ಕೋಲಾರ: ನಗರದ ಹೊರವಲಯದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿನ ಕಾರ್ಯದರ್ಶಿ ವಿಜಯಲಕ್ಷ್ಮಿ ಅವರ ಭ್ರಷ್ಟಾಚಾರದ ವಿರುದ್ದ ದೂರು ನೀಡಿ 50 ದಿನ ಕಳೆದರೂ ಯಾವುದೇ ಕ್ರಮ ವಹಿಸಿಲ್ಲ ಎಂದು ಆರೋಪಿಸಿ ಎಪಿಎಂಸಿ ಕಚೇರಿ ಎದುರು ಶುಕ್ರವಾರ ಜೆ.ಎನ್.ಜಿ ತರಕಾರಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಧರಣಿ ನಡೆಸಿ ಎಪಿಎಂಸಿ ಸಹಾಯಕ ನಿರ್ದೇಶಕ ರವಿಕುಮಾರ್ ಅವರಿಗೆ ಮನವಿ ನೀಡಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಂಡಿ ಮಾಲೀಕ ಜಿ.ಬಿ.ಆರ್ ಸತೀಶ್ ಮಾತನಾಡಿ, ಎಪಿಎಂಸಿಯಲ್ಲಿ ರೈತರು, ಮಂಡಿ ಮಾಲೀಕರು ಹಾಗೂ ದಲ್ಲಾಳಿಗಳ ಮಾರುಕಟ್ಟೆಗೆ ಸಂಬಂಧಿಸಿದಂತೆ ಯಾವುದೇ ಕೆಲಸಗಳು ಆಗಬೇಕಾದರೂ ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ಅವರಿಗೆ ಲಂಚ ನೀಡಬೇಕಾಗಿದೆ. ಇದಕ್ಕೆ ಸಂಬಂಧಿಸಿದ ಲಂಚದ ದಾಖಲೆಗಳು ಸಹ ಇದ್ದು, ಈ ವ್ಯವಸ್ಥೆಗೆ ಕಡಿವಾಣ ಹಾಕಬೇಕೆಂದು ಸಂಬಂಧಿಸಿದಂತೆ ಅಧಿಕಾರಿಗಳಿಗೆ ದೂರು ನೀಡಿದ್ದು ಅಧಿಕಾರಿಗಳು ಬಂದು ಕಚೇರಿಯಲ್ಲಿ ಪರಿಶೀಲನೆ ನಡೆಸಲಾಗಿದೆ ಹೊರತು ಅವರ ವಿರುದ್ಧ ಯಾವುದೇ ಕ್ರಮವಾಗಿಲ್ಲ ಎಂದು ದೂರಿದರು.
ಈ ಸಂದರ್ಭದಲ್ಲಿ ಸಂಘದ ಮುಖಂಡ ಎಪಿಎಂಸಿ ಪುಟ್ಟುರಾಜು ಮಾತನಾಡಿ, ಎಪಿಎಂಸಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ದೂರು ನೀಡಿದ ಪರಿಣಾಮವಾಗಿ ಯಾವುದೇ ಕೆಲಸ ಆಗಬೇಕಾದರೆ ದೂರಿನ ನೆಪದಲ್ಲಿ ನಮ್ಮಗಳ ಮೇಲೆ ವಿನಾಕಾರಣ ಕಿರುಕುಳ ನೀಡುತ್ತಾರೆ. ಸರಕಾರ ನಿಗದಿಪಡಿಸಿದ ಧರಕ್ಕಿಂತ ಹೆಚ್ಚಿನ ಹಣವನ್ನು ಅಧಿಕಾರಿಗಳಿಗೆ ನೀಡಬೇಕು ಇದಕ್ಕೆ ಸಂಬಂಧಿಸಿದಂತೆ ದಾಖಲೆ ಸಮೇತವಾಗಿ ಮೇಲಿನ ಅಧಿಕಾರಿಗಳಿಗೆ ಕೊಟ್ಟರು ಇಂತಹ ಭ್ರಷ್ಟ ಅಧಿಕಾರಿಯನ್ನು ಇನ್ನೂ ಇಲ್ಲೇ ಉಳಿಸಿಕೊಂಡು ಇದ್ದಾರೆ ಎಂದು ದೂರಿದರು.
ನಮ್ಮಲ್ಲಿ ದಲ್ಲಾಳರ ಪರವಾನಗಿ ಪಡೆಯಲು 20 ಸಾವಿರದಿಂದ 40 ಸಾವಿರದಷ್ಟು ಹಣವನ್ನು ಜೊತೆಗೆ
ವ್ಯಕ್ತಿಗೆ ಅನುಗುಣವಾಗಿ ಲಂಚ ಕೊಡಬೇಕು. ಕೊಡದೇ ಹೋದರೆ ಯಾವುದೇ ಕೆಲಸವು ಮಾಡಿಕೊಡುವುದಿಲ್ಲ ಎಂದು ನೇರವಾಗಿ ಹೇಳುತ್ತಾರೆ. ಎಪಿಎಂಸಿ ಆವರಣದ ಒಳಗಡೆ ಜಾಗದ ಸಮಸ್ಯೆಯಿಂದ ಸುಮಾರು 63 ಜನ ತರಕಾರಿ ಮಂಡಿ ಮಾಲೀಕರು ನಮ್ಮ ಫೆಡರೇಶನ್ ಜಾಗದಲ್ಲಿ ಇದ್ದು, ಅದಕ್ಕೆ ಸೌಕರ್ಯಗಳನ್ನು ಒದಗಿಸುವಂತೆ ಮನವಿ ಮಾಡಿದರೂ ಆ ಜಾಗದಲ್ಲಿ ಅಭಿವೃದ್ಧಿ ಮಾಡಲು ಅವಕಾಶವಿಲ್ಲ ಎಂದವರು, ನಾವು ಮಾಡಿದ ಅಭಿವೃದ್ಧಿಗೆ ಇಲಾಖೆಯ ಕಡೆಯಿಂದ ಕಾಮಗಾರಿಗಳಿಗೆ ಬಿಲ್ ಮಾಡಿಕೊಂಡಿದ್ದಾರೆ. ಎಪಿಎಂಸಿಯ ಅಭಿವೃದ್ಧಿ ಕೆಲಸಗಳು ಬಗ್ಗೆ ಮಾಹಿತಿ ಪಡೆದು ತನಿಖೆ ಮಾಡಿಸಿದರೆ ಇನ್ನಷ್ಟು ಸತ್ಯ ಬಯಲಿಗೆ ಬರಲಿದೆ ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜೆ.ಎನ್.ಜಿ ತರಕಾರಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮರೇಶ್ ಮಾತನಾಡಿ, ಎಪಿಎಂಸಿ ಭ್ರಷ್ಟಾಚಾರದ ಬಗ್ಗೆ ಮೇಲಿನ ಅಧಿಕಾರಿಗಳು ಎಚ್ಚತ್ತುಕೊಂಡು ಕಾರ್ಯದರ್ಶಿ ವಿಜಯಲಕ್ಷ್ಮಿ ಅವರನ್ನು ವಜಾಗೊಳಿಸಬೇಕು. ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಎಲ್ಲಾ ಮಂಡಿ ಮಾಲೀಕರು, ವ್ಯಾಪಾರಸ್ಥರು ಹಾಗೂ ಕೂಲಿ ಕಾರ್ಮಿಕರು ತಮ್ಮ ವೈವಾಟನ್ನು ಸ್ಥಗಿತಗೊಳಿಸಿ ಎಪಿಎಂಸಿ ಮುಂದೆ ಅನಿರ್ಧಿಷ್ಟಾವಧಿ ಧರಣಿ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್, ತರಕಾರಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ವೆಂಕಟೇಗೌಡ, ಖಜಾಂಚಿ ನಾಗೇಶ್, ಉಪಾಧ್ಯಕ್ಷ ಗೋಪಾಲಕೃಷ್ಣ, ಪದಾಧಿಕಾರಿಗಳಾದ ವೆಂಕಟರಾಮ್, ವೆಂಕಟೇಶ್, ಮುನಿರಾಜು, ಮಂಜುನಾಥರೆಡ್ಡಿ, ಶ್ರೀನಿವಾಸ್, ರೆಡ್ಡೆಪ್ಪ, ನವೀನ್ ಮುಂತಾದವರು ಇದ್ದರು
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…