Categories: ಕೋಲಾರ

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ

ಕೋಲಾರ: ನಗರದ ಹೊರವಲಯದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿನ ಕಾರ್ಯದರ್ಶಿ ವಿಜಯಲಕ್ಷ್ಮಿ ಅವರ ಭ್ರಷ್ಟಾಚಾರದ ವಿರುದ್ದ ದೂರು ನೀಡಿ 50 ದಿನ ಕಳೆದರೂ ಯಾವುದೇ ಕ್ರಮ ವಹಿಸಿಲ್ಲ ಎಂದು ಆರೋಪಿಸಿ ಎಪಿಎಂಸಿ ಕಚೇರಿ ಎದುರು ಶುಕ್ರವಾರ ಜೆ.ಎನ್.ಜಿ ತರಕಾರಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಧರಣಿ ನಡೆಸಿ ಎಪಿಎಂಸಿ ಸಹಾಯಕ ನಿರ್ದೇಶಕ ರವಿಕುಮಾರ್ ಅವರಿಗೆ ಮನವಿ ನೀಡಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಂಡಿ ಮಾಲೀಕ ಜಿ.ಬಿ.ಆರ್ ಸತೀಶ್ ಮಾತನಾಡಿ, ಎಪಿಎಂಸಿಯಲ್ಲಿ ರೈತರು, ಮಂಡಿ ಮಾಲೀಕರು ಹಾಗೂ ದಲ್ಲಾಳಿಗಳ ಮಾರುಕಟ್ಟೆಗೆ ಸಂಬಂಧಿಸಿದಂತೆ ಯಾವುದೇ ಕೆಲಸಗಳು ಆಗಬೇಕಾದರೂ ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ಅವರಿಗೆ ಲಂಚ ನೀಡಬೇಕಾಗಿದೆ. ಇದಕ್ಕೆ ಸಂಬಂಧಿಸಿದ ಲಂಚದ ದಾಖಲೆಗಳು ಸಹ ಇದ್ದು, ಈ ವ್ಯವಸ್ಥೆಗೆ ಕಡಿವಾಣ ಹಾಕಬೇಕೆಂದು ಸಂಬಂಧಿಸಿದಂತೆ ಅಧಿಕಾರಿಗಳಿಗೆ ದೂರು ನೀಡಿದ್ದು ಅಧಿಕಾರಿಗಳು ಬಂದು ಕಚೇರಿಯಲ್ಲಿ ಪರಿಶೀಲನೆ ನಡೆಸಲಾಗಿದೆ ಹೊರತು ಅವರ ವಿರುದ್ಧ ಯಾವುದೇ ಕ್ರಮವಾಗಿಲ್ಲ ಎಂದು ದೂರಿದರು.

ಈ ಸಂದರ್ಭದಲ್ಲಿ ಸಂಘದ ಮುಖಂಡ ಎಪಿಎಂಸಿ ಪುಟ್ಟುರಾಜು ಮಾತನಾಡಿ, ಎಪಿಎಂಸಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ದೂರು ನೀಡಿದ ಪರಿಣಾಮವಾಗಿ ಯಾವುದೇ ಕೆಲಸ ಆಗಬೇಕಾದರೆ ದೂರಿನ ನೆಪದಲ್ಲಿ ನಮ್ಮಗಳ ಮೇಲೆ ವಿನಾಕಾರಣ ಕಿರುಕುಳ ನೀಡುತ್ತಾರೆ. ಸರಕಾರ ನಿಗದಿಪಡಿಸಿದ ಧರಕ್ಕಿಂತ ಹೆಚ್ಚಿನ ಹಣವನ್ನು ಅಧಿಕಾರಿಗಳಿಗೆ ನೀಡಬೇಕು ಇದಕ್ಕೆ ಸಂಬಂಧಿಸಿದಂತೆ ದಾಖಲೆ ಸಮೇತವಾಗಿ ಮೇಲಿನ ಅಧಿಕಾರಿಗಳಿಗೆ ಕೊಟ್ಟರು ಇಂತಹ ಭ್ರಷ್ಟ ಅಧಿಕಾರಿಯನ್ನು ಇನ್ನೂ ಇಲ್ಲೇ ಉಳಿಸಿಕೊಂಡು ಇದ್ದಾರೆ ಎಂದು ದೂರಿದರು.

ನಮ್ಮಲ್ಲಿ ದಲ್ಲಾಳರ ಪರವಾನಗಿ ಪಡೆಯಲು 20 ಸಾವಿರದಿಂದ 40 ಸಾವಿರದಷ್ಟು ಹಣವನ್ನು ಜೊತೆಗೆ
ವ್ಯಕ್ತಿಗೆ ಅನುಗುಣವಾಗಿ ಲಂಚ ಕೊಡಬೇಕು. ಕೊಡದೇ ಹೋದರೆ ಯಾವುದೇ ಕೆಲಸವು ಮಾಡಿಕೊಡುವುದಿಲ್ಲ ಎಂದು ನೇರವಾಗಿ ಹೇಳುತ್ತಾರೆ. ಎಪಿಎಂಸಿ ಆವರಣದ ಒಳಗಡೆ ಜಾಗದ ಸಮಸ್ಯೆಯಿಂದ ಸುಮಾರು 63 ಜನ ತರಕಾರಿ ಮಂಡಿ ಮಾಲೀಕರು ನಮ್ಮ ಫೆಡರೇಶನ್ ಜಾಗದಲ್ಲಿ ಇದ್ದು, ಅದಕ್ಕೆ ಸೌಕರ್ಯಗಳನ್ನು ಒದಗಿಸುವಂತೆ ಮನವಿ ಮಾಡಿದರೂ ಆ ಜಾಗದಲ್ಲಿ ಅಭಿವೃದ್ಧಿ ಮಾಡಲು ಅವಕಾಶವಿಲ್ಲ ಎಂದವರು, ನಾವು ಮಾಡಿದ ಅಭಿವೃದ್ಧಿಗೆ ಇಲಾಖೆಯ ಕಡೆಯಿಂದ ಕಾಮಗಾರಿಗಳಿಗೆ ಬಿಲ್ ಮಾಡಿಕೊಂಡಿದ್ದಾರೆ. ಎಪಿಎಂಸಿಯ ಅಭಿವೃದ್ಧಿ ಕೆಲಸಗಳು ಬಗ್ಗೆ ಮಾಹಿತಿ ಪಡೆದು ತನಿಖೆ ಮಾಡಿಸಿದರೆ ಇನ್ನಷ್ಟು ಸತ್ಯ ಬಯಲಿಗೆ ಬರಲಿದೆ ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜೆ.ಎನ್.ಜಿ ತರಕಾರಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮರೇಶ್ ಮಾತನಾಡಿ, ಎಪಿಎಂಸಿ ಭ್ರಷ್ಟಾಚಾರದ ಬಗ್ಗೆ ಮೇಲಿನ ಅಧಿಕಾರಿಗಳು ಎಚ್ಚತ್ತುಕೊಂಡು ಕಾರ್ಯದರ್ಶಿ ವಿಜಯಲಕ್ಷ್ಮಿ ಅವರನ್ನು ವಜಾಗೊಳಿಸಬೇಕು. ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಎಲ್ಲಾ ಮಂಡಿ ಮಾಲೀಕರು, ವ್ಯಾಪಾರಸ್ಥರು ಹಾಗೂ ಕೂಲಿ ಕಾರ್ಮಿಕರು ತಮ್ಮ ವೈವಾಟನ್ನು ಸ್ಥಗಿತಗೊಳಿಸಿ ಎಪಿಎಂಸಿ ಮುಂದೆ ಅನಿರ್ಧಿಷ್ಟಾವಧಿ ಧರಣಿ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್, ತರಕಾರಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ವೆಂಕಟೇಗೌಡ, ಖಜಾಂಚಿ ನಾಗೇಶ್, ಉಪಾಧ್ಯಕ್ಷ ಗೋಪಾಲಕೃಷ್ಣ, ಪದಾಧಿಕಾರಿಗಳಾದ ವೆಂಕಟರಾಮ್, ವೆಂಕಟೇಶ್, ಮುನಿರಾಜು, ಮಂಜುನಾಥರೆಡ್ಡಿ, ಶ್ರೀನಿವಾಸ್, ರೆಡ್ಡೆಪ್ಪ, ನವೀನ್ ಮುಂತಾದವರು ಇದ್ದರು

Ramesh Babu

Journalist

Recent Posts

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

39 minutes ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

2 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

3 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

6 hours ago

ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಸೌಕರ್ಯ ಕೊರತೆ: ಜನ ಹೈರಾಣ

ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…

9 hours ago

ಮಾದಕ ದ್ರವ್ಯ ಮುಕ್ತ ಕರ್ನಾಟಕ ನಿರ್ಮಾಣಕ್ಕಾಗಿ ಕಟ್ಟುನಿಟ್ಟಿನ ಕ್ರಮ

ಇಂದು ವಿಕಾಸಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಹಿರಿಯ ಪೊಲೀಸ್‌ ಅಧಿಕಾರಿಗಳು ಹಾಗೂ ವಿವಿಧ ಇಲಾಖಾ ಮುಖ್ಯಸ್ಥರ ಸಮ್ಮುಖದಲ್ಲಿ ನಡೆದ ಪರಿಶೀಲನಾ…

21 hours ago