Categories: ಕೋಲಾರ

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ

ಕೋಲಾರ: ನಗರದ ಹೊರವಲಯದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿನ ಕಾರ್ಯದರ್ಶಿ ವಿಜಯಲಕ್ಷ್ಮಿ ಅವರ ಭ್ರಷ್ಟಾಚಾರದ ವಿರುದ್ದ ದೂರು ನೀಡಿ 50 ದಿನ ಕಳೆದರೂ ಯಾವುದೇ ಕ್ರಮ ವಹಿಸಿಲ್ಲ ಎಂದು ಆರೋಪಿಸಿ ಎಪಿಎಂಸಿ ಕಚೇರಿ ಎದುರು ಶುಕ್ರವಾರ ಜೆ.ಎನ್.ಜಿ ತರಕಾರಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಧರಣಿ ನಡೆಸಿ ಎಪಿಎಂಸಿ ಸಹಾಯಕ ನಿರ್ದೇಶಕ ರವಿಕುಮಾರ್ ಅವರಿಗೆ ಮನವಿ ನೀಡಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಂಡಿ ಮಾಲೀಕ ಜಿ.ಬಿ.ಆರ್ ಸತೀಶ್ ಮಾತನಾಡಿ, ಎಪಿಎಂಸಿಯಲ್ಲಿ ರೈತರು, ಮಂಡಿ ಮಾಲೀಕರು ಹಾಗೂ ದಲ್ಲಾಳಿಗಳ ಮಾರುಕಟ್ಟೆಗೆ ಸಂಬಂಧಿಸಿದಂತೆ ಯಾವುದೇ ಕೆಲಸಗಳು ಆಗಬೇಕಾದರೂ ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ಅವರಿಗೆ ಲಂಚ ನೀಡಬೇಕಾಗಿದೆ. ಇದಕ್ಕೆ ಸಂಬಂಧಿಸಿದ ಲಂಚದ ದಾಖಲೆಗಳು ಸಹ ಇದ್ದು, ಈ ವ್ಯವಸ್ಥೆಗೆ ಕಡಿವಾಣ ಹಾಕಬೇಕೆಂದು ಸಂಬಂಧಿಸಿದಂತೆ ಅಧಿಕಾರಿಗಳಿಗೆ ದೂರು ನೀಡಿದ್ದು ಅಧಿಕಾರಿಗಳು ಬಂದು ಕಚೇರಿಯಲ್ಲಿ ಪರಿಶೀಲನೆ ನಡೆಸಲಾಗಿದೆ ಹೊರತು ಅವರ ವಿರುದ್ಧ ಯಾವುದೇ ಕ್ರಮವಾಗಿಲ್ಲ ಎಂದು ದೂರಿದರು.

ಈ ಸಂದರ್ಭದಲ್ಲಿ ಸಂಘದ ಮುಖಂಡ ಎಪಿಎಂಸಿ ಪುಟ್ಟುರಾಜು ಮಾತನಾಡಿ, ಎಪಿಎಂಸಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ದೂರು ನೀಡಿದ ಪರಿಣಾಮವಾಗಿ ಯಾವುದೇ ಕೆಲಸ ಆಗಬೇಕಾದರೆ ದೂರಿನ ನೆಪದಲ್ಲಿ ನಮ್ಮಗಳ ಮೇಲೆ ವಿನಾಕಾರಣ ಕಿರುಕುಳ ನೀಡುತ್ತಾರೆ. ಸರಕಾರ ನಿಗದಿಪಡಿಸಿದ ಧರಕ್ಕಿಂತ ಹೆಚ್ಚಿನ ಹಣವನ್ನು ಅಧಿಕಾರಿಗಳಿಗೆ ನೀಡಬೇಕು ಇದಕ್ಕೆ ಸಂಬಂಧಿಸಿದಂತೆ ದಾಖಲೆ ಸಮೇತವಾಗಿ ಮೇಲಿನ ಅಧಿಕಾರಿಗಳಿಗೆ ಕೊಟ್ಟರು ಇಂತಹ ಭ್ರಷ್ಟ ಅಧಿಕಾರಿಯನ್ನು ಇನ್ನೂ ಇಲ್ಲೇ ಉಳಿಸಿಕೊಂಡು ಇದ್ದಾರೆ ಎಂದು ದೂರಿದರು.

ನಮ್ಮಲ್ಲಿ ದಲ್ಲಾಳರ ಪರವಾನಗಿ ಪಡೆಯಲು 20 ಸಾವಿರದಿಂದ 40 ಸಾವಿರದಷ್ಟು ಹಣವನ್ನು ಜೊತೆಗೆ
ವ್ಯಕ್ತಿಗೆ ಅನುಗುಣವಾಗಿ ಲಂಚ ಕೊಡಬೇಕು. ಕೊಡದೇ ಹೋದರೆ ಯಾವುದೇ ಕೆಲಸವು ಮಾಡಿಕೊಡುವುದಿಲ್ಲ ಎಂದು ನೇರವಾಗಿ ಹೇಳುತ್ತಾರೆ. ಎಪಿಎಂಸಿ ಆವರಣದ ಒಳಗಡೆ ಜಾಗದ ಸಮಸ್ಯೆಯಿಂದ ಸುಮಾರು 63 ಜನ ತರಕಾರಿ ಮಂಡಿ ಮಾಲೀಕರು ನಮ್ಮ ಫೆಡರೇಶನ್ ಜಾಗದಲ್ಲಿ ಇದ್ದು, ಅದಕ್ಕೆ ಸೌಕರ್ಯಗಳನ್ನು ಒದಗಿಸುವಂತೆ ಮನವಿ ಮಾಡಿದರೂ ಆ ಜಾಗದಲ್ಲಿ ಅಭಿವೃದ್ಧಿ ಮಾಡಲು ಅವಕಾಶವಿಲ್ಲ ಎಂದವರು, ನಾವು ಮಾಡಿದ ಅಭಿವೃದ್ಧಿಗೆ ಇಲಾಖೆಯ ಕಡೆಯಿಂದ ಕಾಮಗಾರಿಗಳಿಗೆ ಬಿಲ್ ಮಾಡಿಕೊಂಡಿದ್ದಾರೆ. ಎಪಿಎಂಸಿಯ ಅಭಿವೃದ್ಧಿ ಕೆಲಸಗಳು ಬಗ್ಗೆ ಮಾಹಿತಿ ಪಡೆದು ತನಿಖೆ ಮಾಡಿಸಿದರೆ ಇನ್ನಷ್ಟು ಸತ್ಯ ಬಯಲಿಗೆ ಬರಲಿದೆ ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜೆ.ಎನ್.ಜಿ ತರಕಾರಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮರೇಶ್ ಮಾತನಾಡಿ, ಎಪಿಎಂಸಿ ಭ್ರಷ್ಟಾಚಾರದ ಬಗ್ಗೆ ಮೇಲಿನ ಅಧಿಕಾರಿಗಳು ಎಚ್ಚತ್ತುಕೊಂಡು ಕಾರ್ಯದರ್ಶಿ ವಿಜಯಲಕ್ಷ್ಮಿ ಅವರನ್ನು ವಜಾಗೊಳಿಸಬೇಕು. ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಎಲ್ಲಾ ಮಂಡಿ ಮಾಲೀಕರು, ವ್ಯಾಪಾರಸ್ಥರು ಹಾಗೂ ಕೂಲಿ ಕಾರ್ಮಿಕರು ತಮ್ಮ ವೈವಾಟನ್ನು ಸ್ಥಗಿತಗೊಳಿಸಿ ಎಪಿಎಂಸಿ ಮುಂದೆ ಅನಿರ್ಧಿಷ್ಟಾವಧಿ ಧರಣಿ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್, ತರಕಾರಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ವೆಂಕಟೇಗೌಡ, ಖಜಾಂಚಿ ನಾಗೇಶ್, ಉಪಾಧ್ಯಕ್ಷ ಗೋಪಾಲಕೃಷ್ಣ, ಪದಾಧಿಕಾರಿಗಳಾದ ವೆಂಕಟರಾಮ್, ವೆಂಕಟೇಶ್, ಮುನಿರಾಜು, ಮಂಜುನಾಥರೆಡ್ಡಿ, ಶ್ರೀನಿವಾಸ್, ರೆಡ್ಡೆಪ್ಪ, ನವೀನ್ ಮುಂತಾದವರು ಇದ್ದರು

Ramesh Babu

Journalist

Recent Posts

ಬಿಜೆಪಿಗೆ ಅಧಿಕಾರ ಸಿಕ್ಕಾಗ ಒಬಿಸಿ, ದಲಿತರ ರಾಜಕೀಯ ಪ್ರಾತಿನಿಧ್ಯ ಏಕೆ ನೆನಪಾಗಲಿಲ್ಲ?- ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…

2 minutes ago

ಡಾ.ಜಿ.ಪರಮೇಶ್ವರ್ ಗೆ ಉಪಮುಖ್ಯಮಂತ್ರಿ ಸ್ಥಾನ.?: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ ಸಿದ್ದರಾಮಯ್ಯ ಸುಳಿವು

ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…

18 minutes ago

ಪ್ರಮಾಣ ವಚನ ಅಥವಾ ಪ್ರತಿಜ್ಞಾ ವಿಧಿ……. ಇವು ಆತ್ಮಸಾಕ್ಷಿಯ ನುಡಿಗಳೇ – ಸಂವಿಧಾನಾತ್ಮಕ ಕರ್ತವ್ಯವೇ – ಒಂದು ಒಣ ವಿಧಿ ವಿಧಾನವೇ…….

ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…

4 hours ago

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

18 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

18 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

18 hours ago