ಪುಟ್ಟುರಾಜು ಮಾತನಾಡಿ, ಎಪಿಎಂಸಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ದೂರು ನೀಡಿದ ಪರಿಣಾಮವಾಗಿ ಯಾವುದೇ ಕೆಲಸ ಆಗಬೇಕಾದರೆ ದೂರಿನ ನೆಪದಲ್ಲಿ ನಮ್ಮಗಳ ಮೇಲೆ ವಿನಾಕಾರಣ ಕಿರುಕುಳ ನೀಡುತ್ತಾರೆ. ಸರಕಾರ ನಿಗದಿಪಡಿಸಿದ ಧರಕ್ಕಿಂತ ಹೆಚ್ಚಿನ ಹಣವನ್ನು ಅಧಿಕಾರಿಗಳಿಗೆ ನೀಡಬೇಕು ಇದಕ್ಕೆ ಸಂಬಂಧಿಸಿದಂತೆ ದಾಖಲೆ ಸಮೇತವಾಗಿ ಮೇಲಿನ ಅಧಿಕಾರಿಗಳಿಗೆ ಕೊಟ್ಟರು ಇಂತಹ ಭ್ರಷ್ಟ ಅಧಿಕಾರಿಯನ್ನು ಇನ್ನೂ ಇಲ್ಲೇ ಉಳಿಸಿಕೊಂಡು ಇದ್ದಾರೆ ಎಂದು ದೂರಿದರು.

ನಮ್ಮಲ್ಲಿ ದಲ್ಲಾಳರ ಪರವಾನಗಿ ಪಡೆಯಲು 20 ಸಾವಿರದಿಂದ 40 ಸಾವಿರದಷ್ಟು ಹಣವನ್ನು ಜೊತೆಗೆ
ವ್ಯಕ್ತಿಗೆ ಅನುಗುಣವಾಗಿ ಲಂಚ ಕೊಡಬೇಕು. ಕೊಡದೇ ಹೋದರೆ ಯಾವುದೇ ಕೆಲಸವು ಮಾಡಿಕೊಡುವುದಿಲ್ಲ ಎಂದು ನೇರವಾಗಿ ಹೇಳುತ್ತಾರೆ. ಎಪಿಎಂಸಿ ಆವರಣದ ಒಳಗಡೆ ಜಾಗದ ಸಮಸ್ಯೆಯಿಂದ ಸುಮಾರು 63 ಜನ ತರಕಾರಿ ಮಂಡಿ ಮಾಲೀಕರು ನಮ್ಮ ಫೆಡರೇಶನ್ ಜಾಗದಲ್ಲಿ ಇದ್ದು, ಅದಕ್ಕೆ ಸೌಕರ್ಯಗಳನ್ನು ಒದಗಿಸುವಂತೆ ಮನವಿ ಮಾಡಿದರೂ ಆ ಜಾಗದಲ್ಲಿ ಅಭಿವೃದ್ಧಿ ಮಾಡಲು ಅವಕಾಶವಿಲ್ಲ ಎಂದವರು, ನಾವು ಮಾಡಿದ ಅಭಿವೃದ್ಧಿಗೆ ಇಲಾಖೆಯ ಕಡೆಯಿಂದ ಕಾಮಗಾರಿಗಳಿಗೆ ಬಿಲ್ ಮಾಡಿಕೊಂಡಿದ್ದಾರೆ. ಎಪಿಎಂಸಿಯ ಅಭಿವೃದ್ಧಿ ಕೆಲಸಗಳು ಬಗ್ಗೆ ಮಾಹಿತಿ ಪಡೆದು ತನಿಖೆ ಮಾಡಿಸಿದರೆ ಇನ್ನಷ್ಟು ಸತ್ಯ ಬಯಲಿಗೆ ಬರಲಿದೆ ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜೆ.ಎನ್.ಜಿ ತರಕಾರಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮರೇಶ್ ಮಾತನಾಡಿ, ಎಪಿಎಂಸಿ ಭ್ರಷ್ಟಾಚಾರದ ಬಗ್ಗೆ ಮೇಲಿನ ಅಧಿಕಾರಿಗಳು ಎಚ್ಚತ್ತುಕೊಂಡು ಕಾರ್ಯದರ್ಶಿ ವಿಜಯಲಕ್ಷ್ಮಿ ಅವರನ್ನು ವಜಾಗೊಳಿಸಬೇಕು. ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಎಲ್ಲಾ ಮಂಡಿ ಮಾಲೀಕರು, ವ್ಯಾಪಾರಸ್ಥರು ಹಾಗೂ ಕೂಲಿ ಕಾರ್ಮಿಕರು ತಮ್ಮ ವೈವಾಟನ್ನು ಸ್ಥಗಿತಗೊಳಿಸಿ ಎಪಿಎಂಸಿ ಮುಂದೆ ಅನಿರ್ಧಿಷ್ಟಾವಧಿ ಧರಣಿ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್, ತರಕಾರಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ವೆಂಕಟೇಗೌಡ, ಖಜಾಂಚಿ ನಾಗೇಶ್, ಉಪಾಧ್ಯಕ್ಷ ಗೋಪಾಲಕೃಷ್ಣ, ಪದಾಧಿಕಾರಿಗಳಾದ ವೆಂಕಟರಾಮ್, ವೆಂಕಟೇಶ್, ಮುನಿರಾಜು, ಮಂಜುನಾಥರೆಡ್ಡಿ, ಶ್ರೀನಿವಾಸ್, ರೆಡ್ಡೆಪ್ಪ, ನವೀನ್ ಮುಂತಾದವರು ಇದ್ದರು

Ramesh Babu

Journalist

Recent Posts

ಕುಸುಮ್ (ಸೌರ ವಿದ್ಯುತ್) ಯೋಜನೆ ಹೆಸರಲ್ಲಿ ದೇಶ ಕಾಯೋ ಯೋಧರ ಭೂಮಿಗೆ ಬೇಲಿ: ತಬ್ಬಿಬ್ಬಾದ ಯೋಧರ ಕುಟುಂಬ

ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…

17 minutes ago

ಟೋಲ್ ರಸ್ತೆಯಲ್ಲಿ ಮಿತಿಮೀರಿದ ಅಪಘಾತ: ರಸ್ತೆ ಸುರಕ್ಷತೆ ಕಾಪಾಡದ ಸುಂಕವಸೂಲಿ(ಟೋಲ್) ಗುತ್ತಿಗೆದಾರರು: ಹೆದ್ದಾರಿಯಲ್ಲಿ ಕುಳಿತು ಟೋಲ್ ವಿರುದ್ಧ ಧಿಕ್ಕಾರ ಕೂಗಿದ ರೈತರು, ಸಂಘಟನೆಗಾರರು…

ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…

46 minutes ago

ವಿಜಯಪುರದ ಬಸವ ಕಲ್ಯಾಣ ಮಠದಲ್ಲಿ 38ನೇ ವರ್ಷದ ಕಡ್ಲೆಕಾಯಿ ಪರಿಷೆ

ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…

2 hours ago

ಸಾಸಲು ಹೋಬಳಿಯಲ್ಲಿ ಮಿತಿಮೀರಿದ ಕೃಷಿ ಬೋರ್ ವೆಲ್ ಕೇಬಲ್ ಕಳ್ಳರ ಹಾವಳಿ: ಒಂದೇ ದಿನ ಹಲವು ಕಡೆ ಕೇಬಲ್ ಕಟ್

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…

4 hours ago

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

7 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

9 hours ago