ಕೋಲಾರ: ನಗರದ ಹೊರವಲಯದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿನ ಕಾರ್ಯದರ್ಶಿ ವಿಜಯಲಕ್ಷ್ಮಿ ಅವರ ಭ್ರಷ್ಟಾಚಾರದ ವಿರುದ್ದ ದೂರು ನೀಡಿ 50 ದಿನ ಕಳೆದರೂ ಯಾವುದೇ ಕ್ರಮ ವಹಿಸಿಲ್ಲ ಎಂದು ಆರೋಪಿಸಿ ಎಪಿಎಂಸಿ ಕಚೇರಿ ಎದುರು ಶುಕ್ರವಾರ ಜೆ.ಎನ್.ಜಿ ತರಕಾರಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಧರಣಿ ನಡೆಸಿ ಎಪಿಎಂಸಿ ಸಹಾಯಕ ನಿರ್ದೇಶಕ ರವಿಕುಮಾರ್ ಅವರಿಗೆ ಮನವಿ ನೀಡಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಂಡಿ ಮಾಲೀಕ ಜಿ.ಬಿ.ಆರ್ ಸತೀಶ್ ಮಾತನಾಡಿ, ಎಪಿಎಂಸಿಯಲ್ಲಿ ರೈತರು, ಮಂಡಿ ಮಾಲೀಕರು ಹಾಗೂ ದಲ್ಲಾಳಿಗಳ ಮಾರುಕಟ್ಟೆಗೆ ಸಂಬಂಧಿಸಿದಂತೆ ಯಾವುದೇ ಕೆಲಸಗಳು ಆಗಬೇಕಾದರೂ ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ಅವರಿಗೆ ಲಂಚ ನೀಡಬೇಕಾಗಿದೆ. ಇದಕ್ಕೆ ಸಂಬಂಧಿಸಿದ ಲಂಚದ ದಾಖಲೆಗಳು ಸಹ ಇದ್ದು, ಈ ವ್ಯವಸ್ಥೆಗೆ ಕಡಿವಾಣ ಹಾಕಬೇಕೆಂದು ಸಂಬಂಧಿಸಿದಂತೆ ಅಧಿಕಾರಿಗಳಿಗೆ ದೂರು ನೀಡಿದ್ದು ಅಧಿಕಾರಿಗಳು ಬಂದು ಕಚೇರಿಯಲ್ಲಿ ಪರಿಶೀಲನೆ ನಡೆಸಲಾಗಿದೆ ಹೊರತು ಅವರ ವಿರುದ್ಧ ಯಾವುದೇ ಕ್ರಮವಾಗಿಲ್ಲ ಎಂದು ದೂರಿದರು.
ಈ ಸಂದರ್ಭದಲ್ಲಿ ಸಂಘದ ಮುಖಂಡ ಎಪಿಎಂಸಿ ಪುಟ್ಟುರಾಜು ಮಾತನಾಡಿ, ಎಪಿಎಂಸಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ದೂರು ನೀಡಿದ ಪರಿಣಾಮವಾಗಿ ಯಾವುದೇ ಕೆಲಸ ಆಗಬೇಕಾದರೆ ದೂರಿನ ನೆಪದಲ್ಲಿ ನಮ್ಮಗಳ ಮೇಲೆ ವಿನಾಕಾರಣ ಕಿರುಕುಳ ನೀಡುತ್ತಾರೆ. ಸರಕಾರ ನಿಗದಿಪಡಿಸಿದ ಧರಕ್ಕಿಂತ ಹೆಚ್ಚಿನ ಹಣವನ್ನು ಅಧಿಕಾರಿಗಳಿಗೆ ನೀಡಬೇಕು ಇದಕ್ಕೆ ಸಂಬಂಧಿಸಿದಂತೆ ದಾಖಲೆ ಸಮೇತವಾಗಿ ಮೇಲಿನ ಅಧಿಕಾರಿಗಳಿಗೆ ಕೊಟ್ಟರು ಇಂತಹ ಭ್ರಷ್ಟ ಅಧಿಕಾರಿಯನ್ನು ಇನ್ನೂ ಇಲ್ಲೇ ಉಳಿಸಿಕೊಂಡು ಇದ್ದಾರೆ ಎಂದು ದೂರಿದರು.
ನಮ್ಮಲ್ಲಿ ದಲ್ಲಾಳರ ಪರವಾನಗಿ ಪಡೆಯಲು 20 ಸಾವಿರದಿಂದ 40 ಸಾವಿರದಷ್ಟು ಹಣವನ್ನು ಜೊತೆಗೆ
ವ್ಯಕ್ತಿಗೆ ಅನುಗುಣವಾಗಿ ಲಂಚ ಕೊಡಬೇಕು. ಕೊಡದೇ ಹೋದರೆ ಯಾವುದೇ ಕೆಲಸವು ಮಾಡಿಕೊಡುವುದಿಲ್ಲ ಎಂದು ನೇರವಾಗಿ ಹೇಳುತ್ತಾರೆ. ಎಪಿಎಂಸಿ ಆವರಣದ ಒಳಗಡೆ ಜಾಗದ ಸಮಸ್ಯೆಯಿಂದ ಸುಮಾರು 63 ಜನ ತರಕಾರಿ ಮಂಡಿ ಮಾಲೀಕರು ನಮ್ಮ ಫೆಡರೇಶನ್ ಜಾಗದಲ್ಲಿ ಇದ್ದು, ಅದಕ್ಕೆ ಸೌಕರ್ಯಗಳನ್ನು ಒದಗಿಸುವಂತೆ ಮನವಿ ಮಾಡಿದರೂ ಆ ಜಾಗದಲ್ಲಿ ಅಭಿವೃದ್ಧಿ ಮಾಡಲು ಅವಕಾಶವಿಲ್ಲ ಎಂದವರು, ನಾವು ಮಾಡಿದ ಅಭಿವೃದ್ಧಿಗೆ ಇಲಾಖೆಯ ಕಡೆಯಿಂದ ಕಾಮಗಾರಿಗಳಿಗೆ ಬಿಲ್ ಮಾಡಿಕೊಂಡಿದ್ದಾರೆ. ಎಪಿಎಂಸಿಯ ಅಭಿವೃದ್ಧಿ ಕೆಲಸಗಳು ಬಗ್ಗೆ ಮಾಹಿತಿ ಪಡೆದು ತನಿಖೆ ಮಾಡಿಸಿದರೆ ಇನ್ನಷ್ಟು ಸತ್ಯ ಬಯಲಿಗೆ ಬರಲಿದೆ ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜೆ.ಎನ್.ಜಿ ತರಕಾರಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮರೇಶ್ ಮಾತನಾಡಿ, ಎಪಿಎಂಸಿ ಭ್ರಷ್ಟಾಚಾರದ ಬಗ್ಗೆ ಮೇಲಿನ ಅಧಿಕಾರಿಗಳು ಎಚ್ಚತ್ತುಕೊಂಡು ಕಾರ್ಯದರ್ಶಿ ವಿಜಯಲಕ್ಷ್ಮಿ ಅವರನ್ನು ವಜಾಗೊಳಿಸಬೇಕು. ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಎಲ್ಲಾ ಮಂಡಿ ಮಾಲೀಕರು, ವ್ಯಾಪಾರಸ್ಥರು ಹಾಗೂ ಕೂಲಿ ಕಾರ್ಮಿಕರು ತಮ್ಮ ವೈವಾಟನ್ನು ಸ್ಥಗಿತಗೊಳಿಸಿ ಎಪಿಎಂಸಿ ಮುಂದೆ ಅನಿರ್ಧಿಷ್ಟಾವಧಿ ಧರಣಿ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್, ತರಕಾರಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ವೆಂಕಟೇಗೌಡ, ಖಜಾಂಚಿ ನಾಗೇಶ್, ಉಪಾಧ್ಯಕ್ಷ ಗೋಪಾಲಕೃಷ್ಣ, ಪದಾಧಿಕಾರಿಗಳಾದ ವೆಂಕಟರಾಮ್, ವೆಂಕಟೇಶ್, ಮುನಿರಾಜು, ಮಂಜುನಾಥರೆಡ್ಡಿ, ಶ್ರೀನಿವಾಸ್, ರೆಡ್ಡೆಪ್ಪ, ನವೀನ್ ಮುಂತಾದವರು ಇದ್ದರು
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…
ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…
ಹೀಟ್ ಸ್ಟ್ರೋಕ್ನಿಂದಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೀದರ್ನ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ... ಮೃತರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್…
ಬಸವ ಜಯಂತಿಯೋ, ಅಕ್ಷಯ ತೃತೀಯವೋ...... ಅದೃಷ್ಟವಂತರಲ್ಲವೇ ನಾವು,..... ನಮ್ಮ ಹಿಂದಿನ ತಲೆಮಾರಿನವರಿಗೆ ಹೋಲಿಸಿಕೊಂಡರೆ ಎಷ್ಟೊಂದು ಅದೃಷ್ಟವಂತರು ನಾವು. ಎಲ್ಲ ವಿಷಯದಲ್ಲೂ…
ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿದ್ದ ಪತ್ನಿ, ಪ್ರಿಯಕರನನ್ನು ಇದೀಗ ಬಂಧನ ಮಾಡಲಾಗಿದೆ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ…